Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...