Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....