Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು....

ಬಿಹಾರ ಮತದಾರರ ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣ ಬಹಿರಂಗಪಡಿಸಿ: ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಬಿಹಾರದ ಮತದಾರರ ಪಟ್ಟಿಯಿಂದ ಕೈ ಬಿಡಲಾದ 65 ಲಕ್ಷ ಹೆಸರುಗಳನ್ನು, ಏಕೆ ಕೈ ಬಿಡಲಾಗಿದೆ ಎಂಬ ಕಾರಣದೊಂದಿಗೆ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಆ.14) ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಮೇಲಿನ ನಿರ್ದೇಶನ ನೀಡಿದೆ.

ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಇದ್ದ, ಪರಿಷ್ಕರಣೆಯ ನಂತರ ಆಗಸ್ಟ್ 1ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿ ಕೈ ಬಿಡಲಾದ 65 ಲಕ್ಷ ಹೆಸರುಗಳ ವಿವರ ನೀಡುವಂತೆ ನ್ಯಾಯಾಲಯ ಸೂಚಿಸಿದೆ.

ಚುನಾವಣಾ ಆಯೋಗ ಹೇಳಿದಂತೆ ಸಾವಿಗೀಡಾದವರು ಹೆಸರುಗಳು, ಒಂದಕ್ಕಿಂತ ಹೆಚ್ಚಿರುವ ಹೆಸರುಗಳು ಮತ್ತು ವಲಸಿಗರ ಹೆಸರುಗಳನ್ನು ಒಳಗೊಂಡಿರುವ ಪಟ್ಟಿಯನ್ನು ಪಂಚಾಯತ್ ಮಟ್ಟದ ಕಚೇರಿ ಮತ್ತು ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ಕಾರಣಗಳೊಂದಿಗೆ ಪ್ರದರ್ಶಿಸಲು ನ್ಯಾಯಾಲಯ ನಿರ್ದೇಶಿಸಿದೆ.

ಪಟ್ಟಿ ಲಭ್ಯವಿರುವ ಸ್ಥಳಗಳ ಬಗ್ಗೆ ಜನರಿಗೆ ತಿಳಿಸಲು ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ರೇಡಿಯೋಗಳ ಜೊತೆಗೆ ಸ್ಥಳೀಯ ಮತ್ತು ಇಂಗ್ಲಿಷ್ ಸೇರಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವನ್ನು ಮಾಡುವಂತೆ ನ್ಯಾಯಪೀಠ ಒತ್ತಿ ಹೇಳಿದೆ.

ಹೆಸರು ಅಳಿಸುವಿಕೆಯಿಂದ ನೊಂದ ಜನರು ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಆಗಸ್ಟ್ 22ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ಪೀಠ, ಚುನಾವಣಾ ಆಯೋಗವು ತನ್ನ ನಿರ್ದೇಶನದ ಅನುಸರಣಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಕೈಬಿಡಲಾದ 65 ಲಕ್ಷ ಮತದಾರರ ಪೈಕಿ 22.34 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, 36.28 ಲಕ್ಷ ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಅಥವಾ ಪರಿಶೀಲನೆಯ ವೇಳೆ ಗೈರುಹಾಜರಾದವರು ಮತ್ತು 7.01 ಲಕ್ಷ ಜನರ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ದಾಖಲಾಗಿತ್ತು ಎಂದಿದೆ.

ಚುನಾವಣಾ ಆಯೋಗದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವಷ್ಟು ಅಧಿಕಾರವನ್ನು ಚುನಾವಣಾ ಆಯೋಗ ಹೊಂದಿದೆ. ಆದರೆ, ಅದರ ಹೆಚ್ಚಿನ ನಿರ್ಧಾರಗಳು ವಿವಾದಕ್ಕೊಳಗಾಗಿ ‘ತೀವ್ರ ರಾಜಕೀಯ ದ್ವೇಷದ ವಾತಾವರಣ’ದಲ್ಲಿ ಅದು ಕಾರ್ಯನಿರ್ವಹಿಸುತ್ತಿದೆ ಎಂದು ವಿಷಾದ ವ್ಯಕ್ತಿಪಡಿಸಿದ್ದಾರೆ.

ಚುನಾವಣಾ ಆಯೋಗವು ಪ್ರಸ್ತುತ ರಾಜಕೀಯ ಪಕ್ಷಗಳ ಹೋರಾಟದ ನಡುವೆ ಸಿಲುಕಿಕೊಂಡಿದೆ’ ಎಂದ ದ್ವಿವೇದಿ, “ಪಕ್ಷಗಳು ಸೋತಾಗ ಇವಿಎಂಗಳು ಸರಿ ಇಲ್ಲ ಎಂದಿತ್ತು, ಗೆದ್ದಾಗ ಇವಿಎಂಗಳು ಸರಿ ಇವೆ ಎಂದಿವೆ” ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಸುಮಾರು 6.5 ಕೋಟಿ ಜನರು ಎಸ್‌ಐಆರ್‌ಗಾಗಿ ಯಾವುದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ. ಏಕೆಂದರೆ, ಅವರು ಅಥವಾ ಅವರ ಪೋಷಕರು 2003ರ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ ಎಂದು ದ್ವಿವೇದಿ ತಿಳಿಸಿದ್ದಾರೆ.

ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...