HomeUncategorizedಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದಲ್ಲಿ ಟಾಪರ್ ಗಳಾದ ನಮ್ಮೂರಿನ ಹುಡುಗಿಯರು ಇಂದು ಏನಾಗಿದ್ದಾರೆ ಗೊತ್ತೇ?

- Advertisement -
- Advertisement -

| ಡಾ.ಅರುಣ್ ಜೋಳದಕೂಡ್ಲಿಗಿ |

ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂದಾಗಿರುವುದರಿಂದ ಎಸ್.ಎಸ್.ಎಲ್.ಸಿ ನಂತರರ ಓದಿನ ಆಯ್ಕೆಯಲ್ಲಿ ಕಲಾ ವಿಭಾಗಕ್ಕಿಂತ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕಲಾ ವಿಭಾಗವನ್ನು ಆಯ್ದುಕೊಳ್ಳುವುದೆಂದರೆ ಬಡವರು, ಹಳ್ಳಿಗರು, ಕನ್ನಡ ಮೀಡಿಯಂ ಓದಿದವರು, ಕಡಿಮೆ ಖರ್ಚಿನ ಕೋರ್ಸು, ಓದಿದರೂ ಉದ್ಯೋಗ ಕಷ್ಟ ಎನ್ನುವ ಸಮೀಕರಣವಿದೆ. ಅದಕ್ಕೆ ವಿರುದ್ಧವಾಗಿ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಯು ಉಳ್ಳವರು, ಇಂಗ್ಲೀಷ್ ಕಲಿತವರು, ನಗರದವರು, ಓದಿನ ಖರ್ಚು ಹೆಚ್ಚು, ಓದಿಗೆ ಉದ್ಯೋಗವಿದೆ ಇತ್ಯಾದಿಗಳು ತಳಕು ಹಾಕಿವೆ. ಇದರಲ್ಲಿ ಕೆಲವು ಸಂಗತಿಗಳು ವಾಸ್ತವ ಕೂಡ. ವ್ಯವಸ್ಥೆಯೂ ಇದಕ್ಕೆ ಪೂರಕವಾಗಿದೆ.ಈ ನಡುವೆ ಕಳೆದ ಒಂದೆರಡು ದಶಕದಲ್ಲಿ ಕಲಾವಿಭಾಗದ ಆಯ್ಕೆಯ ಬದಲಿಗೆ ಇದೇ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗಕ್ಕೆ ಬದಲಾಗುತ್ತಿದ್ದಾರೆ.

ಕುಸುಮ

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜು ಸತತವಾಗಿ 5 ವರ್ಷ ಕಲಾವಿಭಾಗದಲ್ಲಿ ಮೊದಲ ಸ್ಥಾನ ಪಡೆಯುತ್ತಿದೆ. ಇದೊಂದು ರೀತಿಯಲ್ಲಿ ಖಾಸಗಿ ಕಾಲೇಜುಗಳು ವಿಜ್ಞಾನ ವಾಣಿಜ್ಯ ಕಂಪ್ಯೂಟರ್ ವಿಭಾಗವನ್ನು ಹೊತ್ತು ಮೆರೆಸುವಾಗ, ಈ ಕಾಲೇಜಿನ ಕಲಾ ವಿಭಾಗದ ಒಲವು ಮೆಚ್ಚುವಂತಹದ್ದು. ಈ ರ್ಯಾಂಕುಗಳ ಮೂಲಕ ಇಂದು ಕಾಲೇಜು ರಾಜ್ಯದ ಗಮನ ಸೆಳೆದಿದೆ. ಹೀಗಿರುವಾಗಲೂ ಬರೀ ರ್ಯಾಂಕ್‍ಗಳ ಮೂಲಕ ಕಲಾ ವಿಭಾಗದ ಮೌಲ್ಯವನ್ನು ಹೆಚ್ಚಿಸಬಹುದೇ? ಬಹುಶಃ ಸಾಧ್ಯವಿಲ್ಲ. ಬದಲಿಗೆ ರ್ಯಾಂಕಿನ ಅಥವ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ಪ್ರತಿಭೆಗಳಿಗೆ ತಕ್ಕುನಾದ ಉಜ್ವಲ ಭವಿಷ್ಯ ರೂಪುಗೊಂಡರೆ ಮಾತ್ರ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಒಲವು ಮತ್ತು ಹುರುಪು ಹೆಚ್ಚಬಹುದು.

