Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...