Homeರಾಷ್ಟ್ರೀಯರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ...

ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ; ಕ್ಷಮೆಯಾಚಿಸಿ, ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಿದ್ದೇವೆಂದ ‘ಝೀ ನ್ಯೂಸ್’

- Advertisement -
- Advertisement -

ರಾಜಸ್ಥಾನದ ಉದಯಪುರದಲ್ಲಿ ನಡೆದ ಹತ್ಯೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮಿಸಿದ್ದು, ಹಂತಕರನ್ನು ‘ಮಕ್ಕಳು’ ಎಂದು ಹೇಳಿದ್ದಾರೆ ಎಂದು ತಿರುಚಿದ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದ ಹಿಂದಿ ಸುದ್ದಿ ಮಾಧ್ಯಮ ಝೀ ನ್ಯೂಸ್‌ ತಮ್ಮ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದು, ತಪ್ಪಿಗೆ ಕಾರಣರಾದ ಇಬ್ಬರು ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾ ಮಾಡಿದ್ದೇವೆ ಎಂದು ಹೇಳಿದೆ.

ಝೀ ನ್ಯೂಸ್‌ನ ಡಿಎನ್‌ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ ರೋಹಿತ್ ರಂಜನ್ ‘ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೊ ಅಥವಾ ಆತಂಕವಾದಿಗಳೊ’ ಎಂದು ಹೇಳಿ ದುರುದ್ದೇಶಪೂರಿತವಾಗಿ ಉದಯಪುರ ಸುದ್ದಿಯನ್ನು ಲಿಂಕ್ ಮಾಡಿ ಮಾಧ್ಯಮದಲ್ಲಿ ತಪ್ಪಾಗಿ ವರದಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಹುಲ್ ಗಾಂಧಿಯ ಕ್ಷೇತ್ರ ಕೇರಳದ ವಯನಾಡ್‌ನ ಅವರ ಕಚೇರಿಯಲ್ಲಿ ಜೂನ್ 24 ರಂದು ಎಸ್‌ಎಫ್‌ಐ ವಿದ್ಯಾರ್ಥಿಗಳು ದ್ವಂಸ ಮಾಡಿದ್ದರು. ಈ ಕುರಿತು ಪತ್ರಕರ್ತರು ಕೇಳೀದ್ದ ಪ್ರಶ್ನೆಗೆ ಉತ್ತರಿಸಿದ್ದ ರಾಹುಲ್ ಗಾಂಧಿ, “ಇದು ನನ್ನ ಕಚೇರಿ. ಆದರೆ ಅದಕ್ಕೂ ಮುನ್ನ ಇದು ವಯನಾಡಿನ ಜನರ ಕಚೇರಿ. ಇದು ವಯನಾಡಿನ ಜನರ ಧ್ವನಿ. ದುರಾದೃಷ್ಟವಶಾತ್ ಕೆಲವು ಜನರು ಹಿಂಸೆಗಿಳಿದಿದ್ದಾರೆ. ಆದರೆ ಯಾವುದೇ ಸಮಸ್ಯೆಗೆ ಪರಿಹಾರವಾಗುವುದಿಲ್ಲ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉದಯಪುರ ಹತ್ಯೆ ಆರೋಪಿಗಳನ್ನು ರಾಹುಲ್ ಗಾಂಧಿ ಕ್ಷಮಿಸಿದ್ದಾರೆ ಎಂದು ಸುಳ್ಳು ಹಬ್ಬಿಸಿದ ಝೀ ನ್ಯೂಸ್

