Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...