Homeಕರೋನಾ ತಲ್ಲಣಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, "ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ" ಎಂದು ತಿಳಿಸಿದೆ.

- Advertisement -
- Advertisement -

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುದನ್ನು ಕಡ್ಡಾಯ ಮಾಡಿದ್ದ ಸರ್ಕಾರ, ಅದನ್ನು ಉಲ್ಲಂಘಿಸಿದವರಿಗೆ ಭಾರಿ ಮೊತ್ತದ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ನಗರಪ್ರದೇಶಗಳಲ್ಲಿ 1,000ರೂ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500 ರೂ ದಂಡ ವಿಧಿಸಲಾಗಿತ್ತು. ಆದರೆ ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿ ದಂಡದ ಪ್ರಮಾಣವನ್ನು ಇಳಿಕೆ ಮಾಡಿದೆ.

ಮಾಸ್ಕ್‌ ಧರಿಸದಿದ್ದರೆ ದಂಡವಾಗಿ ನಗರ ಪ್ರದೇಶದಲ್ಲಿ 1,000  ದಿಂದ 250 ರೂ.ಗೆ ಮತ್ತು ಗ್ರಾಮಿಣ ಪ್ರದೇಶದಲ್ಲಿ 500 ರೂ. ನಿಂದ 100 ರೂ. ಗೆ ಇಳಿಸಲಾಗಿದೆ.

ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ನಿಯಮಪಾಲನೆ ಕಡ್ಡಾಯ. ಸಾರ್ವಜನಿಕರ ಪ್ರತಿಕ್ರಿಯೆ, ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ, ಮಾಸ್ಕ್ ಧರಿಸದಿದ್ದಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ರೂ, ಗ್ರಾಮೀಣ ಪ್ರದೇಶದಲ್ಲಿ 100 ರೂ.ಗಳಿಗೆ ಪರಿಷ್ಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, “ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ” ಎಂದು ತಿಳಿಸಿದೆ.

ಆದರೂ ಸಾರ್ವಜನಿಕ ವಿರೋಧ ಮುಂದುವರೆದಿದೆ. ಪತ್ರಕರ್ತ ಸಂಗಮೇಶ ಮೆಣಸಿನಕಾಯಿಯವರು ಫೇಸ್‌ಬುಕ್‌ನಲ್ಲಿ ವಿರೋಧ ದಾಖಲಿಸಿರುವುದು ಹೀಗೆ..

“ಈ ಮಾಸ್ಕ್ ದಂಡದ ನಾಟಕ ಬಲು ಸೊಗಸಾಗಿದೆ. ಮೊದಲೇ 250 ರೂ. ಇಟ್ಟಿದ್ದರೆ ಜನ ಇನ್ನೂ ಕಡಿಮೆಗೆ ಚೌಕಾಸಿ ಮಾಡುತ್ತಿದ್ದರು. ಅದಕ್ಕೇ 1,000 ರೂ. ಇಟ್ಟು ಈಗ 250ಕ್ಕೆ ಇಳಿಸಿದ್ದಾರೆ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ!. ಈಗ ಅವರಿಗೆ ಅಭಿನಂದನೆಗಳ ಸುರಿಮಳೆ! ಆದರೆ ನಿರೋಧ್ ಕಾಂಡೊಮ್‌ಗಳನ್ನು ಡಿ.ಸಿ.ಆಫೀಸಿನಲ್ಲೇ ಉಚಿತವಾಗಿ ಹಂಚಿದ ಸರಕಾರಕ್ಕೆ ಕನಿಷ್ಠ ಪಕ್ಷ ಬಡವರಿಗಾದರೂ ಮಾಸ್ಕ್ ಉಚಿತವಾಗಿ ಹಂಚಿ ಎಂದು ಕೇಳುವ ಧೈರ್ಯವನ್ನು ಯಾರೂ ತೋರಲಿಲ್ಲ! ಈಗ ನಾವೆಲ್ಲ ‘ನಮ್ಮದೇ ಇಂಪ್ಯಾಕ್ಟ್’ ಎಂದು ಬೀಗುತ್ತಿದ್ದೇವೆ!! ಈ ಪ್ರಹಸನದಲ್ಲಿ ಸರಕಾರಕ್ಕೆ ಉಚಿತ ಮಾಸ್ಕ್ ಹಂಚುವ ಹೊರೆ-ಹೊಣೆಯೂ ತಪ್ಪಿತು, ದಂಡದ ರೂಪದಲ್ಲಿ ಅಲ್ಪ ಮಟ್ಟಿಗೆ ಅದರ ಖಜಾನೆಯೂ, ಬಹುಮಟ್ಟಿಗೆ ಅಧಿಕಾರಿಗಳ ಜೇಬು ತುಂಬಲೂ ಅನುಕೂಲವಾಯಿತು! …..ಮದುವೆಯಲ್ಲಿ ಉಂಡವನೇ ಜಾಣ!”

ವಿಡಿಯೋ ನೋಡಿ: ನಿಮಗೇ ಕೊರೊನಾ ಸೋಂಕು ಬಂದರೆ ಏನು ಮಾಡಬೇಕು? ಡಾ.ವಾಸು ಎಚ್.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...