Homeಕರೋನಾ ತಲ್ಲಣಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, "ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ" ಎಂದು ತಿಳಿಸಿದೆ.

- Advertisement -
- Advertisement -

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುದನ್ನು ಕಡ್ಡಾಯ ಮಾಡಿದ್ದ ಸರ್ಕಾರ, ಅದನ್ನು ಉಲ್ಲಂಘಿಸಿದವರಿಗೆ ಭಾರಿ ಮೊತ್ತದ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ನಗರಪ್ರದೇಶಗಳಲ್ಲಿ 1,000ರೂ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500 ರೂ ದಂಡ ವಿಧಿಸಲಾಗಿತ್ತು. ಆದರೆ ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿ ದಂಡದ ಪ್ರಮಾಣವನ್ನು ಇಳಿಕೆ ಮಾಡಿದೆ.

ಮಾಸ್ಕ್‌ ಧರಿಸದಿದ್ದರೆ ದಂಡವಾಗಿ ನಗರ ಪ್ರದೇಶದಲ್ಲಿ 1,000  ದಿಂದ 250 ರೂ.ಗೆ ಮತ್ತು ಗ್ರಾಮಿಣ ಪ್ರದೇಶದಲ್ಲಿ 500 ರೂ. ನಿಂದ 100 ರೂ. ಗೆ ಇಳಿಸಲಾಗಿದೆ.

ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ನಿಯಮಪಾಲನೆ ಕಡ್ಡಾಯ. ಸಾರ್ವಜನಿಕರ ಪ್ರತಿಕ್ರಿಯೆ, ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ, ಮಾಸ್ಕ್ ಧರಿಸದಿದ್ದಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ರೂ, ಗ್ರಾಮೀಣ ಪ್ರದೇಶದಲ್ಲಿ 100 ರೂ.ಗಳಿಗೆ ಪರಿಷ್ಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, “ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ” ಎಂದು ತಿಳಿಸಿದೆ.

ಆದರೂ ಸಾರ್ವಜನಿಕ ವಿರೋಧ ಮುಂದುವರೆದಿದೆ. ಪತ್ರಕರ್ತ ಸಂಗಮೇಶ ಮೆಣಸಿನಕಾಯಿಯವರು ಫೇಸ್‌ಬುಕ್‌ನಲ್ಲಿ ವಿರೋಧ ದಾಖಲಿಸಿರುವುದು ಹೀಗೆ..

“ಈ ಮಾಸ್ಕ್ ದಂಡದ ನಾಟಕ ಬಲು ಸೊಗಸಾಗಿದೆ. ಮೊದಲೇ 250 ರೂ. ಇಟ್ಟಿದ್ದರೆ ಜನ ಇನ್ನೂ ಕಡಿಮೆಗೆ ಚೌಕಾಸಿ ಮಾಡುತ್ತಿದ್ದರು. ಅದಕ್ಕೇ 1,000 ರೂ. ಇಟ್ಟು ಈಗ 250ಕ್ಕೆ ಇಳಿಸಿದ್ದಾರೆ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ!. ಈಗ ಅವರಿಗೆ ಅಭಿನಂದನೆಗಳ ಸುರಿಮಳೆ! ಆದರೆ ನಿರೋಧ್ ಕಾಂಡೊಮ್‌ಗಳನ್ನು ಡಿ.ಸಿ.ಆಫೀಸಿನಲ್ಲೇ ಉಚಿತವಾಗಿ ಹಂಚಿದ ಸರಕಾರಕ್ಕೆ ಕನಿಷ್ಠ ಪಕ್ಷ ಬಡವರಿಗಾದರೂ ಮಾಸ್ಕ್ ಉಚಿತವಾಗಿ ಹಂಚಿ ಎಂದು ಕೇಳುವ ಧೈರ್ಯವನ್ನು ಯಾರೂ ತೋರಲಿಲ್ಲ! ಈಗ ನಾವೆಲ್ಲ ‘ನಮ್ಮದೇ ಇಂಪ್ಯಾಕ್ಟ್’ ಎಂದು ಬೀಗುತ್ತಿದ್ದೇವೆ!! ಈ ಪ್ರಹಸನದಲ್ಲಿ ಸರಕಾರಕ್ಕೆ ಉಚಿತ ಮಾಸ್ಕ್ ಹಂಚುವ ಹೊರೆ-ಹೊಣೆಯೂ ತಪ್ಪಿತು, ದಂಡದ ರೂಪದಲ್ಲಿ ಅಲ್ಪ ಮಟ್ಟಿಗೆ ಅದರ ಖಜಾನೆಯೂ, ಬಹುಮಟ್ಟಿಗೆ ಅಧಿಕಾರಿಗಳ ಜೇಬು ತುಂಬಲೂ ಅನುಕೂಲವಾಯಿತು! …..ಮದುವೆಯಲ್ಲಿ ಉಂಡವನೇ ಜಾಣ!”

ವಿಡಿಯೋ ನೋಡಿ: ನಿಮಗೇ ಕೊರೊನಾ ಸೋಂಕು ಬಂದರೆ ಏನು ಮಾಡಬೇಕು? ಡಾ.ವಾಸು ಎಚ್.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...