HomeUncategorizedಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದಲ್ಲಿ ಟಾಪರ್ ಗಳಾದ ನಮ್ಮೂರಿನ ಹುಡುಗಿಯರು ಇಂದು ಏನಾಗಿದ್ದಾರೆ ಗೊತ್ತೇ?

- Advertisement -
- Advertisement -

| ಡಾ.ಅರುಣ್ ಜೋಳದಕೂಡ್ಲಿಗಿ |

ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂದಾಗಿರುವುದರಿಂದ ಎಸ್.ಎಸ್.ಎಲ್.ಸಿ ನಂತರರ ಓದಿನ ಆಯ್ಕೆಯಲ್ಲಿ ಕಲಾ ವಿಭಾಗಕ್ಕಿಂತ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕಲಾ ವಿಭಾಗವನ್ನು ಆಯ್ದುಕೊಳ್ಳುವುದೆಂದರೆ ಬಡವರು, ಹಳ್ಳಿಗರು, ಕನ್ನಡ ಮೀಡಿಯಂ ಓದಿದವರು, ಕಡಿಮೆ ಖರ್ಚಿನ ಕೋರ್ಸು, ಓದಿದರೂ ಉದ್ಯೋಗ ಕಷ್ಟ ಎನ್ನುವ ಸಮೀಕರಣವಿದೆ. ಅದಕ್ಕೆ ವಿರುದ್ಧವಾಗಿ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಯು ಉಳ್ಳವರು, ಇಂಗ್ಲೀಷ್ ಕಲಿತವರು, ನಗರದವರು, ಓದಿನ ಖರ್ಚು ಹೆಚ್ಚು, ಓದಿಗೆ ಉದ್ಯೋಗವಿದೆ ಇತ್ಯಾದಿಗಳು ತಳಕು ಹಾಕಿವೆ. ಇದರಲ್ಲಿ ಕೆಲವು ಸಂಗತಿಗಳು ವಾಸ್ತವ ಕೂಡ. ವ್ಯವಸ್ಥೆಯೂ ಇದಕ್ಕೆ ಪೂರಕವಾಗಿದೆ.ಈ ನಡುವೆ ಕಳೆದ ಒಂದೆರಡು ದಶಕದಲ್ಲಿ ಕಲಾವಿಭಾಗದ ಆಯ್ಕೆಯ ಬದಲಿಗೆ ಇದೇ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗಕ್ಕೆ ಬದಲಾಗುತ್ತಿದ್ದಾರೆ.

ಕುಸುಮ

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜು ಸತತವಾಗಿ 5 ವರ್ಷ ಕಲಾವಿಭಾಗದಲ್ಲಿ ಮೊದಲ ಸ್ಥಾನ ಪಡೆಯುತ್ತಿದೆ. ಇದೊಂದು ರೀತಿಯಲ್ಲಿ ಖಾಸಗಿ ಕಾಲೇಜುಗಳು ವಿಜ್ಞಾನ ವಾಣಿಜ್ಯ ಕಂಪ್ಯೂಟರ್ ವಿಭಾಗವನ್ನು ಹೊತ್ತು ಮೆರೆಸುವಾಗ, ಈ ಕಾಲೇಜಿನ ಕಲಾ ವಿಭಾಗದ ಒಲವು ಮೆಚ್ಚುವಂತಹದ್ದು. ಈ ರ್ಯಾಂಕುಗಳ ಮೂಲಕ ಇಂದು ಕಾಲೇಜು ರಾಜ್ಯದ ಗಮನ ಸೆಳೆದಿದೆ. ಹೀಗಿರುವಾಗಲೂ ಬರೀ ರ್ಯಾಂಕ್‍ಗಳ ಮೂಲಕ ಕಲಾ ವಿಭಾಗದ ಮೌಲ್ಯವನ್ನು ಹೆಚ್ಚಿಸಬಹುದೇ? ಬಹುಶಃ ಸಾಧ್ಯವಿಲ್ಲ. ಬದಲಿಗೆ ರ್ಯಾಂಕಿನ ಅಥವ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ಪ್ರತಿಭೆಗಳಿಗೆ ತಕ್ಕುನಾದ ಉಜ್ವಲ ಭವಿಷ್ಯ ರೂಪುಗೊಂಡರೆ ಮಾತ್ರ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಒಲವು ಮತ್ತು ಹುರುಪು ಹೆಚ್ಚಬಹುದು.

