Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...