Homeಮುಖಪುಟಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

- Advertisement -
- Advertisement -

ಹೊಸದಾಗಿ ಜಾರಿಗೊಳಿಸಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರಲ್ಲಿ ಪೊಲೀಸ್ ಕಸ್ಟಡಿ ಅವಧಿಯನ್ನು ಹೆಚ್ಚಿಸಿರುವ ಸೆಕ್ಷನ್‌ಗೆ ತಿದ್ದುಪಡಿ ತರಬೇಕು ಮತ್ತು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್-1973ರ ಬದಲಿಗೆ ಜಾರಿಗೆ ಬಂದಿರುವ ನಾಗರಿಕ ಸುರಕ್ಷಾ ಸಂಹಿತೆ-2023 ಆರೋಪಿಗಳನ್ನು ಗರಿಷ್ಠ 15 ದಿನಗಳ ಬದಲಾಗಿ 60-90 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲು ಅನುಮತಿಸುತ್ತದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿಯಲ್ಲಿ ಪೊಲೀಸ್ ಕಸ್ಟಡಿಯ ಅವಧಿಯು 15 ದಿನಗಳೇ ಇರಲಿದೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದು, ಗರಿಷ್ಠ ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ, ಒಬ್ಬ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದ ವೇಳೆ ಆತ 15 ದಿನಗಳ ಕಾಲ ಆಸ್ಪತ್ರೆಗೆ ದಾಖಲಾದರೆ, ಆತನ ಕಸ್ಟಡಿ ಅವಧಿಯು ಮುಕ್ತಾಯವಾಗುತ್ತಿದ್ದರಿಂದ ಯಾವುದೇ ವಿಚಾರಣೆಗೆ ಅವಕಾಶ ಇರಲಿಲ್ಲ ಎಂದು ಹೇಳಿದ್ದಾರೆ. ಅಮಿತ್ ಶಾ ಅವರ ಈ ಸ್ಪಷ್ಟೀಕರಣವು ಸ್ವಾಗತಾರ್ಹವಾದರೂ, ಕಾನೂನಿನ ಬಲ ಹೊಂದಿಲ್ಲದ ಕಾರಣ ಇದು ಸಾಕಾಗುವುದಿಲ್ಲ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೇಳಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 (3)ಗೆ ತಿದ್ದುಪಡಿ ತಂದು ತಕ್ಷಣ ಸ್ಪಷ್ಟೀಕರಣ ನೀಡಿದರೆ ನ್ಯಾಯಾಲಯಗಳು, ಪೋಲೀಸ್ ಮತ್ತು ಸಾರ್ವಜನಿಕ ಅಭಿಯೋಜಕರಲ್ಲಿ ಆಗುವ ಗೊಂದಲಗಳು ತಪ್ಪಲಿದೆ ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರಿಗೆ ಬರೆದ ಪತ್ರದಲ್ಲಿ ಪಿಯುಸಿಎಲ್‌ ಆಗ್ರಹಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 ರ ಪೊಲೀಸ್ ಕಸ್ಟಡಿಯ ವ್ಯಾಖ್ಯಾನವು ಸಿಆರ್‌ಪಿಸಿಯ ಸೆಕ್ಷನ್ 167ರ ಮೌಖಿಕ ಪ್ರತಿಯಾಗಿದೆ. ಆದರೆ, ಹೊಸ ಸೆಕ್ಷನ್‌ನಲ್ಲಿ ಎಂಟು ಪದಗಳನ್ನು ಬಿಟ್ಟು ಬಿಡಲಾಗಿದೆ. ಅವು ಪೊಲೀಸ್ ರಿಮಾಂಡ್‌ಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿಭಿನ್ನವಾದ ವ್ಯಾಖ್ಯಾನ ನೀಡುತ್ತದೆ ಎಂದು ಪಿಯುಸಿಎಲ್‌ ತಿಳಿಸಿದೆ.

