Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು....

ಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಡಲಾದ 65 ಲಕ್ಷ ಹೆಸರುಗಳನ್ನು, ಏಕೆ ಕೈ ಬಿಡಲಾಗಿದೆ ಎಂಬ ಕಾರಣದೊಂದಿಗೆ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಆ.14) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಮೇಲಿನ ನಿರ್ದೇಶನ ನೀಡಿದೆ.

ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಇದ್ದ, ಪರಿಷ್ಕರಣೆಯ ನಂತರ ಆಗಸ್ಟ್ 1ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿ ಕೈ ಬಿಡಲಾದ 65 ಲಕ್ಷ ಹೆಸರುಗಳ ವಿವರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಚುನಾವಣಾ ಆಯೋಗ ಹೇಳಿದಂತೆ ಸಾವಿಗೀಡಾದವರು ಹೆಸರುಗಳು, ಒಂದಕ್ಕಿಂತ ಹೆಚ್ಚಿರುವ ಹೆಸರುಗಳು ಮತ್ತು ವಲಸಿಗರ ಹೆಸರುಗಳನ್ನು ಒಳಗೊಂಡಿರುವ ಪಟ್ಟಿಯನ್ನು ಪಂಚಾಯತ್ ಮಟ್ಟದ ಕಚೇರಿ ಮತ್ತು ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಕಾರಣಗಳೊಂದಿಗೆ ಪ್ರದರ್ಶಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಪಟ್ಟಿ ಲಭ್ಯವಿರುವ ಸ್ಥಳಗಳ ಬಗ್ಗೆ ಜನರಿಗೆ ತಿಳಿಸಲು ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ರೇಡಿಯೋಗಳ ಜೊತೆಗೆ ಸ್ಥಳೀಯ ಮತ್ತು ಇಂಗ್ಲಿಷ್ ಸೇರಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವನ್ನು ಮಾಡುವಂತೆ ನ್ಯಾಯಪೀಠ ಒತ್ತಿ ಹೇಳಿದೆ.

ಹೆಸರು ಅಳಿಸುವಿಕೆಯಿಂದ ನೊಂದ ಜನರು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಆಗಸ್ಟ್ 22ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಪೀಠ, ಚುನಾವಣಾ ಆಯೋಗವು ತನ್ನ ನಿರ್ದೇಶನದ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಕೈಬಿಡಲಾದ 65 ಲಕ್ಷ ಮತದಾರರ ಪೈಕಿ 22.34 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 36.28 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಪರಿಶೀಲನೆಯ ವೇಳೆ ಗೈರುಹಾಜರಾದವರು ಮತ್ತು 7.01 ಲಕ್ಷ ಜನರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದಿದೆ.

ಚುನಾವಣಾ ಆಯೋಗದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಷ್ಟು ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದೆ. ಆದರೆ, ಅದರ ಹೆಚ್ಚಿನ ನಿರ್ಧಾರಗಳು ವಿವಾದಕ್ಕೊಳಗಾಗಿ ‘ತೀವ್ರ ರಾಜಕೀಯ ದ್ವೇಷದ ವಾತಾವರಣ’ದಲ್ಲಿ ಅದು ಕಾರ್ಯನಿರ್ವಹಿಸುತ್ತಿದೆ ಎಂದು ವಿಷಾದ ವ್ಯಕ್ತಿಪಡಿಸಿದ್ದಾರೆ.

ಚುನಾವಣಾ ಆಯೋಗವು ಪ್ರಸ್ತುತ ರಾಜಕೀಯ ಪಕ್ಷಗಳ ಹೋರಾಟದ ನಡುವೆ ಸಿಲುಕಿಕೊಂಡಿದೆ’ ಎಂದ ದ್ವಿವೇದಿ, “ಪಕ್ಷಗಳು ಸೋತಾಗ ಇವಿಎಂಗಳು ಸರಿ ಇಲ್ಲ ಎಂದಿತ್ತು, ಗೆದ್ದಾಗ ಇವಿಎಂಗಳು ಸರಿ ಇವೆ ಎಂದಿವೆ” ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಸುಮಾರು 6.5 ಕೋಟಿ ಜನರು ಎಸ್‌ಐಆರ್‌ಗಾಗಿ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಏಕೆಂದರೆ, ಅವರು ಅಥವಾ ಅವರ ಪೋಷಕರು 2003ರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...