HomeUncategorizedಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದ ಟಾಪರುಗಳ ಭವಿಷ್ಯವೇನು?

ಕಲಾವಿಭಾಗದಲ್ಲಿ ಟಾಪರ್ ಗಳಾದ ನಮ್ಮೂರಿನ ಹುಡುಗಿಯರು ಇಂದು ಏನಾಗಿದ್ದಾರೆ ಗೊತ್ತೇ?

- Advertisement -
- Advertisement -

| ಡಾ.ಅರುಣ್ ಜೋಳದಕೂಡ್ಲಿಗಿ |

ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂದಾಗಿರುವುದರಿಂದ ಎಸ್.ಎಸ್.ಎಲ್.ಸಿ ನಂತರರ ಓದಿನ ಆಯ್ಕೆಯಲ್ಲಿ ಕಲಾ ವಿಭಾಗಕ್ಕಿಂತ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಗಳು ಹೆಚ್ಚಾಗುತ್ತಿದೆ. ಅದರಲ್ಲೂ ಕಲಾ ವಿಭಾಗವನ್ನು ಆಯ್ದುಕೊಳ್ಳುವುದೆಂದರೆ ಬಡವರು, ಹಳ್ಳಿಗರು, ಕನ್ನಡ ಮೀಡಿಯಂ ಓದಿದವರು, ಕಡಿಮೆ ಖರ್ಚಿನ ಕೋರ್ಸು, ಓದಿದರೂ ಉದ್ಯೋಗ ಕಷ್ಟ ಎನ್ನುವ ಸಮೀಕರಣವಿದೆ. ಅದಕ್ಕೆ ವಿರುದ್ಧವಾಗಿ ವಿಜ್ಞಾನ, ತಂತ್ರಜ್ಞಾನ, ವಾಣಿಜ್ಯದ ಆಯ್ಕೆಯು ಉಳ್ಳವರು, ಇಂಗ್ಲೀಷ್ ಕಲಿತವರು, ನಗರದವರು, ಓದಿನ ಖರ್ಚು ಹೆಚ್ಚು, ಓದಿಗೆ ಉದ್ಯೋಗವಿದೆ ಇತ್ಯಾದಿಗಳು ತಳಕು ಹಾಕಿವೆ. ಇದರಲ್ಲಿ ಕೆಲವು ಸಂಗತಿಗಳು ವಾಸ್ತವ ಕೂಡ. ವ್ಯವಸ್ಥೆಯೂ ಇದಕ್ಕೆ ಪೂರಕವಾಗಿದೆ.ಈ ನಡುವೆ ಕಳೆದ ಒಂದೆರಡು ದಶಕದಲ್ಲಿ ಕಲಾವಿಭಾಗದ ಆಯ್ಕೆಯ ಬದಲಿಗೆ ಇದೇ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗಕ್ಕೆ ಬದಲಾಗುತ್ತಿದ್ದಾರೆ.

ಕುಸುಮ

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ಇಂದು ಪಿಯು ಕಾಲೇಜು ಸತತವಾಗಿ 5 ವರ್ಷ ಕಲಾವಿಭಾಗದಲ್ಲಿ ಮೊದಲ ಸ್ಥಾನ ಪಡೆಯುತ್ತಿದೆ. ಇದೊಂದು ರೀತಿಯಲ್ಲಿ ಖಾಸಗಿ ಕಾಲೇಜುಗಳು ವಿಜ್ಞಾನ ವಾಣಿಜ್ಯ ಕಂಪ್ಯೂಟರ್ ವಿಭಾಗವನ್ನು ಹೊತ್ತು ಮೆರೆಸುವಾಗ, ಈ ಕಾಲೇಜಿನ ಕಲಾ ವಿಭಾಗದ ಒಲವು ಮೆಚ್ಚುವಂತಹದ್ದು. ಈ ರ್ಯಾಂಕುಗಳ ಮೂಲಕ ಇಂದು ಕಾಲೇಜು ರಾಜ್ಯದ ಗಮನ ಸೆಳೆದಿದೆ. ಹೀಗಿರುವಾಗಲೂ ಬರೀ ರ್ಯಾಂಕ್‍ಗಳ ಮೂಲಕ ಕಲಾ ವಿಭಾಗದ ಮೌಲ್ಯವನ್ನು ಹೆಚ್ಚಿಸಬಹುದೇ? ಬಹುಶಃ ಸಾಧ್ಯವಿಲ್ಲ. ಬದಲಿಗೆ ರ್ಯಾಂಕಿನ ಅಥವ ಹೆಚ್ಚು ಅಂಕಗಳನ್ನು ಪಡೆದ ಕಲಾ ವಿಭಾಗದ ಪ್ರತಿಭೆಗಳಿಗೆ ತಕ್ಕುನಾದ ಉಜ್ವಲ ಭವಿಷ್ಯ ರೂಪುಗೊಂಡರೆ ಮಾತ್ರ ಕಲಾ ವಿಭಾಗದ ಬಗ್ಗೆ ವಿದ್ಯಾರ್ಥಿ ಮತ್ತು ಪೋಷಕರಲ್ಲಿ ಒಲವು ಮತ್ತು ಹುರುಪು ಹೆಚ್ಚಬಹುದು.

