Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...