Homeಕರ್ನಾಟಕ"ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು": ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ...

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ ಒತ್ತಡವಿದೆ ಎನ್ನುವ ಮಾತು ಕೇಳಿಸಿಕೊಂಡೆ. ಕರಾವಳಿ ಕಿಡಿ ಕಿಡಿಯಾದೀತು. ಪ್ರಭಾಕರ ಭಟ್ಟರ ಪ್ರಭಾವ ಏನೂ ಎನ್ನುವುದನ್ನು ಪ್ರದರ್ಶನ ಮಾಡುವ ರಿಸ್ಕಿಗೆ ಯಾರೂ ಕೈ ಹಾಕದೇ ಇರೋದು ಸೇಫ್! ಕರಾವಳಿ ಕರ್ನಾಟಕ ಶಾಂತಿಯಲ್ಲಿರಲಿ ಎನ್ನುವುದು ಸಲಹೆ” ಎಂದು ಗಿಳಿಯಾರ್ ಪೋಸ್ಟ್ ಹಾಕಿದ್ದು, ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ಕೊಟ್ಟಿರುವ ಆತನ ವಿರುದ್ದ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಸಂತ್ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಕೆಲ ಪೋಸ್ಟ್‌ಗಳು ಮತ್ತು ಸ್ಕ್ರೀನ್‌ ಶಾಟ್‌ಗಳು ಕೆಳಗೆ ನೋಡಬಹುದು.

ಇನ್ನು, Divyath K Poojary ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು “ಹೆಣ್ಣು ಮಕ್ಕಳಿಗೆ ರೆಸ್ಪೆಕ್ಟ್ ಕೊಡದ ಅಯೋಗ್ಯರು ಇಂತವರು. ಇವನ ಭಾಷಣ ಕೇಳಿ ಅರ್ಧದಿಂದ ಹೋದವ ನಾನು. ಧರ್ಮವನ್ನು ದ್ವೇಷ ಮಾಡಲು ಕಲಿಸೋ ಇವನಿಂದ ನಾವೇನು ಕಲಿಯಬೇಕಿಲ್ಲ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Musthafa Mf ಎಂಬ ಫೇಸ್‌ಬುಕ್ ಬಳಕೆದಾರ “ನೀನು ಯಾವ ಸೀಮೆಯ ಪತ್ರಕರ್ತ ಮೊದಲು ಹೇಳು. ಮೊದಲು ಕಾನೂನಿಗೆ ಗೌರವ ಕೊಡೋದು ಕಲಿ. ಸುಪ್ರೀಂ ಕೋರ್ಟ್ ಏನು ಹೇಳಿದೆ ಗೊತ್ತಾ, ಅದು ಮೊದಲು ತಿಳ್ಕೋ. ಒಂದು ಧರ್ಮವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡುವನನ್ನು ಬಂಧನ ಮಾಡಬೇಕು. ಅದರ ಆಯೋಜಕರನ್ನು ಬಂಧಿಸಬೇಕು. ಈತ ಕಾನೂನಿಗಿಂತ ದೊಡ್ಡವನಲ್ಲ. ನೀ ಮೊದಲು ಪತ್ರಕರ್ತನ ಕೆಲಸ ಮಾಡು. ಹೆದರಿಸುವುದು ಬಿಡು” ಎಂದು ವಸಂತ್ ಗಿಳಿಯಾರ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

Yadava Kuntalapady ಎಂಬ ಬಳಕೆದಾರ “ಬಂಧನ ಮಾಡಿದರೆ ಏನೂ ಆಗೊದಿಲ್ಲ. ಅದು ನಿನ್ನ ಭ್ರಮೆ. ಈಗ ರೋಡಿಗೆ ಬಂದು ಗಲಾಟೆ ಮಾಡಿದರೆ, ಮಾಡಿಸಿದವನು ನೇರ ಹೊಣೆ. ಅವನನ್ನೇ ಒದ್ದು ಒಳಗೆ ಹಾಕುವಂತ ಪ್ರಾಮಾಣಿಕ 2 ಪೋಲಿಸ್ ಅಧಿಕಾರಿಗಳು ಇದ್ದಾರೆ” ಎಂದು ಕಾಮೆಂಟ್‌ ಮಾಡಿದ್ದಾರೆ.

ಆನಂದ ಕುಮಾರ ಹಾಲಗೆರೆ ಎಂಬ ಬಳಕೆದಾರ, “ಜಾಸ್ತಿ ತಲೆಕೆಡಿಸಿ ಇರೋದು ಬೇಡ ಹರಿಪ್ರಸಾದ್ ಗೃಹಮಂತ್ರಿ ಆಗಲಿ ನೋಡು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Sanatan Dharam ಎಂಬ ಫೇಸ್‌ಬುಕ್ ಖಾತೆಯಲ್ಲಿ, “ಈ ಪೋಸ್ಟ್‌ನಲ್ಲಿ ಪ್ರಚೋದನಕಾರಿ ವಿಷಯವಿರುವುದರಿಂದ ನಿಮಗೆ ಅಪಾಯವಾಗಬಹುದು! ಪೋಸ್ಟ್ ಅನ್ನು ಮಾರ್ಪಡಿಸಲು ಪ್ರಯತ್ನಿಸಿ ಎಂದು ಗಿಳಿಯಾರ್‌ ಗೆ ಸಲಹೆ ನೀಡಲಾಗಿದೆ.

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...