Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...