Homeಕರ್ನಾಟಕPUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್...

PUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

2021 ರ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ನಡೆದ ರಾಜ್ಯದ ದ್ವಿತೀಯ ಪಿಯುಸಿ(2nd puc result 2021) ಪರೀಕ್ಷೆಗಳ ಫಲಿತಾಂಶಗಳು ಸೋಮವಾರ ಪ್ರಕಟಿಸಲಾಗಿದೆ. ಈ ಹಿಂದೆ ಯಾವುದೆ ಪರೀಕ್ಷಯಿಲ್ಲದೆ ಪರ್ಯಾಯ ಮೌಲ್ಯಮಾಪನ ವಿಧಾನಗಳ ಮೂಲಕ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿತ್ತು. ಆದರೆ ಅಂದು ಪಡೆದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ಹಾಗೂ ಪುನಾರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗಿತ್ತು.

ಅದರಂತೆ ಈ ಪರೀಕ್ಷೆಗಳು ಆಗಸ್ಟ್ 19 ಮತ್ತು ಸೆಪ್ಟೆಂಬರ್ 3 ರ ನಡುವೆ ನಡೆದಿದ್ದವು. ಈ ಪರೀಕ್ಷೆಗಳನ್ನು ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌‌‌ ಅವರು ಇಂದು ಪ್ರಕಟಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿರುವವ ಪೈಕಿ 29.91% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 5,507 ಮಂದಿ ಪಾಸಾಗಿದ್ದಾರೆ. ಪಾಸಾದವರ ಪೈಕಿ, 580 ಮಂದಿ ಉನ್ನತ ಶ್ರೇಣಿ ಪಡೆದರೆ, 1,939 ಮಂದಿ ಪ್ರಥಮ ಶ್ರೇಣಿ, 1,578 ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ.

592 ಹೊಸ ಅಭ್ಯರ್ಥಿಗಳು ಪರಿಕ್ಷೆಗೆ ಹಾಜರಾಗಿದ್ದು, ಈ ಪೈಕಿ 556 ಪಾಸಾಗಿದ್ದಾರೆ. ಪುನರಾವರ್ತಿತವಾಗಿ ಪರೀಕ್ಷೆ ಬರೆದಿದ್ದ 351 ಜನರಲ್ಲಿ 183 ಅಭ್ಯರ್ಥಿಗಳು ಮತ್ತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದ 17,470 ವಿದ್ಯಾರ್ಥಿಗಳಲ್ಲಿ 4,768 ಮಂದಿ ಪಾಸಾಗಿದ್ದಾರೆ.

  • ಕಲಾ ವಿಭಾಗದಲ್ಲಿ 12,203 ಜನರು ಪರೀಕ್ಷೆ ಬರೆದಿದ್ದರು, ಅದರಲ್ಲಿ 3,912 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಾಣಿಜ್ಯ ವಿಭಾಗ 6,114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 1,527 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಿಜ್ಞಾನ ವಿಭಾದಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 68 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿರುವ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...