ಈ ಕಾರಣಕ್ಕೆ ಕೊಟ್ಟೂರಿನ ಇಂದು ಕಾಲೇಜಿನಲ್ಲಿ ಕಳೆದ ಐದು ವರ್ಷ ಮೊದಲ ಟಾಪರ್ ಹುಡುಗಿಯರನ್ನು ಮಾತನಾಡಿಸಿದೆ. ಐದೂ ಜನರೂ ಕೆಳಜಾತಿ ಮತ್ತು ಕೆಳವರ್ಗಕ್ಕೆ ಸೇರಿದವರು. ಇವರೆಲ್ಲಾ ಟಾಪರ್ ಆದಾಗ ಪ್ರತಿಕ್ರಿಯೆಯಾಗಿ ಕೆ.ಎ.ಎಸ್. ಐ.ಎ.ಎಸ್ ಮೊದಲಾದ ಉನ್ನತ ಹುದ್ದೆಗಳ ಕನಸು ಕಂಡಿದ್ದರು. ಆದರೆ ಹೆಚ್ಚುವರಿ ಅಂಕಗಳು ಅವರನ್ನು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ತಡೆಯೊಡ್ಡಿತು. ಹಾಗಾಗಿ ಈ ವರ್ಷದ ಟಾಪರ್ ಕುಸುಮಾಳನ್ನು (2019 ಪಡೆದ ಅಂಕ 594) ಹೊರತುಪಡಿಸಿ ಉಳಿದ ನೇತ್ರಾವತಿ ಎಂ.ಬಿ (2015/579), ಅನಿತಾ ಪಿ (2016/585), ಚೈತ್ರ.ಬಿ (2017/589) ಸ್ವಾತಿ ಎಸ್. (2018/595) ಈ ನಾಲ್ವರು ವಿಲೇಜ್ ಅಕೌಂಟೆಂಟ್(ವಿ.ಎ) ಆಗಿದ್ದಾರೆ.

ಅನಿತಾ

ಸದ್ಯಕ್ಕೆ ಎಲ್ಲರೂ ದೂರಶಿಕ್ಷಣದಲ್ಲಿ ಬಿ.ಎ ಮಾಡುತ್ತಿದ್ದು ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆ.ಎ.ಎಸ್ ಅಥವಾ ಐ.ಎ.ಎಸ್ ತೆಗೆದುಕೊಳ್ಳುವುದಾಗಿ ಚೂರು ಮೆಲ್ಲಗೆ ಹೇಳುತ್ತಾರೆ. ಟಾಪರ್ ಆದಾಗ ಪ್ರತಿಕ್ರಿಯಿಸಿದ ಆತ್ಮವಿಶ್ವಾಸ ಇದೀಗ ಕುಗ್ಗಿದೆ. ಇವರೆಲ್ಲಾ ಹೇಳುವ ಕಾರಣ ತಮ್ಮ ಮನೆಗಳ ಬಡತನದ್ದು. ಮುಂದೆ ಓದುವ ಕನಸಿದ್ದರೂ ಬಡತನದ ಕಾರಣ ಉದ್ಯೋಗದ ಮುಂದೆ ಬೇರೆ ಆಯ್ಕೆಯಿಲ್ಲ. ಆದರೆ ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ರ್ಯಾಂಕ್ ವಿದ್ಯಾರ್ಥಿಗಳು ಬಹುಪಾಲು ಮುಂದಿನ ವಿದ್ಯಾಭ್ಯಾಸದಲ್ಲಿ ತೊಡಗುವುದು ಹೆಚ್ಚು. ಇವರ ಓದಿಗೆ ಸಾಂಸ್ಥಿಕ ಸಹಾಯ ಸಿಗುವುದಲ್ಲದೆ, ಮುಂದೆ ಒಳ್ಳೆಯ ಸಂಬಳದ ಉದ್ಯೋಗ ಸಿಗುವ ಭರವಸೆ ಕೂಡಾ ಇರುತ್ತದೆ.

