Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...