HomeUncategorizedಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದಲ್ಲಿ ಟಾಪರ್ ಗಳಾದ ನಮ್ಮೂರಿನ ಹುಡುಗಿಯರು ಇಂದು ಏನಾಗಿದ್ದಾರೆ ಗೊತ್ತೇ?

- Advertisement -
- Advertisement -

| ಡಾ.ಅರುಣ್ ಜೋಳದಕೂಡ್ಲಿಗಿ |

ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂದಾಗಿರುವುದರಿಂದ ಎಸ್.ಎಸ್.ಎಲ್.ಸಿ ನಂತರರ ಓದಿನ ಆಯ್ಕೆಯಲ್ಲಿ ಕಲಾ ವಿಭಾಗಕ್ಕಿಂತ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕಲಾ ವಿಭಾಗವನ್ನು ಆಯ್ದುಕೊಳ್ಳುವುದೆಂದರೆ ಬಡವರು, ಹಳ್ಳಿಗರು, ಕನ್ನಡ ಮೀಡಿಯಂ ಓದಿದವರು, ಕಡಿಮೆ ಖರ್ಚಿನ ಕೋರ್ಸು, ಓದಿದರೂ ಉದ್ಯೋಗ ಕಷ್ಟ ಎನ್ನುವ ಸಮೀಕರಣವಿದೆ. ಅದಕ್ಕೆ ವಿರುದ್ಧವಾಗಿ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಯು ಉಳ್ಳವರು, ಇಂಗ್ಲೀಷ್ ಕಲಿತವರು, ನಗರದವರು, ಓದಿನ ಖರ್ಚು ಹೆಚ್ಚು, ಓದಿಗೆ ಉದ್ಯೋಗವಿದೆ ಇತ್ಯಾದಿಗಳು ತಳಕು ಹಾಕಿವೆ. ಇದರಲ್ಲಿ ಕೆಲವು ಸಂಗತಿಗಳು ವಾಸ್ತವ ಕೂಡ. ವ್ಯವಸ್ಥೆಯೂ ಇದಕ್ಕೆ ಪೂರಕವಾಗಿದೆ.ಈ ನಡುವೆ ಕಳೆದ ಒಂದೆರಡು ದಶಕದಲ್ಲಿ ಕಲಾವಿಭಾಗದ ಆಯ್ಕೆಯ ಬದಲಿಗೆ ಇದೇ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗಕ್ಕೆ ಬದಲಾಗುತ್ತಿದ್ದಾರೆ.

ಕುಸುಮ

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜು ಸತತವಾಗಿ 5 ವರ್ಷ ಕಲಾವಿಭಾಗದಲ್ಲಿ ಮೊದಲ ಸ್ಥಾನ ಪಡೆಯುತ್ತಿದೆ. ಇದೊಂದು ರೀತಿಯಲ್ಲಿ ಖಾಸಗಿ ಕಾಲೇಜುಗಳು ವಿಜ್ಞಾನ ವಾಣಿಜ್ಯ ಕಂಪ್ಯೂಟರ್ ವಿಭಾಗವನ್ನು ಹೊತ್ತು ಮೆರೆಸುವಾಗ, ಈ ಕಾಲೇಜಿನ ಕಲಾ ವಿಭಾಗದ ಒಲವು ಮೆಚ್ಚುವಂತಹದ್ದು. ಈ ರ್ಯಾಂಕುಗಳ ಮೂಲಕ ಇಂದು ಕಾಲೇಜು ರಾಜ್ಯದ ಗಮನ ಸೆಳೆದಿದೆ. ಹೀಗಿರುವಾಗಲೂ ಬರೀ ರ್ಯಾಂಕ್‍ಗಳ ಮೂಲಕ ಕಲಾ ವಿಭಾಗದ ಮೌಲ್ಯವನ್ನು ಹೆಚ್ಚಿಸಬಹುದೇ? ಬಹುಶಃ ಸಾಧ್ಯವಿಲ್ಲ. ಬದಲಿಗೆ ರ್ಯಾಂಕಿನ ಅಥವ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ಪ್ರತಿಭೆಗಳಿಗೆ ತಕ್ಕುನಾದ ಉಜ್ವಲ ಭವಿಷ್ಯ ರೂಪುಗೊಂಡರೆ ಮಾತ್ರ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಒಲವು ಮತ್ತು ಹುರುಪು ಹೆಚ್ಚಬಹುದು.