“ಈ ರೀತಿ ಮಾಡಿದ ಮಕ್ಕಳು ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ. ಆದರೆ ಅವರ  ಮೇಲೆ ನನಗೆ ಯಾವುದೇ ಕೋಪ ಅಥವಾ ದ್ವೇಷವಿಲ್ಲ. ಅವರನ್ನು ಕ್ಷಮಿಸಿದ್ದೇನೆ’’ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಮಾತನ್ನು ಝೀ ನ್ಯೂಸ್ ಉದಯಪುರ ಹತ್ಯೆಯ ಬಗ್ಗೆ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆ ಎಂಬಂತೆ ತಪ್ಪಾಗಿ ವರದಿ ಮಾಡಿತ್ತು. ರೋಹಿತ್ ರಂಜನ್ ನಿರೂಪಿಸಿದ್ದ, ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮದಲ್ಲಿ ಇದು ಪ್ರಸಾರವಾಗಿತ್ತು. ಭೀಕರ ಹತ್ಯೆಯ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ‘ಆಘಾತಕಾರಿ’ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವೀಕ್ಷಕರನ್ನು ತಪ್ಪುದಾರಿಗೆ ಎಳೆದಿದ್ದರು.

ಚಾನೆಲ್ ಪ್ರಸಾರ ಮಾಡಿದ್ದ ಈ ಸುದ್ದಿಯ ವಿಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಹಲವಾರು ಜನರು ಇದನ್ನು ನಿಜವೆಂದೇ ನಂಬಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಜೆಪಿ ಕೂಡಾ ಇದನ್ನು ಬಿರುಸಿನಿಂದ ಹಂಚಿಕೊಂಡಿತ್ತು. ಕನೌಜ್‌ನ ಬಿಜೆಪಿ ಸಂಸದ ಸುಬ್ರತಾ ಪಾಠಕ್, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜವರ್ಧನ್ ರಾಥೋಡ್, ಬಿಜ್ನೋರ್‌ನ ಚಂದ್‌ಪುರ ವಿಧಾನಸಭೆಯ ಶಾಸಕ ಕಮಲೇಶ್ ಸೈನಿ ಸೇರಿದಂತೆ ಹಲವರು ಈ ವಿಡಿಯೋವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆ ಎಂಆರ್‌ಎಂ ನಾಯಕನ ಸಂಪರ್ಕದಲ್ಲಿದ್ದ ಕೊಲೆ ಆರೋಪಿ?

ಇದರ ನಂತರ ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಸಮಾಜಿಕ ಮಾಧ್ಯಮಗಳ ಬಳಕೆದಾರರು ಝೀ ನ್ಯೂಸ್ ತಪ್ಪಾಗಿ ವರದಿ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೆ ಅಲ್ಲದೆ, ಛತ್ತೀಸ್‌ಗಡದ ರಾಯಪುರದಲ್ಲಿ ಝೀ ನ್ಯೂಸ್ ಮತ್ತು ನಿರೂಪಕ ರೋಹಿತ್ ರಂಜನ್ ವಿರುದ್ಧ ಎಫ್‌ಐಆರ್‌ ಕೂಡಾ ದಾಖಲಾಗಿತ್ತು.

ಇದರ ನಂತರ ಎಚ್ಚೆತ್ತ ಝೀ ನ್ಯೂಸ್ ಟ್ವಿಟರ್‌ನಲ್ಲಿ ಇರುವ ವಿಡಿಯೊವನ್ನು ಡಿಲೀಟ್ ಮಾಡಿದ್ದು, “ಮಾನವ ಸಹಜ ತಪ್ಪು” ಎಂದು ಹೇಳಿ ಕ್ಷಮೆಯಾಚಿಸಿದೆ. “ನಿನ್ನೆ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯನ್ನು ನಮ್ಮ ಕಾರ್ಯಕ್ರಮ ಡಿಎನ್‌ಎನಲ್ಲಿ ತಪ್ಪಾಗಿ ಪ್ರಸಾರವಾಗಿದೆ. ಆ ಬಗ್ಗೆ ನಮಗೆ ವಿಷಾದವಿದೆ” ಎಂದು ಕ್ಷಮೆ ಯಾಚಿಸಿತ್ತು.

