Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....