Homeಮುಖಪುಟ'ಪಬ್ಲಿಕ್ ಟಾಯ್ಲೆಟ್' ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

‘ಪಬ್ಲಿಕ್ ಟಾಯ್ಲೆಟ್’ ಕಿರುಚಿತ್ರ ವಿಮರ್ಶೆ: ರಾಜಶೇಖರ್ ಅಕ್ಕಿ

ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

- Advertisement -
- Advertisement -

ಯಾವುದೇ ಅಪರಾಧ ಆಗಿರಲಿ, ಅದೊಂದು ಅತ್ಯಂತ ನೋವು ತರಿಸುವ ಸಂಗತಿ. ಅದರಲ್ಲಿ ಕೆಲವು ಸಂಗತಿಗಳು ನಮ್ಮನ್ನು ಸುಮ್ಮನೇ ಇರಲು ಬಿಡುವುದಿಲ್ಲ. ಅಪರಾಧ ಎಷ್ಟು ಘೋರವಾಗಿ ತಟ್ಟಿರುತ್ತೆ ಎಂದರೆ, ಅದರಲ್ಲಿ ನಾವೂ ಭಾಗಿ ಎಂದೆನಿಸುತ್ತದೆ ಹಾಗೂ ಅದು ಸತ್ಯವೂ ಕೂಡ. ನಾವೆಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಆಗುವ ಎಲ್ಲಾ ಅಪರಾಧಗಳಲ್ಲಿ ಅಪರೋಕ್ಷವಾಗಿ ಭಾಗಿಯೇ.

ಇಂತಹ ಒಂದು ಅಪರಾಧ ನಡೆದಾಗ, ಅದಕ್ಕೆ ಕೇವಲ ಆ ಅಪರಾಧಿ ಮಾತ್ರ ಭಾಗಿಯಾಗದೇ, ಸಮಾಜವೇ ಭಾಗಿಯಾಗಿ ಅದನ್ನು ಸಂಭ್ರಮಿಸಿ, ಅಪರಾಧಕ್ಕೆ ತುತ್ತಾದವರನ್ನು ಇನ್ನಷ್ಟು ಕ್ಷೋಭೆಗೆ ಸಿಲುಕುವ ಕೆಲಸ ಮಾಡಿದಾಗ, ಅದಕ್ಕಾಗಿ ಏನಾದರೂ ಮಾಡಬೇಕು ಎಂದು ಎಲ್ಲರಿಗೂ ಅನಿಸುವುದು ಸಹಜ. ಆ ಅಪರಾಧಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವುದು, ಅಂತಹ ಅಪರಾಧಗಳು ಮತ್ತೊಮ್ಮೆ ಆಗಬಾರದು ಎಂದು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು, ಕೆಲವು ಸಲ ಆ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಎನ್ನುವ ಅನೇಕ ಕೆಲಸಗಳನ್ನು ಸಮಾಜದ ಕೆಲವು ಅಂಗಗಳು ಮಾಡುತ್ತವೆ.

ಅಂತಹದ್ದೇ ಒಂದು ಘೋರ ಅಪರಾಧದ ಬಗ್ಗೆ ನೊಂದಿರುವ ಯುವ ನಿರ್ದೇಶಕ ನಾಗೇಶ್ ಹೆಬ್ಬೂರು ಅವರು ‘ಪಬ್ಲಿಕ್ ಟಾಯ್ಲೆಟ್’ ಎಂಬ ಕಿರುಚಿತ್ರವನ್ನು ಮಾಡಿದ್ದಾರೆ. ಒಂದು ಸಾರ್ವಜನಿಕ ಶೌಚಾಲಯದಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ, ಆ ಕ್ರಿಯೆಯನ್ನು ಒಬ್ಬ ಕ್ಯಾಮೆರದಲ್ಲಿ ಸೆರೆ ಹಿಡಿದು, ಎಲ್ಲೆಡೆ ಹಂಚಲಾಗಿತ್ತು, ತದನಂತರ ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು ಸುದ್ದಿಯಾಗಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಈ ಕಿರುಚಿತ್ರವನ್ನು ಮಾಡಲಾಗಿದೆ.

ಇಂತಹ ವಿಷಯಗಳಲ್ಲಿ ಯಾರನ್ನು ಚಿತ್ರದ ಮುಖ್ಯಪಾತ್ರವನ್ನಾಗಿ ಮಾಡಬೇಕು ಎಂಬದು ಯಾವಾಗಲೂ ಒಂದು ಪ್ರಶ್ನೆ ಇರುತ್ತದೆ. ಈ ಚಿತ್ರದಲ್ಲಿ ತನ್ನ ಕ್ಯಾಮೆರದಲ್ಲಿ ಆ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯನ್ನೇ ಪ್ರಮುಖಪಾತ್ರ ಮಾಡಲಾಗಿದೆ. ಅದು ಸರಿ ಕೂಡ. ಇಂತಹ ಘೋರ ಕೃತ್ಯಗಳನ್ನು ಎಸಗುತ್ತಾದರೂ ಏಕೆ ಎಂದು ತಿಳಿದು, ಅದರ ಬಗ್ಗೆ ಪರಿಹಾರ ಕಂಡುಕೊಳ್ಳಬೇಕಾದರೆ ಅಪರಾಧಿಯ ಮನೋಸ್ಥಿತಿಯನ್ನು ಪ್ರಮಾಣಿಕ ಪ್ರಯತ್ನ ಆಗಲೇಬೇಕು.

