Homeಕರ್ನಾಟಕPUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್...

PUC result 2021 | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಇಲ್ಲಿ ಕ್ಲಿಕ್ ಮಾಡಿ

- Advertisement -
- Advertisement -

2021 ರ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ನಡೆದ ರಾಜ್ಯದ ದ್ವಿತೀಯ ಪಿಯುಸಿ(2nd puc result 2021) ಪರೀಕ್ಷೆಗಳ ಫಲಿತಾಂಶಗಳು ಸೋಮವಾರ ಪ್ರಕಟಿಸಲಾಗಿದೆ. ಈ ಹಿಂದೆ ಯಾವುದೆ ಪರೀಕ್ಷಯಿಲ್ಲದೆ ಪರ್ಯಾಯ ಮೌಲ್ಯಮಾಪನ ವಿಧಾನಗಳ ಮೂಲಕ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿತ್ತು. ಆದರೆ ಅಂದು ಪಡೆದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ಹಾಗೂ ಪುನಾರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗಿತ್ತು.

ಅದರಂತೆ ಈ ಪರೀಕ್ಷೆಗಳು ಆಗಸ್ಟ್ 19 ಮತ್ತು ಸೆಪ್ಟೆಂಬರ್ 3 ರ ನಡುವೆ ನಡೆದಿದ್ದವು. ಈ ಪರೀಕ್ಷೆಗಳನ್ನು ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌‌‌ ಅವರು ಇಂದು ಪ್ರಕಟಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿರುವವ ಪೈಕಿ 29.91% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 5,507 ಮಂದಿ ಪಾಸಾಗಿದ್ದಾರೆ. ಪಾಸಾದವರ ಪೈಕಿ, 580 ಮಂದಿ ಉನ್ನತ ಶ್ರೇಣಿ ಪಡೆದರೆ, 1,939 ಮಂದಿ ಪ್ರಥಮ ಶ್ರೇಣಿ, 1,578 ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ.

592 ಹೊಸ ಅಭ್ಯರ್ಥಿಗಳು ಪರಿಕ್ಷೆಗೆ ಹಾಜರಾಗಿದ್ದು, ಈ ಪೈಕಿ 556 ಪಾಸಾಗಿದ್ದಾರೆ. ಪುನರಾವರ್ತಿತವಾಗಿ ಪರೀಕ್ಷೆ ಬರೆದಿದ್ದ 351 ಜನರಲ್ಲಿ 183 ಅಭ್ಯರ್ಥಿಗಳು ಮತ್ತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದ 17,470 ವಿದ್ಯಾರ್ಥಿಗಳಲ್ಲಿ 4,768 ಮಂದಿ ಪಾಸಾಗಿದ್ದಾರೆ.

  • ಕಲಾ ವಿಭಾಗದಲ್ಲಿ 12,203 ಜನರು ಪರೀಕ್ಷೆ ಬರೆದಿದ್ದರು, ಅದರಲ್ಲಿ 3,912 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಾಣಿಜ್ಯ ವಿಭಾಗ 6,114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 1,527 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
  • ವಿಜ್ಞಾನ ವಿಭಾದಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 68 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಬೇಕು.
  • ನಂತರ ಅಲ್ಲಿರುವ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...