Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದ ಹಿಂದಿ ಸುದ್ದಿ ಮಾಧ್ಯಮ ಝೀ ನ್ಯೂಸ್‌ ತಮ್ಮ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಝೀ ನ್ಯೂಸ್‌ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ ರೋಹಿತ್ ರಂಜನ್ ‘ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ’ ಎಂದು ಹೇಳಿ ದುರುದ್ದೇಶಪೂರಿತವಾಗಿ ಉದಯಪುರ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಹುಲ್ ಗಾಂಧಿಯ ಕ್ಷೇತ್ರ ಕೇರಳದ ವಯನಾಡ್‌ನ ಅವರ ಕಚೇರಿಯಲ್ಲಿ ಜೂನ್ 24 ರಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ದ್ವಂಸ ಮಾಡಿದ್ದರು. ಈ ಕುರಿತು ಪತ್ರಕರ್ತರು ಕೇಳೀದ್ದ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

“ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ  ಮೇಲೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’’ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಮಾತನ್ನು ಝೀ ನ್ಯೂಸ್ ಉದಯಪುರ ಹತ್ಯೆಯ ಬಗ್ಗೆ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಎಂಬಂತೆ ತಪ್ಪಾಗಿ ವರದಿ ಮಾಡಿತ್ತು. ರೋಹಿತ್ ರಂಜನ್ ನಿರೂಪಿಸಿದ್ದ, ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಇದು ಪ್ರಸಾರವಾಗಿತ್ತು. ಭೀಕರ ಹತ್ಯೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ‘ಆಘಾತಕಾರಿ’ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವೀಕ್ಷಕರನ್ನು ತಪ್ಪುದಾರಿಗೆ ಎಳೆದಿದ್ದರು.

ಚಾನೆಲ್ ಪ್ರಸಾರ ಮಾಡಿದ್ದ ಈ ಸುದ್ದಿಯ ವಿಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವಾರು ಜನರು ಇದನ್ನು ನಿಜವೆಂದೇ ನಂಬಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ಕೂಡಾ ಇದನ್ನು ಬಿರುಸಿನಿಂದ ಹಂಚಿಕೊಂಡಿತ್ತು. ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರೋಹಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ಇದರ ನಂತರ ಎಚ್ಚೆತ್ತ ಝೀ ನ್ಯೂಸ್ ಟ್ವಿಟರ್‌ನಲ್ಲಿ ಇರುವ ವಿಡಿಯೊವನ್ನು ಡಿಲೀಟ್ ಮಾಡಿದ್ದು, “ಮಾನವ ಸಹಜ ತಪ್ಪು” ಎಂದು ಹೇಳಿ ಕ್ಷಮೆಯಾಚಿಸಿದೆ. “ನಿನ್ನೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯನ್ನು ನಮ್ಮ ಕಾರ್ಯಕ್ರಮ ಡಿಎನ್‌ಎನಲ್ಲಿ ತಪ್ಪಾಗಿ ಪ್ರಸಾರವಾಗಿದೆ. ಆ ಬಗ್ಗೆ ನಮಗೆ ವಿಷಾದವಿದೆ” ಎಂದು ಕ್ಷಮೆ ಯಾಚಿಸಿತ್ತು.

ಅದೇ ರೀತಿ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರವಾದ ಡಿಎನ್‌ಎ ಕಾರ್ಯಕ್ರಮದಲ್ಲಿ ಸ್ವತಃ ನಿರೂಪಕ ರೋಹಿತ್ ರಂಜನ್ ಸುಳ್ಳು ಸುದ್ದಿ ಬಗ್ಗೆ ಕ್ಷಮೆಯಾಚಿಸಿದ್ದು, “ರಾಹುಲ್ ಗಾಂಧಿ ಅವರು ವಯನಾಡಿನ ಸನ್ಮಾನ್ಯ ಸಂಸದರಾಗಿದ್ದು, ಕಾಂಗ್ರೆಸ್ ನಾಯಕರು. ಅವರ ಘನತೆಗೆ ಧಕ್ಕೆ ತರುವ ಯಾವುದೇ ಚೇಷ್ಟೆ ಮಾಡಿಲ್ಲ. ಈ ಬಗ್ಗೆ ತಪ್ಪನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಡಿಎನ್‌ಎ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ತಪ್ಪಿಗೆ ಕಾರಣರಾದ ಇಬ್ಬರನ್ನು ಅವರ ಹುದ್ದೆಯಿಂದ ತೆಗೆದುಹಾಕಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

ಈ ನಡುವೆ ಸುಳ್ಳು ಸುದ್ದಿಯನ್ನು ಹಂಚಿದ ಬಿಜೆಪಿ ಬಗ್ಗೆಯೂ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಮೂಲಕ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದು, ತಿರುಚಿದ ವೀಡಿಯೋವನ್ನು ಹಂಚಿಕೊಂಡಿದ್ದರ ಸಂಬಂಧ ಕ್ಷಮೆಯಾಚಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಇಡುಕ್ಕಿ, ವಯನಾಡ್, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಅರಣ್ಯ ಸುತ್ತಲಿನ ಬಫರ್ ಝೋನ್‌ಗಳ ಅಳವಡಿಕೆಗೆ ಸುಪ್ರೀಂ ಕೋರ್ಟ್ ಜೂನ್-03 ರಂದು ಆದೇಶ ಮಾಡಿತ್ತು. ಇದರಿಂದ ಲಕ್ಷಾಂತರ ಸಂಖ್ಯೆಯ ರೈತರ ಉಳುಮೆ ಭೂಮಿ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ ಎಂದು ಆರೋಪಿಸಿ ಕೇರಳದ ರೈತ ಸಂಘಟನೆಗಳು, ರಾಜಕೀಯ ಪಕ್ಷಗಳು ಹೋರಾಟ ತೀವ್ರಗೊಳಿಸಿತ್ತು.

ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಈ ಭಾಗದ ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿಯವರು ಪ್ರತಿಕ್ರಿಯಿಸಿಲ್ಲ ಹಾಗೂ ಮಧ್ಯಪ್ರವೇಶಿಸಿಲ್ಲ ಎಂದು ಎಸ್‌ಎಫ್‌ಐ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯೂಐ ಕಾರ್ಯಕರ್ತರು ಮತ್ತು ಎಸ್ಎಫ್ಐನ ಪ್ರತಿಭಟನಾ ನಿರತರ ನಡುವೆ ವಾಗ್ವಾದ ಘರ್ಷಣೆ ನಡೆದಿತ್ತು. ವೇಳೆ ಎಸ್‌ಎಫ್‌ಐ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...