ಅದೇ ರೀತಿ ಶನಿವಾರ ರಾತ್ರಿ 9 ಗಂಟೆಗೆ ಪ್ರಸಾರವಾದ ಡಿಎನ್‌ಎ ಕಾರ್ಯಕ್ರಮದಲ್ಲಿ ಸ್ವತಃ ನಿರೂಪಕ ರೋಹಿತ್ ರಂಜನ್ ಸುಳ್ಳು ಸುದ್ದಿ ಬಗ್ಗೆ ಕ್ಷಮೆಯಾಚಿಸಿದ್ದು, “ರಾಹುಲ್ ಗಾಂಧಿ ಅವರು ವಯನಾಡಿನ ಸನ್ಮಾನ್ಯ ಸಂಸದರಾಗಿದ್ದು, ಕಾಂಗ್ರೆಸ್ ನಾಯಕರು. ಅವರ ಘನತೆಗೆ ಧಕ್ಕೆ ತರುವ ಯಾವುದೇ ಚೇಷ್ಟೆ ಮಾಡಿಲ್ಲ. ಈ ಬಗ್ಗೆ ತಪ್ಪನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಡಿಎನ್‌ಎ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ತಪ್ಪಿಗೆ ಕಾರಣರಾದ ಇಬ್ಬರನ್ನು ಅವರ ಹುದ್ದೆಯಿಂದ ತೆಗೆದುಹಾಕಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

ಈ ನಡುವೆ ಸುಳ್ಳು ಸುದ್ದಿಯನ್ನು ಹಂಚಿದ ಬಿಜೆಪಿ ಬಗ್ಗೆಯೂ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಪತ್ರ ಮೂಲಕ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದು, ತಿರುಚಿದ ವೀಡಿಯೋವನ್ನು ಹಂಚಿಕೊಂಡಿದ್ದರ ಸಂಬಂಧ ಕ್ಷಮೆಯಾಚಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣಕ್ಕೆ ಮೋದಿ: ಬರಮಾಡಿಕೊಳ್ಳದ ಕೆಸಿಆರ್‌; ಧಮ್‌ ಬಿರಿಯಾನಿ ತಿಂದು ಹೋಗಿ ಎಂದ ಕೆಟಿಆರ್‌‌!

ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಇಡುಕ್ಕಿ, ವಯನಾಡ್, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಅರಣ್ಯ ಸುತ್ತಲಿನ ಬಫರ್ ಝೋನ್‌ಗಳ ಅಳವಡಿಕೆಗೆ ಸುಪ್ರೀಂ ಕೋರ್ಟ್ ಜೂನ್-03 ರಂದು ಆದೇಶ ಮಾಡಿತ್ತು. ಇದರಿಂದ ಲಕ್ಷಾಂತರ ಸಂಖ್ಯೆಯ ರೈತರ ಉಳುಮೆ ಭೂಮಿ ಮತ್ತು ಕೃಷಿ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ ಎಂದು ಆರೋಪಿಸಿ ಕೇರಳದ ರೈತ ಸಂಘಟನೆಗಳು, ರಾಜಕೀಯ ಪಕ್ಷಗಳು ಹೋರಾಟ ತೀವ್ರಗೊಳಿಸಿತ್ತು.

ಆದರೆ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವಲ್ಲಿ ಈ ಭಾಗದ ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿಯವರು ಪ್ರತಿಕ್ರಿಯಿಸಿಲ್ಲ ಹಾಗೂ ಮಧ್ಯಪ್ರವೇಶಿಸಿಲ್ಲ ಎಂದು ಎಸ್‌ಎಫ್‌ಐ ಕಾರ್ಯಕರ್ತರು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಈ ವೇಳೆ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯೂಐ ಕಾರ್ಯಕರ್ತರು ಮತ್ತು ಎಸ್ಎಫ್ಐನ ಪ್ರತಿಭಟನಾ ನಿರತರ ನಡುವೆ ವಾಗ್ವಾದ ಘರ್ಷಣೆ ನಡೆದಿತ್ತು. ವೇಳೆ ಎಸ್‌ಎಫ್‌ಐ ವಿದ್ಯಾರ್ಥಿಗಳು ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...