HomeUncategorizedಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದಲ್ಲಿ ಟಾಪರ್ ಗಳಾದ ನಮ್ಮೂರಿನ ಹುಡುಗಿಯರು ಇಂದು ಏನಾಗಿದ್ದಾರೆ ಗೊತ್ತೇ?

- Advertisement -
- Advertisement -

| ಡಾ.ಅರುಣ್ ಜೋಳದಕೂಡ್ಲಿಗಿ |

ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂದಾಗಿರುವುದರಿಂದ ಎಸ್.ಎಸ್.ಎಲ್.ಸಿ ನಂತರರ ಓದಿನ ಆಯ್ಕೆಯಲ್ಲಿ ಕಲಾ ವಿಭಾಗಕ್ಕಿಂತ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕಲಾ ವಿಭಾಗವನ್ನು ಆಯ್ದುಕೊಳ್ಳುವುದೆಂದರೆ ಬಡವರು, ಹಳ್ಳಿಗರು, ಕನ್ನಡ ಮೀಡಿಯಂ ಓದಿದವರು, ಕಡಿಮೆ ಖರ್ಚಿನ ಕೋರ್ಸು, ಓದಿದರೂ ಉದ್ಯೋಗ ಕಷ್ಟ ಎನ್ನುವ ಸಮೀಕರಣವಿದೆ. ಅದಕ್ಕೆ ವಿರುದ್ಧವಾಗಿ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಯು ಉಳ್ಳವರು, ಇಂಗ್ಲೀಷ್ ಕಲಿತವರು, ನಗರದವರು, ಓದಿನ ಖರ್ಚು ಹೆಚ್ಚು, ಓದಿಗೆ ಉದ್ಯೋಗವಿದೆ ಇತ್ಯಾದಿಗಳು ತಳಕು ಹಾಕಿವೆ. ಇದರಲ್ಲಿ ಕೆಲವು ಸಂಗತಿಗಳು ವಾಸ್ತವ ಕೂಡ. ವ್ಯವಸ್ಥೆಯೂ ಇದಕ್ಕೆ ಪೂರಕವಾಗಿದೆ.ಈ ನಡುವೆ ಕಳೆದ ಒಂದೆರಡು ದಶಕದಲ್ಲಿ ಕಲಾವಿಭಾಗದ ಆಯ್ಕೆಯ ಬದಲಿಗೆ ಇದೇ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗಕ್ಕೆ ಬದಲಾಗುತ್ತಿದ್ದಾರೆ.

ಕುಸುಮ

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜು ಸತತವಾಗಿ 5 ವರ್ಷ ಕಲಾವಿಭಾಗದಲ್ಲಿ ಮೊದಲ ಸ್ಥಾನ ಪಡೆಯುತ್ತಿದೆ. ಇದೊಂದು ರೀತಿಯಲ್ಲಿ ಖಾಸಗಿ ಕಾಲೇಜುಗಳು ವಿಜ್ಞಾನ ವಾಣಿಜ್ಯ ಕಂಪ್ಯೂಟರ್ ವಿಭಾಗವನ್ನು ಹೊತ್ತು ಮೆರೆಸುವಾಗ, ಈ ಕಾಲೇಜಿನ ಕಲಾ ವಿಭಾಗದ ಒಲವು ಮೆಚ್ಚುವಂತಹದ್ದು. ಈ ರ್ಯಾಂಕುಗಳ ಮೂಲಕ ಇಂದು ಕಾಲೇಜು ರಾಜ್ಯದ ಗಮನ ಸೆಳೆದಿದೆ. ಹೀಗಿರುವಾಗಲೂ ಬರೀ ರ್ಯಾಂಕ್‍ಗಳ ಮೂಲಕ ಕಲಾ ವಿಭಾಗದ ಮೌಲ್ಯವನ್ನು ಹೆಚ್ಚಿಸಬಹುದೇ? ಬಹುಶಃ ಸಾಧ್ಯವಿಲ್ಲ. ಬದಲಿಗೆ ರ್ಯಾಂಕಿನ ಅಥವ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ಪ್ರತಿಭೆಗಳಿಗೆ ತಕ್ಕುನಾದ ಉಜ್ವಲ ಭವಿಷ್ಯ ರೂಪುಗೊಂಡರೆ ಮಾತ್ರ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಒಲವು ಮತ್ತು ಹುರುಪು ಹೆಚ್ಚಬಹುದು.