ಈ ಕಾರಣಕ್ಕೆ ಕೊಟ್ಟೂರಿನ ಇಂದು ಕಾಲೇಜಿನಲ್ಲಿ ಕಳೆದ ಐದು ವರ್ಷ ಮೊದಲ ಟಾಪರ್ ಹುಡುಗಿಯರನ್ನು ಮಾತನಾಡಿಸಿದೆ. ಐದೂ ಜನರೂ ಕೆಳಜಾತಿ ಮತ್ತು ಕೆಳವರ್ಗಕ್ಕೆ ಸೇರಿದವರು. ಇವರೆಲ್ಲಾ ಟಾಪರ್ ಆದಾಗ ಪ್ರತಿಕ್ರಿಯೆಯಾಗಿ ಕೆ.ಎ.ಎಸ್. ಐ.ಎ.ಎಸ್ ಮೊದಲಾದ ಉನ್ನತ ಹುದ್ದೆಗಳ ಕನಸು ಕಂಡಿದ್ದರು. ಆದರೆ ಹೆಚ್ಚುವರಿ ಅಂಕಗಳು ಅವರನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ತಡೆಯೊಡ್ಡಿತು. ಹಾಗಾಗಿ ಈ ವರ್ಷದ ಟಾಪರ್ ಕುಸುಮಾಳನ್ನು (2019 ಪಡೆದ ಅಂಕ 594) ಹೊರತುಪಡಿಸಿ ಉಳಿದ ನೇತ್ರಾವತಿ ಎಂ.ಬಿ (2015/579), ಅನಿತಾ ಪಿ (2016/585), ಚೈತ್ರ.ಬಿ (2017/589) ಸ್ವಾತಿ ಎಸ್. (2018/595) ಈ ನಾಲ್ವರು ವಿಲೇಜ್ ಅಕೌಂಟೆಂಟ್(ವಿ.ಎ) ಆಗಿದ್ದಾರೆ.

ಅನಿತಾ

ಸದ್ಯಕ್ಕೆ ಎಲ್ಲರೂ ದೂರಶಿಕ್ಷಣದಲ್ಲಿ ಬಿ.ಎ ಮಾಡುತ್ತಿದ್ದು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆ.ಎ.ಎಸ್ ಅಥವಾ ಐ.ಎ.ಎಸ್ ತೆಗೆದುಕೊಳ್ಳುವುದಾಗಿ ಚೂರು ಮೆಲ್ಲಗೆ ಹೇಳುತ್ತಾರೆ. ಟಾಪರ್ ಆದಾಗ ಪ್ರತಿಕ್ರಿಯಿಸಿದ ಆತ್ಮವಿಶ್ವಾಸ ಇದೀಗ ಕುಗ್ಗಿದೆ. ಇವರೆಲ್ಲಾ ಹೇಳುವ ಕಾರಣ ತಮ್ಮ ಮನೆಗಳ ಬಡತನದ್ದು. ಮುಂದೆ ಓದುವ ಕನಸಿದ್ದರೂ ಬಡತನದ ಕಾರಣ ಉದ್ಯೋಗದ ಮುಂದೆ ಬೇರೆ ಆಯ್ಕೆಯಿಲ್ಲ. ಆದರೆ ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ರ್ಯಾಂಕ್ ವಿದ್ಯಾರ್ಥಿಗಳು ಬಹುಪಾಲು ಮುಂದಿನ ವಿದ್ಯಾಭ್ಯಾಸದಲ್ಲಿ ತೊಡಗುವುದು ಹೆಚ್ಚು. ಇವರ ಓದಿಗೆ ಸಾಂಸ್ಥಿಕ ಸಹಾಯ ಸಿಗುವುದಲ್ಲದೆ, ಮುಂದೆ ಒಳ್ಳೆಯ ಸಂಬಳದ ಉದ್ಯೋಗ ಸಿಗುವ ಭರವಸೆ ಕೂಡಾ ಇರುತ್ತದೆ.

ಇಲ್ಲಿ ಮುಖ್ಯವಾಗಿ ಇಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಇಂಗ್ಲೀಷ್ ಬದಲಿಗೆ ಸಂಸ್ಕೃತವನ್ನೂ, ಉಳಿದಂತೆ ಶಿಕ್ಷಣ, ಕಡ್ಡಾಯ ಕನ್ನಡದ ಜತೆ ಐಚ್ಚಿಕ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. `ಅತಿಹೆಚ್ಚು ಕಿರುಪರೀಕ್ಷೆಗಳನ್ನು ಆಯೋಜಿಸುವುದು, ನಿರಂತರವಾಗಿ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತರಬೇತಿ ಕೊಡುವುದು ರ್ಯಾಂಕಿಗೆ ಕಾರಣ’ ಎಂದು ಇಂದು ಕಾಲೇಜಿನ ಪ್ರಾಂಶುಪಾಲರಾದ ಭದ್ರಿನಾಥ ಹೇಳುತ್ತಾರೆ. ಬಹುಶಃ ಈ ಬಗೆಯ ವಿಷಯದ ಆಯ್ಕೆಯೂ ಟಾಪರ್ ಆದವರಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲೀಷ್ ಭಾಷೆ ತೊಡಕಾಗುವ ಭಯವಿರಬಹುದು. ಇದರಿಂದಾಗಿಯೂ ಪಿಯುನ ಹೆಚ್ಚಿನ ಅಂಕದ ಕಾರಣಕ್ಕೆ ಸಿಕ್ಕ ವಿ.ಎ ಹುದ್ದೆಯನ್ನು ತಿರಸ್ಕರಿಸಲು ಸಾಧ್ಯವಾಗಿಲ್ಲ.

