Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...