ಈ ಕಾರಣಕ್ಕೆ ಕೊಟ್ಟೂರಿನ ಇಂದು ಕಾಲೇಜಿನಲ್ಲಿ ಕಳೆದ ಐದು ವರ್ಷ ಮೊದಲ ಟಾಪರ್ ಹುಡುಗಿಯರನ್ನು ಮಾತನಾಡಿಸಿದೆ. ಐದೂ ಜನರೂ ಕೆಳಜಾತಿ ಮತ್ತು ಕೆಳವರ್ಗಕ್ಕೆ ಸೇರಿದವರು. ಇವರೆಲ್ಲಾ ಟಾಪರ್ ಆದಾಗ ಪ್ರತಿಕ್ರಿಯೆಯಾಗಿ ಕೆ.ಎ.ಎಸ್. ಐ.ಎ.ಎಸ್ ಮೊದಲಾದ ಉನ್ನತ ಹುದ್ದೆಗಳ ಕನಸು ಕಂಡಿದ್ದರು. ಆದರೆ ಹೆಚ್ಚುವರಿ ಅಂಕಗಳು ಅವರನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ತಡೆಯೊಡ್ಡಿತು. ಹಾಗಾಗಿ ಈ ವರ್ಷದ ಟಾಪರ್ ಕುಸುಮಾಳನ್ನು (2019 ಪಡೆದ ಅಂಕ 594) ಹೊರತುಪಡಿಸಿ ಉಳಿದ ನೇತ್ರಾವತಿ ಎಂ.ಬಿ (2015/579), ಅನಿತಾ ಪಿ (2016/585), ಚೈತ್ರ.ಬಿ (2017/589) ಸ್ವಾತಿ ಎಸ್. (2018/595) ಈ ನಾಲ್ವರು ವಿಲೇಜ್ ಅಕೌಂಟೆಂಟ್(ವಿ.ಎ) ಆಗಿದ್ದಾರೆ.

ಅನಿತಾ

ಸದ್ಯಕ್ಕೆ ಎಲ್ಲರೂ ದೂರಶಿಕ್ಷಣದಲ್ಲಿ ಬಿ.ಎ ಮಾಡುತ್ತಿದ್ದು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆ.ಎ.ಎಸ್ ಅಥವಾ ಐ.ಎ.ಎಸ್ ತೆಗೆದುಕೊಳ್ಳುವುದಾಗಿ ಚೂರು ಮೆಲ್ಲಗೆ ಹೇಳುತ್ತಾರೆ. ಟಾಪರ್ ಆದಾಗ ಪ್ರತಿಕ್ರಿಯಿಸಿದ ಆತ್ಮವಿಶ್ವಾಸ ಇದೀಗ ಕುಗ್ಗಿದೆ. ಇವರೆಲ್ಲಾ ಹೇಳುವ ಕಾರಣ ತಮ್ಮ ಮನೆಗಳ ಬಡತನದ್ದು. ಮುಂದೆ ಓದುವ ಕನಸಿದ್ದರೂ ಬಡತನದ ಕಾರಣ ಉದ್ಯೋಗದ ಮುಂದೆ ಬೇರೆ ಆಯ್ಕೆಯಿಲ್ಲ. ಆದರೆ ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ರ್ಯಾಂಕ್ ವಿದ್ಯಾರ್ಥಿಗಳು ಬಹುಪಾಲು ಮುಂದಿನ ವಿದ್ಯಾಭ್ಯಾಸದಲ್ಲಿ ತೊಡಗುವುದು ಹೆಚ್ಚು. ಇವರ ಓದಿಗೆ ಸಾಂಸ್ಥಿಕ ಸಹಾಯ ಸಿಗುವುದಲ್ಲದೆ, ಮುಂದೆ ಒಳ್ಳೆಯ ಸಂಬಳದ ಉದ್ಯೋಗ ಸಿಗುವ ಭರವಸೆ ಕೂಡಾ ಇರುತ್ತದೆ.

ಇಲ್ಲಿ ಮುಖ್ಯವಾಗಿ ಇಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಇಂಗ್ಲೀಷ್ ಬದಲಿಗೆ ಸಂಸ್ಕೃತವನ್ನೂ, ಉಳಿದಂತೆ ಶಿಕ್ಷಣ, ಕಡ್ಡಾಯ ಕನ್ನಡದ ಜತೆ ಐಚ್ಚಿಕ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. `ಅತಿಹೆಚ್ಚು ಕಿರುಪರೀಕ್ಷೆಗಳನ್ನು ಆಯೋಜಿಸುವುದು, ನಿರಂತರವಾಗಿ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತರಬೇತಿ ಕೊಡುವುದು ರ್ಯಾಂಕಿಗೆ ಕಾರಣ’ ಎಂದು ಇಂದು ಕಾಲೇಜಿನ ಪ್ರಾಂಶುಪಾಲರಾದ ಭದ್ರಿನಾಥ ಹೇಳುತ್ತಾರೆ. ಬಹುಶಃ ಈ ಬಗೆಯ ವಿಷಯದ ಆಯ್ಕೆಯೂ ಟಾಪರ್ ಆದವರಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲೀಷ್ ಭಾಷೆ ತೊಡಕಾಗುವ ಭಯವಿರಬಹುದು. ಇದರಿಂದಾಗಿಯೂ ಪಿಯುನ ಹೆಚ್ಚಿನ ಅಂಕದ ಕಾರಣಕ್ಕೆ ಸಿಕ್ಕ ವಿ.ಎ ಹುದ್ದೆಯನ್ನು ತಿರಸ್ಕರಿಸಲು ಸಾಧ್ಯವಾಗಿಲ್ಲ.