ಈ ಕಾರಣಕ್ಕೆ ಕೊಟ್ಟೂರಿನ ಇಂದು ಕಾಲೇಜಿನಲ್ಲಿ ಕಳೆದ ಐದು ವರ್ಷ ಮೊದಲ ಟಾಪರ್ ಹುಡುಗಿಯರನ್ನು ಮಾತನಾಡಿಸಿದೆ. ಐದೂ ಜನರೂ ಕೆಳಜಾತಿ ಮತ್ತು ಕೆಳವರ್ಗಕ್ಕೆ ಸೇರಿದವರು. ಇವರೆಲ್ಲಾ ಟಾಪರ್ ಆದಾಗ ಪ್ರತಿಕ್ರಿಯೆಯಾಗಿ ಕೆ.ಎ.ಎಸ್. ಐ.ಎ.ಎಸ್ ಮೊದಲಾದ ಉನ್ನತ ಹುದ್ದೆಗಳ ಕನಸು ಕಂಡಿದ್ದರು. ಆದರೆ ಹೆಚ್ಚುವರಿ ಅಂಕಗಳು ಅವರನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ತಡೆಯೊಡ್ಡಿತು. ಹಾಗಾಗಿ ಈ ವರ್ಷದ ಟಾಪರ್ ಕುಸುಮಾಳನ್ನು (2019 ಪಡೆದ ಅಂಕ 594) ಹೊರತುಪಡಿಸಿ ಉಳಿದ ನೇತ್ರಾವತಿ ಎಂ.ಬಿ (2015/579), ಅನಿತಾ ಪಿ (2016/585), ಚೈತ್ರ.ಬಿ (2017/589) ಸ್ವಾತಿ ಎಸ್. (2018/595) ಈ ನಾಲ್ವರು ವಿಲೇಜ್ ಅಕೌಂಟೆಂಟ್(ವಿ.ಎ) ಆಗಿದ್ದಾರೆ.

ಅನಿತಾ

ಸದ್ಯಕ್ಕೆ ಎಲ್ಲರೂ ದೂರಶಿಕ್ಷಣದಲ್ಲಿ ಬಿ.ಎ ಮಾಡುತ್ತಿದ್ದು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆ.ಎ.ಎಸ್ ಅಥವಾ ಐ.ಎ.ಎಸ್ ತೆಗೆದುಕೊಳ್ಳುವುದಾಗಿ ಚೂರು ಮೆಲ್ಲಗೆ ಹೇಳುತ್ತಾರೆ. ಟಾಪರ್ ಆದಾಗ ಪ್ರತಿಕ್ರಿಯಿಸಿದ ಆತ್ಮವಿಶ್ವಾಸ ಇದೀಗ ಕುಗ್ಗಿದೆ. ಇವರೆಲ್ಲಾ ಹೇಳುವ ಕಾರಣ ತಮ್ಮ ಮನೆಗಳ ಬಡತನದ್ದು. ಮುಂದೆ ಓದುವ ಕನಸಿದ್ದರೂ ಬಡತನದ ಕಾರಣ ಉದ್ಯೋಗದ ಮುಂದೆ ಬೇರೆ ಆಯ್ಕೆಯಿಲ್ಲ. ಆದರೆ ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ರ್ಯಾಂಕ್ ವಿದ್ಯಾರ್ಥಿಗಳು ಬಹುಪಾಲು ಮುಂದಿನ ವಿದ್ಯಾಭ್ಯಾಸದಲ್ಲಿ ತೊಡಗುವುದು ಹೆಚ್ಚು. ಇವರ ಓದಿಗೆ ಸಾಂಸ್ಥಿಕ ಸಹಾಯ ಸಿಗುವುದಲ್ಲದೆ, ಮುಂದೆ ಒಳ್ಳೆಯ ಸಂಬಳದ ಉದ್ಯೋಗ ಸಿಗುವ ಭರವಸೆ ಕೂಡಾ ಇರುತ್ತದೆ.

ಇಲ್ಲಿ ಮುಖ್ಯವಾಗಿ ಇಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಇಂಗ್ಲೀಷ್ ಬದಲಿಗೆ ಸಂಸ್ಕೃತವನ್ನೂ, ಉಳಿದಂತೆ ಶಿಕ್ಷಣ, ಕಡ್ಡಾಯ ಕನ್ನಡದ ಜತೆ ಐಚ್ಚಿಕ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. `ಅತಿಹೆಚ್ಚು ಕಿರುಪರೀಕ್ಷೆಗಳನ್ನು ಆಯೋಜಿಸುವುದು, ನಿರಂತರವಾಗಿ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತರಬೇತಿ ಕೊಡುವುದು ರ್ಯಾಂಕಿಗೆ ಕಾರಣ’ ಎಂದು ಇಂದು ಕಾಲೇಜಿನ ಪ್ರಾಂಶುಪಾಲರಾದ ಭದ್ರಿನಾಥ ಹೇಳುತ್ತಾರೆ. ಬಹುಶಃ ಈ ಬಗೆಯ ವಿಷಯದ ಆಯ್ಕೆಯೂ ಟಾಪರ್ ಆದವರಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲೀಷ್ ಭಾಷೆ ತೊಡಕಾಗುವ ಭಯವಿರಬಹುದು. ಇದರಿಂದಾಗಿಯೂ ಪಿಯುನ ಹೆಚ್ಚಿನ ಅಂಕದ ಕಾರಣಕ್ಕೆ ಸಿಕ್ಕ ವಿ.ಎ ಹುದ್ದೆಯನ್ನು ತಿರಸ್ಕರಿಸಲು ಸಾಧ್ಯವಾಗಿಲ್ಲ.

