Homeಕರ್ನಾಟಕ2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

2000 ನೋಟಲ್ಲಿ ‘ಚಿಪ್‌ ವರದಿ’ಯ ಮೂಲವನ್ನು ಬಿಚ್ಚಿಟ್ಟ ಪಬ್ಲಿಕ್ ಟಿವಿ ನಿರೂಪಕ?

- Advertisement -
- Advertisement -

ಬಿಜೆಪಿಯ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು, 500 ಮತ್ತು 1000 ರೂ. ಮುಖಬೆಲೆ ನೋಟ್‌ ಬ್ಯಾನ್ ಮಾಡಿ ಐದು ವರ್ಷ ತುಂಬಿದೆ. ಈ ವೇಳೆ ಬಿಡುಗಡೆಯಾದ 2000 ರೂ. ಮುಖಬೆಲೆ ನೋಟಿನಲ್ಲಿ ‘ಮೈಕ್ರೋ ನ್ಯಾನೋ’ ಚಿಪ್ ಇದ್ದು, ಅದನ್ನು ಎಲ್ಲಿ ಬಚ್ಚಿಟ್ಟರೂ ಉಪಗ್ರಹದ ಮೂಲಕ ಕಂಡು ಹಿಡಿಯಬಹುದು ಎಂಬ ಸುಳ್ಳು ಸುದ್ದಿಯನ್ನು ಕೆಲವು ರಾಷ್ಟ್ರೀಯ ವಾಹಿನಿ ಸಹಿತ ರಾಜ್ಯದ ‘ಪಬ್ಲಿಕ್ ಟಿವಿ’ ಕೂಡಾ ವರದಿ ಮಾಡಿತ್ತು.

2000 ರೂ. ನೋಟಿನಲ್ಲಿ ಚಿಪ್ ಇರುವ ವರದಿಯ ಬಗ್ಗೆ ಸ್ವತಃ ಆರ್‌ಬಿಐ ಸ್ಪಷ್ಟನೆ ನೀಡಿ ಈ ರೀತಿ ಯಾವುದೆ ಚಿಪ್‌ 2000 ರೂ ನೋಟಿನಲ್ಲಿ ಇಲ್ಲ ಎಂದು ಹೇಳಿತ್ತು. ಇದರ ನಂತರವು ಮಾಧ್ಯಮಗಳು ಚಿಪ್ ಇರುವುನ್ನೇ ವರದಿ ಮಾಡಿ ಜನರ ದಿಕ್ಕು ತಪ್ಪಿಸಿದ್ದವು.

ಇದನ್ನೂ ಓದಿ: ನೋಟ್‌ ಬ್ಯಾನ್‌ ದುರಂತಕ್ಕೆ 5 ವರ್ಷ: ದೇಶ ಮರೆಯಬಾರದ ಚಿತ್ರಗಳಿವು!

ಕನ್ನಡದ ಸುದ್ದಿ ವಾಹಿನಿಯಾದ ‘ಪಬ್ಲಿಕ್ ಟಿವಿ’ ಕೂಡಾ ಈ ಸುಳ್ಳು ಸುದ್ದಿಯನ್ನು ವರದಿ ಮಾಡಿತ್ತು. ಅದರಲ್ಲೂ ಈ ಸುದ್ದಿಯನ್ನು ವಾಹಿನಿಯ ಮುಖ್ಯಸ್ಥ ಎಚ್‌.ಆರ್‌. ರಂಗನಾಥ್‌ ಅವರೇ ಮಾಡಿದ್ದರು. ಈ ವರದಿಯ ನಂತರ ಪ್ರತಿ ವರ್ಷ ನವೆಂಬರ್‌ ಎರಡನೆ ವಾರ ಈ ವಿಡಿಯೊ ಸಾಮಾಜಿಕ ಜಾಲತಾಣದಗಳಲ್ಲಿ ಹರಿದಾಡಿ ಪಬ್ಲಿಕ್ ಟಿವಿ ಮತ್ತು ಅದರ ಮುಖ್ಯಸ್ಥ ರಂಗನಾಥ್‌ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಬಾರಿ ಪಬ್ಲಿಕ್ ಟಿವಿಯ ನಿರೂಪಕ ‘ಅರುಣ್ ಸಿ ಬಡಿಗೇರ್‌’ ಅವರ ಹೆಸರಿನ ಟ್ವಿಟರ್‌ ಖಾತೆಯೊಂದರ ಟ್ವೀಟ್‌ ಭಾರಿ ಸದ್ದು ಮಾಡಿದೆ. ಅದರಲ್ಲಿ, ಐದು ವರ್ಷಗಳ ಹಿಂದೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ 2000 ರೂ ಮುಖಬೆಲೆ ನೋಟಿನಲ್ಲಿನ ‘ಚಿಪ್‌’ ವಿಚಾರಗಳನ್ನು ಬರೆಯಲಾಗಿದೆ.

ಇದನ್ನೂ ಓದಿ: ನೋಟ್‌ ಬ್ಯಾನ್‌ಗೆ 5 ವರ್ಷ: ಮೋದಿ ನೇತೃತ್ವದ BJP ಸರ್ಕಾರ ಅಂದು ಹೇಳಿದ್ದೇನು? ಈಗ ಆಗಿದ್ದೇನು?

