Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....