Homeಕರ್ನಾಟಕಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

ಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

- Advertisement -
- Advertisement -

ಮದ್ಯ ಖರೀದಿಸುವ ಕಾನೂನುಬದ್ಧ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ, ಪ್ರಸ್ತಾವನೆ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿತ್ತು. ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಅಧಿಸೂಚನೆ ಹೊರಡಿಸಿ ಹತ್ತು ದಿನಗಳ ನಂತರ ಅದನ್ನು ಹಿಂಪಡೆದಿದೆ.

ಜನವರಿ 18 ರ ಬುಧವಾರ ಬಿಡುಗಡೆ ಮಾಡಿದ ಪತ್ರಿಕಾ ಟಿಪ್ಪಣಿಯಲ್ಲಿ, ರಾಜ್ಯ ಅಬಕಾರಿ ಇಲಾಖೆಯು ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ನಿಯಮಗಳು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಕರಡು ಅಧಿಸೂಚನೆಯನ್ನು ಸಾರ್ವಜನಿಕರು, ಸಂಘಗಳು ಮತ್ತು ಮಾಧ್ಯಮಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ಷರತ್ತುಗಳು) ನಿಯಮಗಳು – 1967 ರ ನಿಯಮ 10 (1) (ಇ) ಅನ್ನು ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯನ್ನು ಜನವರಿ 9 ರಂದು ಪ್ರಕಟಿಸಿತ್ತು. ಈ ನಿಯಮವು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ಮದ್ಯ ಮಾರಾಟವನ್ನು ನಿಷೇಧಿಸುತ್ತದೆ. ಅಲ್ಲಿ ‘ಇಪ್ಪತ್ತೊಂದು ವರ್ಷ’ ಪದಗಳಿಗೆ ಬದಲಾಗಿ ‘ಹದಿನೆಂಟು ವರ್ಷ’ ಎಂದು ಸೇರಿಸುವ ಬಗ್ಗೆ ಅಧಿಸೂಚನೆ ಹೇಳಿತ್ತು.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚೆಗೆ ಹೊರಡಿಸಿದ ಕರಡು ಅಧಿಸೂಚನೆಯಾದ ‘ಕರ್ನಾಟಕ ಅಬಕಾರಿ ನಿಯಮಗಳು – 2023’ ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಈ ವೇಳೆ ಅಬಕಾರಿ ಇಲಾಖೆ ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ತಿಳಿಸಿತ್ತು.

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆದಿತ್ತು.

ಸರ್ಕಾರದ ಅಧಿಸೂಚನೆಯನ್ನು ವಿರೋಧಿಸಿದ್ದ ವಿದ್ಯಾರ್ಥಿ ಸಂಘಟನೆಗಳು, “ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಆಕ್ರೋಶ ವ್ಯಕ್ತಪಡಿಸಿತ್ತು ಮತ್ತು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿತ್ತು.

ಇದನ್ನೂ ಓದಿ: ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...