ಈ ಕಾರಣಕ್ಕೆ ಕೊಟ್ಟೂರಿನ ಇಂದು ಕಾಲೇಜಿನಲ್ಲಿ ಕಳೆದ ಐದು ವರ್ಷ ಮೊದಲ ಟಾಪರ್ ಹುಡುಗಿಯರನ್ನು ಮಾತನಾಡಿಸಿದೆ. ಐದೂ ಜನರೂ ಕೆಳಜಾತಿ ಮತ್ತು ಕೆಳವರ್ಗಕ್ಕೆ ಸೇರಿದವರು. ಇವರೆಲ್ಲಾ ಟಾಪರ್ ಆದಾಗ ಪ್ರತಿಕ್ರಿಯೆಯಾಗಿ ಕೆ.ಎ.ಎಸ್. ಐ.ಎ.ಎಸ್ ಮೊದಲಾದ ಉನ್ನತ ಹುದ್ದೆಗಳ ಕನಸು ಕಂಡಿದ್ದರು. ಆದರೆ ಹೆಚ್ಚುವರಿ ಅಂಕಗಳು ಅವರನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ತಡೆಯೊಡ್ಡಿತು. ಹಾಗಾಗಿ ಈ ವರ್ಷದ ಟಾಪರ್ ಕುಸುಮಾಳನ್ನು (2019 ಪಡೆದ ಅಂಕ 594) ಹೊರತುಪಡಿಸಿ ಉಳಿದ ನೇತ್ರಾವತಿ ಎಂ.ಬಿ (2015/579), ಅನಿತಾ ಪಿ (2016/585), ಚೈತ್ರ.ಬಿ (2017/589) ಸ್ವಾತಿ ಎಸ್. (2018/595) ಈ ನಾಲ್ವರು ವಿಲೇಜ್ ಅಕೌಂಟೆಂಟ್(ವಿ.ಎ) ಆಗಿದ್ದಾರೆ.

ಅನಿತಾ

ಸದ್ಯಕ್ಕೆ ಎಲ್ಲರೂ ದೂರಶಿಕ್ಷಣದಲ್ಲಿ ಬಿ.ಎ ಮಾಡುತ್ತಿದ್ದು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆ.ಎ.ಎಸ್ ಅಥವಾ ಐ.ಎ.ಎಸ್ ತೆಗೆದುಕೊಳ್ಳುವುದಾಗಿ ಚೂರು ಮೆಲ್ಲಗೆ ಹೇಳುತ್ತಾರೆ. ಟಾಪರ್ ಆದಾಗ ಪ್ರತಿಕ್ರಿಯಿಸಿದ ಆತ್ಮವಿಶ್ವಾಸ ಇದೀಗ ಕುಗ್ಗಿದೆ. ಇವರೆಲ್ಲಾ ಹೇಳುವ ಕಾರಣ ತಮ್ಮ ಮನೆಗಳ ಬಡತನದ್ದು. ಮುಂದೆ ಓದುವ ಕನಸಿದ್ದರೂ ಬಡತನದ ಕಾರಣ ಉದ್ಯೋಗದ ಮುಂದೆ ಬೇರೆ ಆಯ್ಕೆಯಿಲ್ಲ. ಆದರೆ ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ರ್ಯಾಂಕ್ ವಿದ್ಯಾರ್ಥಿಗಳು ಬಹುಪಾಲು ಮುಂದಿನ ವಿದ್ಯಾಭ್ಯಾಸದಲ್ಲಿ ತೊಡಗುವುದು ಹೆಚ್ಚು. ಇವರ ಓದಿಗೆ ಸಾಂಸ್ಥಿಕ ಸಹಾಯ ಸಿಗುವುದಲ್ಲದೆ, ಮುಂದೆ ಒಳ್ಳೆಯ ಸಂಬಳದ ಉದ್ಯೋಗ ಸಿಗುವ ಭರವಸೆ ಕೂಡಾ ಇರುತ್ತದೆ.

ಇಲ್ಲಿ ಮುಖ್ಯವಾಗಿ ಇಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಇಂಗ್ಲೀಷ್ ಬದಲಿಗೆ ಸಂಸ್ಕೃತವನ್ನೂ, ಉಳಿದಂತೆ ಶಿಕ್ಷಣ, ಕಡ್ಡಾಯ ಕನ್ನಡದ ಜತೆ ಐಚ್ಚಿಕ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. `ಅತಿಹೆಚ್ಚು ಕಿರುಪರೀಕ್ಷೆಗಳನ್ನು ಆಯೋಜಿಸುವುದು, ನಿರಂತರವಾಗಿ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತರಬೇತಿ ಕೊಡುವುದು ರ್ಯಾಂಕಿಗೆ ಕಾರಣ’ ಎಂದು ಇಂದು ಕಾಲೇಜಿನ ಪ್ರಾಂಶುಪಾಲರಾದ ಭದ್ರಿನಾಥ ಹೇಳುತ್ತಾರೆ. ಬಹುಶಃ ಈ ಬಗೆಯ ವಿಷಯದ ಆಯ್ಕೆಯೂ ಟಾಪರ್ ಆದವರಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲೀಷ್ ಭಾಷೆ ತೊಡಕಾಗುವ ಭಯವಿರಬಹುದು. ಇದರಿಂದಾಗಿಯೂ ಪಿಯುನ ಹೆಚ್ಚಿನ ಅಂಕದ ಕಾರಣಕ್ಕೆ ಸಿಕ್ಕ ವಿ.ಎ ಹುದ್ದೆಯನ್ನು ತಿರಸ್ಕರಿಸಲು ಸಾಧ್ಯವಾಗಿಲ್ಲ.

