Homeಕರೋನಾ ತಲ್ಲಣಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ; ಮಾಸ್ಕ್ ದಂಡದಲ್ಲಿ ಇಳಿಕೆ!

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, "ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ" ಎಂದು ತಿಳಿಸಿದೆ.

- Advertisement -
- Advertisement -

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸುದನ್ನು ಕಡ್ಡಾಯ ಮಾಡಿದ್ದ ಸರ್ಕಾರ, ಅದನ್ನು ಉಲ್ಲಂಘಿಸಿದವರಿಗೆ ಭಾರಿ ಮೊತ್ತದ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ನಗರಪ್ರದೇಶಗಳಲ್ಲಿ 1,000ರೂ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 500 ರೂ ದಂಡ ವಿಧಿಸಲಾಗಿತ್ತು. ಆದರೆ ಇದರ ವಿರುದ್ದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿ ದಂಡದ ಪ್ರಮಾಣವನ್ನು ಇಳಿಕೆ ಮಾಡಿದೆ.

ಮಾಸ್ಕ್‌ ಧರಿಸದಿದ್ದರೆ ದಂಡವಾಗಿ ನಗರ ಪ್ರದೇಶದಲ್ಲಿ 1,000  ದಿಂದ 250 ರೂ.ಗೆ ಮತ್ತು ಗ್ರಾಮಿಣ ಪ್ರದೇಶದಲ್ಲಿ 500 ರೂ. ನಿಂದ 100 ರೂ. ಗೆ ಇಳಿಸಲಾಗಿದೆ.

ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ನಿಯಮಪಾಲನೆ ಕಡ್ಡಾಯ. ಸಾರ್ವಜನಿಕರ ಪ್ರತಿಕ್ರಿಯೆ, ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ, ಮಾಸ್ಕ್ ಧರಿಸದಿದ್ದಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ರೂ, ಗ್ರಾಮೀಣ ಪ್ರದೇಶದಲ್ಲಿ 100 ರೂ.ಗಳಿಗೆ ಪರಿಷ್ಕರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರವು ತನ್ನ ಆದೇಶದಲ್ಲಿ, ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ಇಳಿಸಲು ತೀರ್ಮಾನಿಸಲಾಗಿದೆ ಎಂದಿದ್ದು, “ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ” ಎಂದು ತಿಳಿಸಿದೆ.

ಆದರೂ ಸಾರ್ವಜನಿಕ ವಿರೋಧ ಮುಂದುವರೆದಿದೆ. ಪತ್ರಕರ್ತ ಸಂಗಮೇಶ ಮೆಣಸಿನಕಾಯಿಯವರು ಫೇಸ್‌ಬುಕ್‌ನಲ್ಲಿ ವಿರೋಧ ದಾಖಲಿಸಿರುವುದು ಹೀಗೆ..

“ಈ ಮಾಸ್ಕ್ ದಂಡದ ನಾಟಕ ಬಲು ಸೊಗಸಾಗಿದೆ. ಮೊದಲೇ 250 ರೂ. ಇಟ್ಟಿದ್ದರೆ ಜನ ಇನ್ನೂ ಕಡಿಮೆಗೆ ಚೌಕಾಸಿ ಮಾಡುತ್ತಿದ್ದರು. ಅದಕ್ಕೇ 1,000 ರೂ. ಇಟ್ಟು ಈಗ 250ಕ್ಕೆ ಇಳಿಸಿದ್ದಾರೆ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ!. ಈಗ ಅವರಿಗೆ ಅಭಿನಂದನೆಗಳ ಸುರಿಮಳೆ! ಆದರೆ ನಿರೋಧ್ ಕಾಂಡೊಮ್‌ಗಳನ್ನು ಡಿ.ಸಿ.ಆಫೀಸಿನಲ್ಲೇ ಉಚಿತವಾಗಿ ಹಂಚಿದ ಸರಕಾರಕ್ಕೆ ಕನಿಷ್ಠ ಪಕ್ಷ ಬಡವರಿಗಾದರೂ ಮಾಸ್ಕ್ ಉಚಿತವಾಗಿ ಹಂಚಿ ಎಂದು ಕೇಳುವ ಧೈರ್ಯವನ್ನು ಯಾರೂ ತೋರಲಿಲ್ಲ! ಈಗ ನಾವೆಲ್ಲ ‘ನಮ್ಮದೇ ಇಂಪ್ಯಾಕ್ಟ್’ ಎಂದು ಬೀಗುತ್ತಿದ್ದೇವೆ!! ಈ ಪ್ರಹಸನದಲ್ಲಿ ಸರಕಾರಕ್ಕೆ ಉಚಿತ ಮಾಸ್ಕ್ ಹಂಚುವ ಹೊರೆ-ಹೊಣೆಯೂ ತಪ್ಪಿತು, ದಂಡದ ರೂಪದಲ್ಲಿ ಅಲ್ಪ ಮಟ್ಟಿಗೆ ಅದರ ಖಜಾನೆಯೂ, ಬಹುಮಟ್ಟಿಗೆ ಅಧಿಕಾರಿಗಳ ಜೇಬು ತುಂಬಲೂ ಅನುಕೂಲವಾಯಿತು! …..ಮದುವೆಯಲ್ಲಿ ಉಂಡವನೇ ಜಾಣ!”

ವಿಡಿಯೋ ನೋಡಿ: ನಿಮಗೇ ಕೊರೊನಾ ಸೋಂಕು ಬಂದರೆ ಏನು ಮಾಡಬೇಕು? ಡಾ.ವಾಸು ಎಚ್.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...