Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...