Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು....

ಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಡಲಾದ 65 ಲಕ್ಷ ಹೆಸರುಗಳನ್ನು, ಏಕೆ ಕೈ ಬಿಡಲಾಗಿದೆ ಎಂಬ ಕಾರಣದೊಂದಿಗೆ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಆ.14) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಮೇಲಿನ ನಿರ್ದೇಶನ ನೀಡಿದೆ.

ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಇದ್ದ, ಪರಿಷ್ಕರಣೆಯ ನಂತರ ಆಗಸ್ಟ್ 1ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿ ಕೈ ಬಿಡಲಾದ 65 ಲಕ್ಷ ಹೆಸರುಗಳ ವಿವರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಚುನಾವಣಾ ಆಯೋಗ ಹೇಳಿದಂತೆ ಸಾವಿಗೀಡಾದವರು ಹೆಸರುಗಳು, ಒಂದಕ್ಕಿಂತ ಹೆಚ್ಚಿರುವ ಹೆಸರುಗಳು ಮತ್ತು ವಲಸಿಗರ ಹೆಸರುಗಳನ್ನು ಒಳಗೊಂಡಿರುವ ಪಟ್ಟಿಯನ್ನು ಪಂಚಾಯತ್ ಮಟ್ಟದ ಕಚೇರಿ ಮತ್ತು ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಕಾರಣಗಳೊಂದಿಗೆ ಪ್ರದರ್ಶಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಪಟ್ಟಿ ಲಭ್ಯವಿರುವ ಸ್ಥಳಗಳ ಬಗ್ಗೆ ಜನರಿಗೆ ತಿಳಿಸಲು ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ರೇಡಿಯೋಗಳ ಜೊತೆಗೆ ಸ್ಥಳೀಯ ಮತ್ತು ಇಂಗ್ಲಿಷ್ ಸೇರಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವನ್ನು ಮಾಡುವಂತೆ ನ್ಯಾಯಪೀಠ ಒತ್ತಿ ಹೇಳಿದೆ.

ಹೆಸರು ಅಳಿಸುವಿಕೆಯಿಂದ ನೊಂದ ಜನರು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಆಗಸ್ಟ್ 22ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಪೀಠ, ಚುನಾವಣಾ ಆಯೋಗವು ತನ್ನ ನಿರ್ದೇಶನದ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಕೈಬಿಡಲಾದ 65 ಲಕ್ಷ ಮತದಾರರ ಪೈಕಿ 22.34 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 36.28 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಪರಿಶೀಲನೆಯ ವೇಳೆ ಗೈರುಹಾಜರಾದವರು ಮತ್ತು 7.01 ಲಕ್ಷ ಜನರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದಿದೆ.

ಚುನಾವಣಾ ಆಯೋಗದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಷ್ಟು ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದೆ. ಆದರೆ, ಅದರ ಹೆಚ್ಚಿನ ನಿರ್ಧಾರಗಳು ವಿವಾದಕ್ಕೊಳಗಾಗಿ ‘ತೀವ್ರ ರಾಜಕೀಯ ದ್ವೇಷದ ವಾತಾವರಣ’ದಲ್ಲಿ ಅದು ಕಾರ್ಯನಿರ್ವಹಿಸುತ್ತಿದೆ ಎಂದು ವಿಷಾದ ವ್ಯಕ್ತಿಪಡಿಸಿದ್ದಾರೆ.

ಚುನಾವಣಾ ಆಯೋಗವು ಪ್ರಸ್ತುತ ರಾಜಕೀಯ ಪಕ್ಷಗಳ ಹೋರಾಟದ ನಡುವೆ ಸಿಲುಕಿಕೊಂಡಿದೆ’ ಎಂದ ದ್ವಿವೇದಿ, “ಪಕ್ಷಗಳು ಸೋತಾಗ ಇವಿಎಂಗಳು ಸರಿ ಇಲ್ಲ ಎಂದಿತ್ತು, ಗೆದ್ದಾಗ ಇವಿಎಂಗಳು ಸರಿ ಇವೆ ಎಂದಿವೆ” ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಸುಮಾರು 6.5 ಕೋಟಿ ಜನರು ಎಸ್‌ಐಆರ್‌ಗಾಗಿ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಏಕೆಂದರೆ, ಅವರು ಅಥವಾ ಅವರ ಪೋಷಕರು 2003ರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...