ಚೈತ್ರ

ಇಂದು ಇಡೀ ದೇಶದಲ್ಲಿ ಮಾನವಿಕ ವಿಜ್ಞಾನಗಳು ನಿರುದ್ಯೋಗದ ಕೋರ್ಸ್‍ಗಳೆಂಬಂತೆ ಅಪಮೌಲ್ಯಕ್ಕೆ ಒಳಗಾಗಿವೆ. ಇಂದು ಬಹುಸಂಖ್ಯಾತ ಯುವಜನರು ಸಮಾಜದ ಬಗೆಗೆ ಅರಿವು ಮೂಡಿಸಿಕೊಳ್ಳದೆ, ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ಓದಿನ ಆಯ್ಕೆಗೆ ಒಳಗಾದ ಕಾರಣ ಮಕ್ಕಳಿಗೆ ತನ್ನದೇ ಸಮಾಜದ ಸೂಕ್ಷ್ಮ ತಿಳುವಳಿಕೆಯೂ ಇಲ್ಲದಾಗುತ್ತದೆ. ಇಂತಹ ಕಲೆಯೇತರ ಆಯ್ಕೆಗಳು ಹೆಚ್ಚಾದಂತೆ ಅರಾಜಕ ಯುವಜನರೂ ಹೆಚ್ಚುವ ಸಾಧ್ಯತೆಯಿದೆ. ಇದರಿಂದಾಗಿ ಯುವಜನರಲ್ಲಿ ಸಮಾಜದ ಜತೆಗಿನ ಸಾವಯವ ಸಂಬಂಧದ ನಡವಳಿಕೆ ಇಲ್ಲವಾಗಿ, ಉಡಾಫೆಯ ಭಾವವನ್ನು ಬೆಳಸಿಕೊಳ್ಳುವ ಸಾಧ್ಯತೆಯಿದೆ. ಅಂತೆಯೇ ಸಮಾಜದ ಸಮಗ್ರ ಬೆಳವಳಿಗೆಯ ಕಡೆಗಲ್ಲದೆ, ಅಸಮಾನ ಸಮಾಜದ ಬೆಳವಣಿಗೆಯ ಪಾಲುದಾರರಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಸರಕಾರಗಳು ಕಲಾವಿಭಾಗಕ್ಕೆ ಹಚ್ಚು ಮೌಲ್ಯ ಪ್ರಾಪ್ತವಾಗುವಂತೆ ಪಠ್ಯಕ್ರಮಗಳನ್ನು ಅಳವಡಿಸುವುದು, ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಕೋರ್ಸ್‍ಗಳಲ್ಲಿಯೂ ಕನಿಷ್ಠ ಎರಡು ಮೂರು ಮಾನವಿಕ ವಿಷಯಗಳನ್ನು ಕಡ್ಡಾಯವಾಗಿ ಓದಲೆಬೇಕೆನ್ನುವ ಕಟ್ಟುನಿಟ್ಟಿನ ನಿಯಮ ತರುವುದು. ಜ್ಞಾನ ಪರಂಪರೆಯಲ್ಲಿ ದೇಸಿ ಜ್ಞಾನವೆ ಮೂಲವಾದ ಕಾರಣ ಎಲ್ಲಾ ಕೋರ್ಸುಗಳಲ್ಲಿ ಕಡ್ಡಾಯವಾಗಿ ದೇಸಿಜ್ಞಾನದ ಪಠ್ಯವನ್ನು ಅಳವಡಿಸುವುದು, ಇದಕ್ಕೆ ವಿಶೇಷವಾಗಿ ಜಾನಪದ ಪದವಿ ಪಡೆದವರನ್ನು ಬೋಧಕರನ್ನಾಗಿ ಆಯ್ಕೆ ಮಾಡುವುದು, ಅದಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಠಿಸುವುದು, ಕಲಾವಿಭಾಗದಲ್ಲಿ ರ್ಯಾಂಕ್ ಪಡೆದವರಿಗೆ ವಿಶೇಷ ಕೋಟದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯವನ್ನೂ ಒಳಗೊಂಡಂತೆ ಕಲಾ ವಿಭಾಗವನ್ನು ಮೌಲ್ಯೀಕರಿಸುವ ಕೆಲವು ಕಟ್ಟುನಿಟ್ಟಾದ ಯೋಜನೆಗಳನ್ನು ರೂಪಿಸಿಸಬೇಕಿದೆ. ಹೀಗೆ ಕಲಾವಿಭಾಗಕ್ಕೆ ಉಜ್ಞಲ ಭವಿಷ್ಯದ ದಾರಿಗಳು ತೆರೆದರೆ, ಈ ವಿಭಾಗದ ರ್ಯಾಂಕ್ ವಿದ್ಯಾರ್ಥಿಗಳು ಸಹಜವಾಗಿ ಎತ್ತರದ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡು ಹಾರಲು ಸಜ್ಜಾಗುತ್ತಾರೆ.

(ಲೇಖಕರು ಪೋಸ್ಟ್ ಡಾಕ್ಟರಲ್ ಫೆಲೋ, ಕನ್ನಡ ವಿಶ್ವವಿದ್ಯಾಲಯ ಹಂಪಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...