ನವೆಂಬರ್‌ 8 ರಂದು ಮಾಡಲಾಗಿರುವ ಟ್ವೀಟ್‌ನಲ್ಲಿ, “ಇಂದು ಡಿಮಾನಟೈಜ್ ದಿನ ನನ್ನ ಹಿರಿಯ ಸಹೋದ್ಯೋಗಿ ರಂಗಣ್ಣನವರ ಚಿಪ್ ವೀಡಿಯೋ ಬಗ್ಗೆ ವಿವರಣೆ ನೀಡಲು ಬಯಸುತ್ತೇನೆ. ವಾಸ್ತವವಾಗಿ ಚಿಪ್ ಹುಟ್ಟುಕೊಂಡಿದ್ದು ಒಂದು ರಾಜಕೀಯ ಪಕ್ಷದ ವಾಟ್ಸಪ್ ಗ್ರೂಪಲ್ಲಿ. ಅದರಲ್ಲಿ ಸಂಸದರು, ಹಿರಿಯ ಪತ್ರಕರ್ತ ಮಿತ್ರರು ಎಲ್ಲರೂ ಇದ್ದರು. ರಾಜೀವ್ ಚಂದ್ರಶೇಖರ್ ಮೊದಲು ಈ ವಿಷಯ ಪ್ರಸ್ತಾಪ ಮಾಡಿದರು ತದನಂತರ ವಿಶ್ವೇಶ್ವರಭಟ್‌ ಇದನ್ನು ಪುಷ್ಟಿಕರಿಸಿ ನ್ಯಾಷನಲ್ ಮೀಡಿಯಾ ಬಿತ್ತರಿಸಲಾಗಿದೆ ಎಂದರು.”

“ಮೊದಲು ಇದನ್ನು ಅಜಿತ್‌ ಹನುಮಕ್ಕನವರ್‌‌ ಹೇಳಲಿ ಎಂದು ಚರ್ಚೆ ಆಯಿತು. ಆದರೆ ಅವರ ಕಾರ್ಯಕ್ರಮ ಎಡಿಟಿಂಗ್ ಮುಗಿದಿತ್ತು. ಹಾಗಾಗಿ ರಂಗಣ್ಣನವರ ಹೆಗಲಿಗೆ ಈ ಜವಾಬ್ದಾರಿ ಕೊಡಲಾಯಿತು. ಆಡಳಿತ ಪಕ್ಷದ ನಂಬಲಾರ್ಹ ಮೂಲಗಳಿಂದ ಬಂದಿದ್ದರಿಂದ ರಂಗಣ್ಣ ಸುದ್ದಿ ಆಳಕ್ಕೆ ಹೋಗದೆ ಎಡವಟ್ಟು ಮಾಡಿಕೊಂಡರು!!” ಎಂದು ಟ್ವೀ‌ಟ್‌ ಮಾಡಲಾಗಿದೆ.

 

ಈ ಟ್ವೀಟ್‌ ಆಗುತ್ತಿದ್ದಂತೆ ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದು, ವೈರಲ್‌ ಆಗಿದೆ. ಹಲವಾರು ಜನರು ಪಬ್ಲಿಕ್‌ ಟಿವಿ ಮತ್ತು ಅರುಣ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ನೋಟ್‌ಬ್ಯಾನ್‌ ಪರಿಣಾಮ ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ: ಮನಮೋಹನ್ ಸಿಂಗ್

ಈ ಟ್ವೀಟ್‌ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಪಬ್ಲಿಕ್ ಟಿವಿ ನಿರೂಪಕ ಅರಣ್‌ ಸಿ ಬಡಿಗೇರ್‌, “ಪ್ರಸ್ತುತ ಟ್ವಿಟರ್‌ನಲ್ಲಿ ಹರಿದಾಡುತ್ತಿರುವ ಟ್ವೀಟ್‌ ನನ್ನದಲ್ಲ. ಅದರ ಬಗ್ಗೆ ದೂರು ನೀಡಿದ್ದೇನೆ. ಬೇರೆ ಯಾರೋ ನಕಲಿ ಖಾತೆಯಲ್ಲಿ ಇದನ್ನು ಮಾಡಿದ್ದಾರೆ” ಎಂದು ಹೇಳಿದ್ದಾರೆ.

‘Arun C badiger’ ಎಂಬ ಹೆಸರಿನಲ್ಲಿ ಒಟ್ಟು ಮೂರು ಟ್ವಿಟರ್‌ ಖಾತೆಗಳಿವೆ. ಅವುಗಳಲ್ಲಿ ‘@BadigerArun’ ಎಂಬ ಹೆಸರಿನ ಪ್ರೋಫಲ್ ಇರುವ, ‘‘ಧಾರವಾಡ ಹುಡ್ಗ.. ಅನ್ಸಿದ್ದನ್ನ ನೇರವಾಗಿ ಹೇಳೋನು” ಎಂಬ ಬಯೋ ಇರುವ ಖಾತೆ ತನ್ನದು ಎಂದು ಅವರು ನಾನುಗೌರಿ.ಕಾಂಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಅವರ ಅಸಲಿ ಟ್ವಿಟರ್‌ ಖಾತೆಯಲ್ಲೂ ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...