ಹಳೆಯ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನಲ್ಲಿ ಆರೋಪಿಯನ್ನು 15 ದಿನಗಳ ಬಳಿಕ ಪೊಲೀಸ್ ಕಸ್ಟಡಿಯಲ್ಲಿ ಅಥವಾ ಇತರ ರೀತಿಯಲ್ಲಿ ಬಂಧಿಸಲು ಮ್ಯಾಜಿಸ್ಟ್ರೇಟ್‌ಗೆ ಅವಕಾಶ ಇದೆ ಎನ್ನಲಾಗಿತ್ತು. ಹೊಸ ಕಾನೂನಿನಲ್ಲಿ ‘ಇತರ ರೀತಿಯಲ್ಲಿ’ ಎಂಬ ಪದವಿಲ್ಲ. ಇದು ಪೊಲೀಸರು ಆರೋಪಿಯನ್ನು 60-90 ದಿನಗಳವರೆಗೆ ಕಸ್ಟಡಿಗೆ ಪಡೆಯಲು ಅವಕಾಶ ನೀಡುತ್ತದೆ ಎಂದು ಪಿಯುಸಿಎಲ್ ಹೇಳಿದೆ.

ಪೊಲೀಸ್ ಕಸ್ಟಡಿ ಅವಧಿಯನ್ನು 15 ದಿನಗಳಿಗಿಂತ ಹೆಚ್ಚು ವಿಸ್ತರಿಸುವುದು ಕಾನೂನಿನ ನಿಯಮ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಗಂಭೀರ ಆಕ್ರಮಣವಾಗಿದೆ. ಆರೋಪಿಯನ್ನು ನೇರವಾಗಿ ಪೋಲೀಸರ ವಶದಲ್ಲಿ ಇಡುವ ಈ ಅವಧಿಯು ಪೊಲೀಸರಿಂದ ಗರಿಷ್ಠ ಒತ್ತಡವನ್ನು ಉಂಟು ಮಾಡುವ ಸಮಯವಾಗಿದೆ. ಇದು ಪೊಲೀಸರು ಆರೋಪಿಗೆ ದೈಹಿಕ ಚಿತ್ರಹಿಂಸೆ, ಭಾವನಾತ್ಮಕ ಒತ್ತಡಗಳು ಮತ್ತು ಇತರ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಬಳಸಲು ಅವಕಾಶ ನೀಡುತ್ತದೆ ಎಂದಿದೆ.

ಗೃಹ ಸಚಿವರು ಪೊಲೀಸ್ ಕಸ್ಟಡಿ ಅವದಿ 15 ದಿನಗಳು ಮಾತ್ರ ಎಂದಿದ್ದಾರೆ. ಆದರೆ, ಹೊಸ ಕಾನೂನಿನಲ್ಲಿ 15 ದಿನಗಳ ಕಸ್ಟಡಿ ಅವಧಿಯ ಬಳಿಕ ಮ್ಯಾಜಿಸ್ಟ್ರೇಟ್ ಪೊಲೀಸ್ ಕಸ್ಟಡಿ ಅಲ್ಲದೆ ಇತರ ರೀತಿಯಲ್ಲಿ ಬಂಧಿಸಲು ಅನುಮತಿ ನೀಡುವ ಅವಕಾಶವಿಲ್ಲ. ನ್ಯಾಯಾಲದಲ್ಲಿ ಕಾನೂನಿನಲ್ಲಿ ಹೇಳಿರುವುದು ಮಾತ್ರ ಪರಿಗಣನೆಗೆ ಬರುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಹೊಸ ಕಾನೂನಿಗೆ ತಿದ್ದುಪಡಿ ತಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ 15 ದಿನಗಳು ಮಾತ್ರ ಎಂದು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಪಿಯುಸಿಎಲ್ ಆಗ್ರಹಿಸಿದೆ.

ಇದನ್ನೂ ಓದಿ : ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...