ಚೈತ್ರ

ಇಂದು ಇಡೀ ದೇಶದಲ್ಲಿ ಮಾನವಿಕ ವಿಜ್ಞಾನಗಳು ನಿರುದ್ಯೋಗದ ಕೋರ್ಸ್‍ಗಳೆಂಬಂತೆ ಅಪಮೌಲ್ಯಕ್ಕೆ ಒಳಗಾಗಿವೆ. ಇಂದು ಬಹುಸಂಖ್ಯಾತ ಯುವಜನರು ಸಮಾಜದ ಬಗೆಗೆ ಅರಿವು ಮೂಡಿಸಿಕೊಳ್ಳದೆ, ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ಓದಿನ ಆಯ್ಕೆಗೆ ಒಳಗಾದ ಕಾರಣ ಮಕ್ಕಳಿಗೆ ತನ್ನದೇ ಸಮಾಜದ ಸೂಕ್ಷ್ಮ ತಿಳುವಳಿಕೆಯೂ ಇಲ್ಲದಾಗುತ್ತದೆ. ಇಂತಹ ಕಲೆಯೇತರ ಆಯ್ಕೆಗಳು ಹೆಚ್ಚಾದಂತೆ ಅರಾಜಕ ಯುವಜನರೂ ಹೆಚ್ಚುವ ಸಾಧ್ಯತೆಯಿದೆ. ಇದರಿಂದಾಗಿ ಯುವಜನರಲ್ಲಿ ಸಮಾಜದ ಜತೆಗಿನ ಸಾವಯವ ಸಂಬಂಧದ ನಡವಳಿಕೆ ಇಲ್ಲವಾಗಿ, ಉಡಾಫೆಯ ಭಾವವನ್ನು ಬೆಳಸಿಕೊಳ್ಳುವ ಸಾಧ್ಯತೆಯಿದೆ. ಅಂತೆಯೇ ಸಮಾಜದ ಸಮಗ್ರ ಬೆಳವಳಿಗೆಯ ಕಡೆಗಲ್ಲದೆ, ಅಸಮಾನ ಸಮಾಜದ ಬೆಳವಣಿಗೆಯ ಪಾಲುದಾರರಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಸರಕಾರಗಳು ಕಲಾವಿಭಾಗಕ್ಕೆ ಹಚ್ಚು ಮೌಲ್ಯ ಪ್ರಾಪ್ತವಾಗುವಂತೆ ಪಠ್ಯಕ್ರಮಗಳನ್ನು ಅಳವಡಿಸುವುದು, ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಕೋರ್ಸ್‍ಗಳಲ್ಲಿಯೂ ಕನಿಷ್ಠ ಎರಡು ಮೂರು ಮಾನವಿಕ ವಿಷಯಗಳನ್ನು ಕಡ್ಡಾಯವಾಗಿ ಓದಲೆಬೇಕೆನ್ನುವ ಕಟ್ಟುನಿಟ್ಟಿನ ನಿಯಮ ತರುವುದು. ಜ್ಞಾನ ಪರಂಪರೆಯಲ್ಲಿ ದೇಸಿ ಜ್ಞಾನವೆ ಮೂಲವಾದ ಕಾರಣ ಎಲ್ಲಾ ಕೋರ್ಸುಗಳಲ್ಲಿ ಕಡ್ಡಾಯವಾಗಿ ದೇಸಿಜ್ಞಾನದ ಪಠ್ಯವನ್ನು ಅಳವಡಿಸುವುದು, ಇದಕ್ಕೆ ವಿಶೇಷವಾಗಿ ಜಾನಪದ ಪದವಿ ಪಡೆದವರನ್ನು ಬೋಧಕರನ್ನಾಗಿ ಆಯ್ಕೆ ಮಾಡುವುದು, ಅದಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಠಿಸುವುದು, ಕಲಾವಿಭಾಗದಲ್ಲಿ ರ್ಯಾಂಕ್ ಪಡೆದವರಿಗೆ ವಿಶೇಷ ಕೋಟದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯವನ್ನೂ ಒಳಗೊಂಡಂತೆ ಕಲಾ ವಿಭಾಗವನ್ನು ಮೌಲ್ಯೀಕರಿಸುವ ಕೆಲವು ಕಟ್ಟುನಿಟ್ಟಾದ ಯೋಜನೆಗಳನ್ನು ರೂಪಿಸಿಸಬೇಕಿದೆ. ಹೀಗೆ ಕಲಾವಿಭಾಗಕ್ಕೆ ಉಜ್ಞಲ ಭವಿಷ್ಯದ ದಾರಿಗಳು ತೆರೆದರೆ, ಈ ವಿಭಾಗದ ರ್ಯಾಂಕ್ ವಿದ್ಯಾರ್ಥಿಗಳು ಸಹಜವಾಗಿ ಎತ್ತರದ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡು ಹಾರಲು ಸಜ್ಜಾಗುತ್ತಾರೆ.

(ಲೇಖಕರು ಪೋಸ್ಟ್ ಡಾಕ್ಟರಲ್ ಫೆಲೋ, ಕನ್ನಡ ವಿಶ್ವವಿದ್ಯಾಲಯ ಹಂಪಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...