ಹೌದು ಈ ಚಿತ್ರದ ಉದ್ದೇಶವೂ ಪ್ರಾಮಾಣಿಕವಾಗಿಯೇ ಇದೆ. ಆದರೆ,

ಆ ಅಪರಾಧಿಯ ಮನೋಸ್ಥಿತಿಯನ್ನು ಅರಿಯುವ ಪ್ರಾಮಾಣಿಕ ಪ್ರಯತ್ನ ಕಾಣುವುದಿಲ್ಲ. ಅಂತಹ ಒಂದು ದೃಶ್ಯವನ್ನು ತನ್ನ ಫೋನಿನಲ್ಲಿ ಸೆರೆಹಿಡಿದು, ಎಲ್ಲೆಡೆ ವೈರಲ್ ಮಾಡಬೇಕಾದರೆ ಆ ವ್ಯಕ್ತಿ ಎಂಥವನಿರಬಹುದು, ಆ ಕ್ರೌರ್ಯ ಹೇಗೆ ಬಂದಿರಬಹುದು, ಆ ಮಟ್ಟದ ಅಸೂಕ್ಷ್ಮತೆಯನ್ನೆ ಹೇಗೆ ಅಳವಡಿಸಿಕೊಂಡಿರಬಹುದು, ಅದನ್ನು ವೈರಲ್ ಮಾಡಿ, ವಿಕೃತ ಖುಷಿಯನ್ನು ಅನುಭವಿಸಲು ಒಬ್ಬ ವ್ಯಕ್ತಿಗೆ ಹೇಗೆ ಸಾಧ್ಯ ಎಂಬ ಯಾವ ಪ್ರಶ್ನೆಗೂ ಉತ್ತರ ಸಿಗುವುದಿಲ್ಲ, ವಾಸ್ತವದಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ಗೋಜಿಗೇ ಹೋಗಿಲ್ಲ. ಆ ವಿಡಿಯೋ ವೈರಲ್ ಮಾಡಿ, ಬರುವ ಲೈಕ್‌ಗಳು, ವೀವ್ಸ್‌ಗಳಿಂದ ಅನುಂದತುಲಿತನಾಗುತ್ತದ್ದ ವ್ಯಕ್ತಿ, ಯಾರೋ ಒಬ್ಬ ಅದನ್ನು ಟೀಕಿಸಿದೊಡನೇ, ಈತನ ತಪ್ಪಿತಸ್ಥ ಭಾವನೆ ಜಾಗೃತವಾಗುತ್ತದೆ. ಅಲ್ಲಿಯವರೆಗೆ ಕಥೆಯನ್ನು ‘ಕಾಮೆಡಿ’ಯಾಗಿ ಚಿತ್ರಿಸಲು ಪ್ರಯತ್ನಿಸಿ, ತದನಂತರ ಚಿತ್ರದ ಟ್ರೀಟ್‌ಮೆಂಟ್‌ಅನ್ನು ಗಂಭೀರತೆಗೆ ಬದಲಾಯಿಸುತ್ತಾರೆ. ಆ ನಂತರ ಆ ತಪ್ಪಿತಸ್ಥ ಭಾವನೆಯೊಂದಿಗೆ ಅವನು ಹೇಗೆ ಒದ್ದಾಡುತ್ತಾನೆ ಎಂಬುದನ್ನು ತೋರಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಲ್ಲಿಯೂ, ಯಾವುದೇ ಅಧ್ಯಯನ ಮಾಡದೇ, ವಿಷಯದ ಆಳಕ್ಕೆ ಇಳಿಯದೇ ನೋಡುಗರಿಗೆ ‘ಮನುಷ್ಯರ ಆಳ ಸಂವೇದನೆಗಳು ಮನುಷ್ಯತ್ವದ ಕಡೆಗೇ ಚಲಿಸುತ್ತಿರುಬೇಕು’ ಎಂಬ ಮಹತ್ತರ ಸಂದೇಶ ನೀಡುವ ಉದ್ದೇಶದಿಂದ ಚಿತ್ರವನ್ನು ಮಾಡಿದ್ದಾರೆ.

ಯಾವುದೇ ಒಂದು ಘಟನೆಯನ್ನು ಆಧಾರಿಸಿ ಸಿನೆಮಾ ಮಾಡಬೇಕಾದರೆ, ಅದನ್ನು ಸಿನೆಮಾದ ಚೌಕಟ್ಟಿನಲ್ಲಿ ಇಳಿಸಬೇಕಾಗುತ್ತದೆ. ಸಿನೆಮಾ ಎಂಬ ಮಾಧ್ಯಮದ ಇತಿಮಿತಿ ಮತ್ತು ಸಾಮರ್ಥ್ಯಗಳನ್ನು ಅರಿತು ಅದರನುಗುಣವಾಗಿ ಮಾಡಬೇಕಾಗುತ್ತದೆ. ಅದನ್ನೂ ಮಾಡದೆ, ವಿಷಯವಸ್ತುವಿನ ಆಳ ಅಧ್ಯವನ್ನೂ ಮಾಡದೇ, ಕೇವಲ ‘ಒಂದೊಳ್ಳೆ’ ಸಂದೇಶ ನೀಡಲೆಂದು ಸಿನೆಮಾ ಮಾಡುವುದೆಂದರೆ?


ಇದನ್ನೂ ಓದಿ; ಸಿನೆಮಾ ಮತ್ತು ಸಂದೇಶ: ‘ಒಂದೊಳ್ಳೇ ಮೆಸೇಜ್ ಇರೋ ಸಿನೆಮಾ ಮಾಡಬೇಕು’ ಎಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...