Homeಕರ್ನಾಟಕ"ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು": ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ...

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ ಒತ್ತಡವಿದೆ ಎನ್ನುವ ಮಾತು ಕೇಳಿಸಿಕೊಂಡೆ. ಕರಾವಳಿ ಕಿಡಿ ಕಿಡಿಯಾದೀತು. ಪ್ರಭಾಕರ ಭಟ್ಟರ ಪ್ರಭಾವ ಏನೂ ಎನ್ನುವುದನ್ನು ಪ್ರದರ್ಶನ ಮಾಡುವ ರಿಸ್ಕಿಗೆ ಯಾರೂ ಕೈ ಹಾಕದೇ ಇರೋದು ಸೇಫ್! ಕರಾವಳಿ ಕರ್ನಾಟಕ ಶಾಂತಿಯಲ್ಲಿರಲಿ ಎನ್ನುವುದು ಸಲಹೆ” ಎಂದು ಗಿಳಿಯಾರ್ ಪೋಸ್ಟ್ ಹಾಕಿದ್ದು, ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ಕೊಟ್ಟಿರುವ ಆತನ ವಿರುದ್ದ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಸಂತ್ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಕೆಲ ಪೋಸ್ಟ್‌ಗಳು ಮತ್ತು ಸ್ಕ್ರೀನ್‌ ಶಾಟ್‌ಗಳು ಕೆಳಗೆ ನೋಡಬಹುದು.

ಇನ್ನು, Divyath K Poojary ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು “ಹೆಣ್ಣು ಮಕ್ಕಳಿಗೆ ರೆಸ್ಪೆಕ್ಟ್ ಕೊಡದ ಅಯೋಗ್ಯರು ಇಂತವರು. ಇವನ ಭಾಷಣ ಕೇಳಿ ಅರ್ಧದಿಂದ ಹೋದವ ನಾನು. ಧರ್ಮವನ್ನು ದ್ವೇಷ ಮಾಡಲು ಕಲಿಸೋ ಇವನಿಂದ ನಾವೇನು ಕಲಿಯಬೇಕಿಲ್ಲ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Musthafa Mf ಎಂಬ ಫೇಸ್‌ಬುಕ್ ಬಳಕೆದಾರ “ನೀನು ಯಾವ ಸೀಮೆಯ ಪತ್ರಕರ್ತ ಮೊದಲು ಹೇಳು. ಮೊದಲು ಕಾನೂನಿಗೆ ಗೌರವ ಕೊಡೋದು ಕಲಿ. ಸುಪ್ರೀಂ ಕೋರ್ಟ್ ಏನು ಹೇಳಿದೆ ಗೊತ್ತಾ, ಅದು ಮೊದಲು ತಿಳ್ಕೋ. ಒಂದು ಧರ್ಮವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡುವನನ್ನು ಬಂಧನ ಮಾಡಬೇಕು. ಅದರ ಆಯೋಜಕರನ್ನು ಬಂಧಿಸಬೇಕು. ಈತ ಕಾನೂನಿಗಿಂತ ದೊಡ್ಡವನಲ್ಲ. ನೀ ಮೊದಲು ಪತ್ರಕರ್ತನ ಕೆಲಸ ಮಾಡು. ಹೆದರಿಸುವುದು ಬಿಡು” ಎಂದು ವಸಂತ್ ಗಿಳಿಯಾರ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

Yadava Kuntalapady ಎಂಬ ಬಳಕೆದಾರ “ಬಂಧನ ಮಾಡಿದರೆ ಏನೂ ಆಗೊದಿಲ್ಲ. ಅದು ನಿನ್ನ ಭ್ರಮೆ. ಈಗ ರೋಡಿಗೆ ಬಂದು ಗಲಾಟೆ ಮಾಡಿದರೆ, ಮಾಡಿಸಿದವನು ನೇರ ಹೊಣೆ. ಅವನನ್ನೇ ಒದ್ದು ಒಳಗೆ ಹಾಕುವಂತ ಪ್ರಾಮಾಣಿಕ 2 ಪೋಲಿಸ್ ಅಧಿಕಾರಿಗಳು ಇದ್ದಾರೆ” ಎಂದು ಕಾಮೆಂಟ್‌ ಮಾಡಿದ್ದಾರೆ.

ಆನಂದ ಕುಮಾರ ಹಾಲಗೆರೆ ಎಂಬ ಬಳಕೆದಾರ, “ಜಾಸ್ತಿ ತಲೆಕೆಡಿಸಿ ಇರೋದು ಬೇಡ ಹರಿಪ್ರಸಾದ್ ಗೃಹಮಂತ್ರಿ ಆಗಲಿ ನೋಡು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Sanatan Dharam ಎಂಬ ಫೇಸ್‌ಬುಕ್ ಖಾತೆಯಲ್ಲಿ, “ಈ ಪೋಸ್ಟ್‌ನಲ್ಲಿ ಪ್ರಚೋದನಕಾರಿ ವಿಷಯವಿರುವುದರಿಂದ ನಿಮಗೆ ಅಪಾಯವಾಗಬಹುದು! ಪೋಸ್ಟ್ ಅನ್ನು ಮಾರ್ಪಡಿಸಲು ಪ್ರಯತ್ನಿಸಿ ಎಂದು ಗಿಳಿಯಾರ್‌ ಗೆ ಸಲಹೆ ನೀಡಲಾಗಿದೆ.

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....