ಚೈತ್ರ

ಇಂದು ಇಡೀ ದೇಶದಲ್ಲಿ ಮಾನವಿಕ ವಿಜ್ಞಾನಗಳು ನಿರುದ್ಯೋಗದ ಕೋರ್ಸ್‍ಗಳೆಂಬಂತೆ ಅಪಮೌಲ್ಯಕ್ಕೆ ಒಳಗಾಗಿವೆ. ಇಂದು ಬಹುಸಂಖ್ಯಾತ ಯುವಜನರು ಸಮಾಜದ ಬಗೆಗೆ ಅರಿವು ಮೂಡಿಸಿಕೊಳ್ಳದೆ, ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ಓದಿನ ಆಯ್ಕೆಗೆ ಒಳಗಾದ ಕಾರಣ ಮಕ್ಕಳಿಗೆ ತನ್ನದೇ ಸಮಾಜದ ಸೂಕ್ಷ್ಮ ತಿಳುವಳಿಕೆಯೂ ಇಲ್ಲದಾಗುತ್ತದೆ. ಇಂತಹ ಕಲೆಯೇತರ ಆಯ್ಕೆಗಳು ಹೆಚ್ಚಾದಂತೆ ಅರಾಜಕ ಯುವಜನರೂ ಹೆಚ್ಚುವ ಸಾಧ್ಯತೆಯಿದೆ. ಇದರಿಂದಾಗಿ ಯುವಜನರಲ್ಲಿ ಸಮಾಜದ ಜತೆಗಿನ ಸಾವಯವ ಸಂಬಂಧದ ನಡವಳಿಕೆ ಇಲ್ಲವಾಗಿ, ಉಡಾಫೆಯ ಭಾವವನ್ನು ಬೆಳಸಿಕೊಳ್ಳುವ ಸಾಧ್ಯತೆಯಿದೆ. ಅಂತೆಯೇ ಸಮಾಜದ ಸಮಗ್ರ ಬೆಳವಳಿಗೆಯ ಕಡೆಗಲ್ಲದೆ, ಅಸಮಾನ ಸಮಾಜದ ಬೆಳವಣಿಗೆಯ ಪಾಲುದಾರರಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಸರಕಾರಗಳು ಕಲಾವಿಭಾಗಕ್ಕೆ ಹಚ್ಚು ಮೌಲ್ಯ ಪ್ರಾಪ್ತವಾಗುವಂತೆ ಪಠ್ಯಕ್ರಮಗಳನ್ನು ಅಳವಡಿಸುವುದು, ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಕೋರ್ಸ್‍ಗಳಲ್ಲಿಯೂ ಕನಿಷ್ಠ ಎರಡು ಮೂರು ಮಾನವಿಕ ವಿಷಯಗಳನ್ನು ಕಡ್ಡಾಯವಾಗಿ ಓದಲೆಬೇಕೆನ್ನುವ ಕಟ್ಟುನಿಟ್ಟಿನ ನಿಯಮ ತರುವುದು. ಜ್ಞಾನ ಪರಂಪರೆಯಲ್ಲಿ ದೇಸಿ ಜ್ಞಾನವೆ ಮೂಲವಾದ ಕಾರಣ ಎಲ್ಲಾ ಕೋರ್ಸುಗಳಲ್ಲಿ ಕಡ್ಡಾಯವಾಗಿ ದೇಸಿಜ್ಞಾನದ ಪಠ್ಯವನ್ನು ಅಳವಡಿಸುವುದು, ಇದಕ್ಕೆ ವಿಶೇಷವಾಗಿ ಜಾನಪದ ಪದವಿ ಪಡೆದವರನ್ನು ಬೋಧಕರನ್ನಾಗಿ ಆಯ್ಕೆ ಮಾಡುವುದು, ಅದಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಠಿಸುವುದು, ಕಲಾವಿಭಾಗದಲ್ಲಿ ರ್ಯಾಂಕ್ ಪಡೆದವರಿಗೆ ವಿಶೇಷ ಕೋಟದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯವನ್ನೂ ಒಳಗೊಂಡಂತೆ ಕಲಾ ವಿಭಾಗವನ್ನು ಮೌಲ್ಯೀಕರಿಸುವ ಕೆಲವು ಕಟ್ಟುನಿಟ್ಟಾದ ಯೋಜನೆಗಳನ್ನು ರೂಪಿಸಿಸಬೇಕಿದೆ. ಹೀಗೆ ಕಲಾವಿಭಾಗಕ್ಕೆ ಉಜ್ಞಲ ಭವಿಷ್ಯದ ದಾರಿಗಳು ತೆರೆದರೆ, ಈ ವಿಭಾಗದ ರ್ಯಾಂಕ್ ವಿದ್ಯಾರ್ಥಿಗಳು ಸಹಜವಾಗಿ ಎತ್ತರದ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡು ಹಾರಲು ಸಜ್ಜಾಗುತ್ತಾರೆ.

(ಲೇಖಕರು ಪೋಸ್ಟ್ ಡಾಕ್ಟರಲ್ ಫೆಲೋ, ಕನ್ನಡ ವಿಶ್ವವಿದ್ಯಾಲಯ ಹಂಪಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...