Homeಕರ್ನಾಟಕಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

ಮದ್ಯ ಖರೀದಿ ವಯಸ್ಸು ಇಳಿಕೆ ಪ್ರಸ್ತಾಪದ ವಿರುದ್ಧ ಜನಾಕ್ರೋಶ: ಅಧಿಸೂಚನೆ ಹಿಂಪಡೆದ ರಾಜ್ಯ ಬಿಜೆಪಿ ಸರ್ಕಾರ

- Advertisement -
- Advertisement -

ಮದ್ಯ ಖರೀದಿಸುವ ಕಾನೂನುಬದ್ಧ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ, ಪ್ರಸ್ತಾವನೆ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಕೇಳಿತ್ತು. ಸರ್ಕಾರದ ನಿರ್ಧಾರದ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಅಧಿಸೂಚನೆ ಹೊರಡಿಸಿ ಹತ್ತು ದಿನಗಳ ನಂತರ ಅದನ್ನು ಹಿಂಪಡೆದಿದೆ.

ಜನವರಿ 18 ರ ಬುಧವಾರ ಬಿಡುಗಡೆ ಮಾಡಿದ ಪತ್ರಿಕಾ ಟಿಪ್ಪಣಿಯಲ್ಲಿ, ರಾಜ್ಯ ಅಬಕಾರಿ ಇಲಾಖೆಯು ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ನಿಯಮಗಳು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಕರಡು ಅಧಿಸೂಚನೆಯನ್ನು ಸಾರ್ವಜನಿಕರು, ಸಂಘಗಳು ಮತ್ತು ಮಾಧ್ಯಮಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಅಬಕಾರಿ (ಪರವಾನಗಿಗಳ ಸಾಮಾನ್ಯ ಷರತ್ತುಗಳು) ನಿಯಮಗಳು – 1967 ರ ನಿಯಮ 10 (1) (ಇ) ಅನ್ನು ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯನ್ನು ಜನವರಿ 9 ರಂದು ಪ್ರಕಟಿಸಿತ್ತು. ಈ ನಿಯಮವು 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೆ ಮದ್ಯ ಮಾರಾಟವನ್ನು ನಿಷೇಧಿಸುತ್ತದೆ. ಅಲ್ಲಿ ‘ಇಪ್ಪತ್ತೊಂದು ವರ್ಷ’ ಪದಗಳಿಗೆ ಬದಲಾಗಿ ‘ಹದಿನೆಂಟು ವರ್ಷ’ ಎಂದು ಸೇರಿಸುವ ಬಗ್ಗೆ ಅಧಿಸೂಚನೆ ಹೇಳಿತ್ತು.

ಪ್ರಸ್ತುತ ಅಬಕಾರಿ ಕಾನೂನು 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸುತ್ತದೆ. ಇತ್ತೀಚೆಗೆ ಹೊರಡಿಸಿದ ಕರಡು ಅಧಿಸೂಚನೆಯಾದ ‘ಕರ್ನಾಟಕ ಅಬಕಾರಿ ನಿಯಮಗಳು – 2023’ ವಯೋಮಾನ ಕಡಿತಕ್ಕೆ ದಾರಿ ಮಾಡಿಕೊಡುತ್ತದೆ. ಈ ವೇಳೆ ಅಬಕಾರಿ ಇಲಾಖೆ ಆಕ್ಷೇಪಣೆಗಳಿದ್ದಲ್ಲಿ ಅಧಿಸೂಚನೆಯ 30 ದಿನಗಳಲ್ಲಿ ಸಲ್ಲಿಸಬೇಕು ಎಂದು ತಿಳಿಸಿತ್ತು.

2015 ರವರೆಗೆ ಆಲ್ಕೊಹಾಲ್‌‌ ಪಾನೀಯಗಳನ್ನು ಖರೀದಿಸಲು ಕಾನೂನುಬದ್ಧ ವಯಸ್ಸನ್ನು 18 ಇತ್ತು. ಕರ್ನಾಟಕ ಅಬಕಾರಿ ಪರವಾನಗಿ (ಸಾಮಾನ್ಯ ಷರತ್ತು) ನಿಯಮಗಳು – 1967 ಗೆ ತಿದ್ದುಪಡಿ ಮಾಡುವ ಮೂಲಕ ಇದನ್ನು 21 ಕ್ಕೆ ಹೆಚ್ಚಿಸಲಾಯಿತು. ಇದು ದುಬಾರಿ ಪಬ್‌ಗಳು ಮತ್ತು ಬಾರ್‌ಗಳಲ್ಲಿ 21 ವರ್ಷದೊಳಗಿನ ವ್ಯಕ್ತಿಗಳಿಗೆ ಮದ್ಯ ಮಾರಾಟ ಮಾಡುವುದನ್ನು ಪರಿಣಾಮಕಾರಿಯಾಗಿ ತಡೆದಿತ್ತು.

ಸರ್ಕಾರದ ಅಧಿಸೂಚನೆಯನ್ನು ವಿರೋಧಿಸಿದ್ದ ವಿದ್ಯಾರ್ಥಿ ಸಂಘಟನೆಗಳು, “ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಆಕ್ರೋಶ ವ್ಯಕ್ತಪಡಿಸಿತ್ತು ಮತ್ತು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿತ್ತು.

ಇದನ್ನೂ ಓದಿ: ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...