Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2025ಕ್ಕೆ ಬಿಜೆಪಿ ಸಂಪೂರ್ಣ ಮೀಸಲಾತಿಯನ್ನು ರದ್ದುಗೊಳಿಸಲಿದೆ: ರೇವಂತ್ ರೆಡ್ಡಿ

0
ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶದಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನದ ವಿರುದ್ಧ ಸಮರ ಸಾರಿವೆ ಎಂದು ಆರೋಪಿಸಿರುವ ತೆಲಂಗಾಣದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಮೀಸಲಾತಿ ರದ್ದುಗೊಳಿಸುವ...