Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...