ಇಲ್ಲಿ ಮುಖ್ಯವಾಗಿ ಇಂದು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಷೆಯ ಆಯ್ಕೆಯಲ್ಲಿ ಇಂಗ್ಲೀಷ್ ಬದಲಿಗೆ ಸಂಸ್ಕೃತವನ್ನೂ, ಉಳಿದಂತೆ ಶಿಕ್ಷಣ, ಕಡ್ಡಾಯ ಕನ್ನಡದ ಜತೆ ಐಚ್ಚಿಕ ಕನ್ನಡ, ಇತಿಹಾಸ, ರಾಜ್ಯಶಾಸ್ತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. `ಅತಿಹೆಚ್ಚು ಕಿರುಪರೀಕ್ಷೆಗಳನ್ನು ಆಯೋಜಿಸುವುದು, ನಿರಂತರವಾಗಿ ಹಳೆಯ ಮತ್ತು ಮಾದರಿ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತರಬೇತಿ ಕೊಡುವುದು ರ್ಯಾಂಕಿಗೆ ಕಾರಣ’ ಎಂದು ಇಂದು ಕಾಲೇಜಿನ ಪ್ರಾಂಶುಪಾಲರಾದ ಭದ್ರಿನಾಥ ಹೇಳುತ್ತಾರೆ. ಬಹುಶಃ ಈ ಬಗೆಯ ವಿಷಯದ ಆಯ್ಕೆಯೂ ಟಾಪರ್ ಆದವರಿಗೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲೀಷ್ ಭಾಷೆ ತೊಡಕಾಗುವ ಭಯವಿರಬಹುದು. ಇದರಿಂದಾಗಿಯೂ ಪಿಯುನ ಹೆಚ್ಚಿನ ಅಂಕದ ಕಾರಣಕ್ಕೆ ಸಿಕ್ಕ ವಿ.ಎ ಹುದ್ದೆಯನ್ನು ತಿರಸ್ಕರಿಸಲು ಸಾಧ್ಯವಾಗಿಲ್ಲ.

