Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...