Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದ ಹಿಂದಿ ಸುದ್ದಿ ಮಾಧ್ಯಮ ಝೀ ನ್ಯೂಸ್‌ ತಮ್ಮ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಝೀ ನ್ಯೂಸ್‌ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ ರೋಹಿತ್ ರಂಜನ್ ‘ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ’ ಎಂದು ಹೇಳಿ ದುರುದ್ದೇಶಪೂರಿತವಾಗಿ ಉದಯಪುರ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಹುಲ್ ಗಾಂಧಿಯ ಕ್ಷೇತ್ರ ಕೇರಳದ ವಯನಾಡ್‌ನ ಅವರ ಕಚೇರಿಯಲ್ಲಿ ಜೂನ್ 24 ರಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ದ್ವಂಸ ಮಾಡಿದ್ದರು. ಈ ಕುರಿತು ಪತ್ರಕರ್ತರು ಕೇಳೀದ್ದ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

“ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ  ಮೇಲೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’’ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಮಾತನ್ನು ಝೀ ನ್ಯೂಸ್ ಉದಯಪುರ ಹತ್ಯೆಯ ಬಗ್ಗೆ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಎಂಬಂತೆ ತಪ್ಪಾಗಿ ವರದಿ ಮಾಡಿತ್ತು. ರೋಹಿತ್ ರಂಜನ್ ನಿರೂಪಿಸಿದ್ದ, ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಇದು ಪ್ರಸಾರವಾಗಿತ್ತು. ಭೀಕರ ಹತ್ಯೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ‘ಆಘಾತಕಾರಿ’ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವೀಕ್ಷಕರನ್ನು ತಪ್ಪುದಾರಿಗೆ ಎಳೆದಿದ್ದರು.

ಚಾನೆಲ್ ಪ್ರಸಾರ ಮಾಡಿದ್ದ ಈ ಸುದ್ದಿಯ ವಿಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವಾರು ಜನರು ಇದನ್ನು ನಿಜವೆಂದೇ ನಂಬಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ಕೂಡಾ ಇದನ್ನು ಬಿರುಸಿನಿಂದ ಹಂಚಿಕೊಂಡಿತ್ತು. ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರೋಹಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ಇದರ ನಂತರ ಎಚ್ಚೆತ್ತ ಝೀ ನ್ಯೂಸ್ ಟ್ವಿಟರ್‌ನಲ್ಲಿ ಇರುವ ವಿಡಿಯೊವನ್ನು ಡಿಲೀಟ್ ಮಾಡಿದ್ದು, “ಮಾನವ ಸಹಜ ತಪ್ಪು” ಎಂದು ಹೇಳಿ ಕ್ಷಮೆಯಾಚಿಸಿದೆ. “ನಿನ್ನೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯನ್ನು ನಮ್ಮ ಕಾರ್ಯಕ್ರಮ ಡಿಎನ್‌ಎನಲ್ಲಿ ತಪ್ಪಾಗಿ ಪ್ರಸಾರವಾಗಿದೆ. ಆ ಬಗ್ಗೆ ನಮಗೆ ವಿಷಾದವಿದೆ” ಎಂದು ಕ್ಷಮೆ ಯಾಚಿಸಿತ್ತು.

ಅದೇ ರೀತಿ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರವಾದ ಡಿಎನ್‌ಎ ಕಾರ್ಯಕ್ರಮದಲ್ಲಿ ಸ್ವತಃ ನಿರೂಪಕ ರೋಹಿತ್ ರಂಜನ್ ಸುಳ್ಳು ಸುದ್ದಿ ಬಗ್ಗೆ ಕ್ಷಮೆಯಾಚಿಸಿದ್ದು, “ರಾಹುಲ್ ಗಾಂಧಿ ಅವರು ವಯನಾಡಿನ ಸನ್ಮಾನ್ಯ ಸಂಸದರಾಗಿದ್ದು, ಕಾಂಗ್ರೆಸ್ ನಾಯಕರು. ಅವರ ಘನತೆಗೆ ಧಕ್ಕೆ ತರುವ ಯಾವುದೇ ಚೇಷ್ಟೆ ಮಾಡಿಲ್ಲ. ಈ ಬಗ್ಗೆ ತಪ್ಪನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಡಿಎನ್‌ಎ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ತಪ್ಪಿಗೆ ಕಾರಣರಾದ ಇಬ್ಬರನ್ನು ಅವರ ಹುದ್ದೆಯಿಂದ ತೆಗೆದುಹಾಕಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

ಈ ನಡುವೆ ಸುಳ್ಳು ಸುದ್ದಿಯನ್ನು ಹಂಚಿದ ಬಿಜೆಪಿ ಬಗ್ಗೆಯೂ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಮೂಲಕ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದು, ತಿರುಚಿದ ವೀಡಿಯೋವನ್ನು ಹಂಚಿಕೊಂಡಿದ್ದರ ಸಂಬಂಧ ಕ್ಷಮೆಯಾಚಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಇಡುಕ್ಕಿ, ವಯನಾಡ್, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಅರಣ್ಯ ಸುತ್ತಲಿನ ಬಫರ್ ಝೋನ್‌ಗಳ ಅಳವಡಿಕೆಗೆ ಸುಪ್ರೀಂ ಕೋರ್ಟ್ ಜೂನ್-03 ರಂದು ಆದೇಶ ಮಾಡಿತ್ತು. ಇದರಿಂದ ಲಕ್ಷಾಂತರ ಸಂಖ್ಯೆಯ ರೈತರ ಉಳುಮೆ ಭೂಮಿ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ ಎಂದು ಆರೋಪಿಸಿ ಕೇರಳದ ರೈತ ಸಂಘಟನೆಗಳು, ರಾಜಕೀಯ ಪಕ್ಷಗಳು ಹೋರಾಟ ತೀವ್ರಗೊಳಿಸಿತ್ತು.

ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಈ ಭಾಗದ ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿಯವರು ಪ್ರತಿಕ್ರಿಯಿಸಿಲ್ಲ ಹಾಗೂ ಮಧ್ಯಪ್ರವೇಶಿಸಿಲ್ಲ ಎಂದು ಎಸ್‌ಎಫ್‌ಐ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯೂಐ ಕಾರ್ಯಕರ್ತರು ಮತ್ತು ಎಸ್ಎಫ್ಐನ ಪ್ರತಿಭಟನಾ ನಿರತರ ನಡುವೆ ವಾಗ್ವಾದ ಘರ್ಷಣೆ ನಡೆದಿತ್ತು. ವೇಳೆ ಎಸ್‌ಎಫ್‌ಐ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...