Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...