Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....