ಚೈತ್ರ

ಇಂದು ಇಡೀ ದೇಶದಲ್ಲಿ ಮಾನವಿಕ ವಿಜ್ಞಾನಗಳು ನಿರುದ್ಯೋಗದ ಕೋರ್ಸ್‍ಗಳೆಂಬಂತೆ ಅಪಮೌಲ್ಯಕ್ಕೆ ಒಳಗಾಗಿವೆ. ಇಂದು ಬಹುಸಂಖ್ಯಾತ ಯುವಜನರು ಸಮಾಜದ ಬಗೆಗೆ ಅರಿವು ಮೂಡಿಸಿಕೊಳ್ಳದೆ, ವಿಜ್ಞಾನ ತಂತ್ರಜ್ಞಾನ ವಾಣಿಜ್ಯದ ಓದಿನ ಆಯ್ಕೆಗೆ ಒಳಗಾದ ಕಾರಣ ಮಕ್ಕಳಿಗೆ ತನ್ನದೇ ಸಮಾಜದ ಸೂಕ್ಷ್ಮ ತಿಳುವಳಿಕೆಯೂ ಇಲ್ಲದಾಗುತ್ತದೆ. ಇಂತಹ ಕಲೆಯೇತರ ಆಯ್ಕೆಗಳು ಹೆಚ್ಚಾದಂತೆ ಅರಾಜಕ ಯುವಜನರೂ ಹೆಚ್ಚುವ ಸಾಧ್ಯತೆಯಿದೆ. ಇದರಿಂದಾಗಿ ಯುವಜನರಲ್ಲಿ ಸಮಾಜದ ಜತೆಗಿನ ಸಾವಯವ ಸಂಬಂಧದ ನಡವಳಿಕೆ ಇಲ್ಲವಾಗಿ, ಉಡಾಫೆಯ ಭಾವವನ್ನು ಬೆಳಸಿಕೊಳ್ಳುವ ಸಾಧ್ಯತೆಯಿದೆ. ಅಂತೆಯೇ ಸಮಾಜದ ಸಮಗ್ರ ಬೆಳವಳಿಗೆಯ ಕಡೆಗಲ್ಲದೆ, ಅಸಮಾನ ಸಮಾಜದ ಬೆಳವಣಿಗೆಯ ಪಾಲುದಾರರಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಸರಕಾರಗಳು ಕಲಾವಿಭಾಗಕ್ಕೆ ಹಚ್ಚು ಮೌಲ್ಯ ಪ್ರಾಪ್ತವಾಗುವಂತೆ ಪಠ್ಯಕ್ರಮಗಳನ್ನು ಅಳವಡಿಸುವುದು, ವಿಜ್ಞಾನ ತಂತ್ರಜ್ಞಾನ ವಾಣಿಜ್ಯ ಕೋರ್ಸ್‍ಗಳಲ್ಲಿಯೂ ಕನಿಷ್ಠ ಎರಡು ಮೂರು ಮಾನವಿಕ ವಿಷಯಗಳನ್ನು ಕಡ್ಡಾಯವಾಗಿ ಓದಲೆಬೇಕೆನ್ನುವ ಕಟ್ಟುನಿಟ್ಟಿನ ನಿಯಮ ತರುವುದು. ಜ್ಞಾನ ಪರಂಪರೆಯಲ್ಲಿ ದೇಸಿ ಜ್ಞಾನವೆ ಮೂಲವಾದ ಕಾರಣ ಎಲ್ಲಾ ಕೋರ್ಸುಗಳಲ್ಲಿ ಕಡ್ಡಾಯವಾಗಿ ದೇಸಿಜ್ಞಾನದ ಪಠ್ಯವನ್ನು ಅಳವಡಿಸುವುದು, ಇದಕ್ಕೆ ವಿಶೇಷವಾಗಿ ಜಾನಪದ ಪದವಿ ಪಡೆದವರನ್ನು ಬೋಧಕರನ್ನಾಗಿ ಆಯ್ಕೆ ಮಾಡುವುದು, ಅದಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಠಿಸುವುದು, ಕಲಾವಿಭಾಗದಲ್ಲಿ ರ್ಯಾಂಕ್ ಪಡೆದವರಿಗೆ ವಿಶೇಷ ಕೋಟದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯವನ್ನೂ ಒಳಗೊಂಡಂತೆ ಕಲಾ ವಿಭಾಗವನ್ನು ಮೌಲ್ಯೀಕರಿಸುವ ಕೆಲವು ಕಟ್ಟುನಿಟ್ಟಾದ ಯೋಜನೆಗಳನ್ನು ರೂಪಿಸಿಸಬೇಕಿದೆ. ಹೀಗೆ ಕಲಾವಿಭಾಗಕ್ಕೆ ಉಜ್ಞಲ ಭವಿಷ್ಯದ ದಾರಿಗಳು ತೆರೆದರೆ, ಈ ವಿಭಾಗದ ರ್ಯಾಂಕ್ ವಿದ್ಯಾರ್ಥಿಗಳು ಸಹಜವಾಗಿ ಎತ್ತರದ ಕನಸುಗಳಿಗೆ ರೆಕ್ಕೆ ಕಟ್ಟಿಕೊಂಡು ಹಾರಲು ಸಜ್ಜಾಗುತ್ತಾರೆ.

(ಲೇಖಕರು ಪೋಸ್ಟ್ ಡಾಕ್ಟರಲ್ ಫೆಲೋ, ಕನ್ನಡ ವಿಶ್ವವಿದ್ಯಾಲಯ ಹಂಪಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...