ಚೈತ್ರ

ಇಂದು ಇಡೀ ದೇಶದಲ್ಲಿ ಮಾನವಿಕ ವಿಜ್ಞಾನಗಳು ನಿರುದ್ಯೋಗದ ಕೋರ್ಸ್‍ಗಳೆಂಬಂತೆ ಅಪಮೌಲ್ಯಕ್ಕೆ ಒಳಗಾಗಿವೆ. ಇಂದು ಬಹುಸಂಖ್ಯಾತ ಯುವಜನರು ಸಮಾಜದ ಬಗೆಗೆ ಅರಿವು ಮೂಡಿಸಿಕೊಳ್ಳದೆ, ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ಓದಿನ ಆಯ್ಕೆಗೆ ಒಳಗಾದ ಕಾರಣ ಮಕ್ಕಳಿಗೆ ತನ್ನದೇ ಸಮಾಜದ ಸೂಕ್ಷ್ಮ ತಿಳುವಳಿಕೆಯೂ ಇಲ್ಲದಾಗುತ್ತದೆ. ಇಂತಹ ಕಲೆಯೇತರ ಆಯ್ಕೆಗಳು ಹೆಚ್ಚಾದಂತೆ ಅರಾಜಕ ಯುವಜನರೂ ಹೆಚ್ಚುವ ಸಾಧ್ಯತೆಯಿದೆ. ಇದರಿಂದಾಗಿ ಯುವಜನರಲ್ಲಿ ಸಮಾಜದ ಜತೆಗಿನ ಸಾವಯವ ಸಂಬಂಧದ ನಡವಳಿಕೆ ಇಲ್ಲವಾಗಿ, ಉಡಾಫೆಯ ಭಾವವನ್ನು ಬೆಳಸಿಕೊಳ್ಳುವ ಸಾಧ್ಯತೆಯಿದೆ. ಅಂತೆಯೇ ಸಮಾಜದ ಸಮಗ್ರ ಬೆಳವಳಿಗೆಯ ಕಡೆಗಲ್ಲದೆ, ಅಸಮಾನ ಸಮಾಜದ ಬೆಳವಣಿಗೆಯ ಪಾಲುದಾರರಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಸರಕಾರಗಳು ಕಲಾವಿಭಾಗಕ್ಕೆ ಹಚ್ಚು ಮೌಲ್ಯ ಪ್ರಾಪ್ತವಾಗುವಂತೆ ಪಠ್ಯಕ್ರಮಗಳನ್ನು ಅಳವಡಿಸುವುದು, ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಕೋರ್ಸ್‍ಗಳಲ್ಲಿಯೂ ಕನಿಷ್ಠ ಎರಡು ಮೂರು ಮಾನವಿಕ ವಿಷಯಗಳನ್ನು ಕಡ್ಡಾಯವಾಗಿ ಓದಲೆಬೇಕೆನ್ನುವ ಕಟ್ಟುನಿಟ್ಟಿನ ನಿಯಮ ತರುವುದು. ಜ್ಞಾನ ಪರಂಪರೆಯಲ್ಲಿ ದೇಸಿ ಜ್ಞಾನವೆ ಮೂಲವಾದ ಕಾರಣ ಎಲ್ಲಾ ಕೋರ್ಸುಗಳಲ್ಲಿ ಕಡ್ಡಾಯವಾಗಿ ದೇಸಿಜ್ಞಾನದ ಪಠ್ಯವನ್ನು ಅಳವಡಿಸುವುದು, ಇದಕ್ಕೆ ವಿಶೇಷವಾಗಿ ಜಾನಪದ ಪದವಿ ಪಡೆದವರನ್ನು ಬೋಧಕರನ್ನಾಗಿ ಆಯ್ಕೆ ಮಾಡುವುದು, ಅದಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಠಿಸುವುದು, ಕಲಾವಿಭಾಗದಲ್ಲಿ ರ್ಯಾಂಕ್ ಪಡೆದವರಿಗೆ ವಿಶೇಷ ಕೋಟದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯವನ್ನೂ ಒಳಗೊಂಡಂತೆ ಕಲಾ ವಿಭಾಗವನ್ನು ಮೌಲ್ಯೀಕರಿಸುವ ಕೆಲವು ಕಟ್ಟುನಿಟ್ಟಾದ ಯೋಜನೆಗಳನ್ನು ರೂಪಿಸಿಸಬೇಕಿದೆ. ಹೀಗೆ ಕಲಾವಿಭಾಗಕ್ಕೆ ಉಜ್ಞಲ ಭವಿಷ್ಯದ ದಾರಿಗಳು ತೆರೆದರೆ, ಈ ವಿಭಾಗದ ರ್ಯಾಂಕ್ ವಿದ್ಯಾರ್ಥಿಗಳು ಸಹಜವಾಗಿ ಎತ್ತರದ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡು ಹಾರಲು ಸಜ್ಜಾಗುತ್ತಾರೆ.

(ಲೇಖಕರು ಪೋಸ್ಟ್ ಡಾಕ್ಟರಲ್ ಫೆಲೋ, ಕನ್ನಡ ವಿಶ್ವವಿದ್ಯಾಲಯ ಹಂಪಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...