Homeಮುಖಪುಟಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

- Advertisement -
- Advertisement -

ಹೊಸದಾಗಿ ಜಾರಿಗೊಳಿಸಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರಲ್ಲಿ ಪೊಲೀಸ್ ಕಸ್ಟಡಿ ಅವಧಿಯನ್ನು ಹೆಚ್ಚಿಸಿರುವ ಸೆಕ್ಷನ್‌ಗೆ ತಿದ್ದುಪಡಿ ತರಬೇಕು ಮತ್ತು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್-1973ರ ಬದಲಿಗೆ ಜಾರಿಗೆ ಬಂದಿರುವ ನಾಗರಿಕ ಸುರಕ್ಷಾ ಸಂಹಿತೆ-2023 ಆರೋಪಿಗಳನ್ನು ಗರಿಷ್ಠ 15 ದಿನಗಳ ಬದಲಾಗಿ 60-90 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲು ಅನುಮತಿಸುತ್ತದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿಯಲ್ಲಿ ಪೊಲೀಸ್ ಕಸ್ಟಡಿಯ ಅವಧಿಯು 15 ದಿನಗಳೇ ಇರಲಿದೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದು, ಗರಿಷ್ಠ ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ, ಒಬ್ಬ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದ ವೇಳೆ ಆತ 15 ದಿನಗಳ ಕಾಲ ಆಸ್ಪತ್ರೆಗೆ ದಾಖಲಾದರೆ, ಆತನ ಕಸ್ಟಡಿ ಅವಧಿಯು ಮುಕ್ತಾಯವಾಗುತ್ತಿದ್ದರಿಂದ ಯಾವುದೇ ವಿಚಾರಣೆಗೆ ಅವಕಾಶ ಇರಲಿಲ್ಲ ಎಂದು ಹೇಳಿದ್ದಾರೆ. ಅಮಿತ್ ಶಾ ಅವರ ಈ ಸ್ಪಷ್ಟೀಕರಣವು ಸ್ವಾಗತಾರ್ಹವಾದರೂ, ಕಾನೂನಿನ ಬಲ ಹೊಂದಿಲ್ಲದ ಕಾರಣ ಇದು ಸಾಕಾಗುವುದಿಲ್ಲ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೇಳಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 (3)ಗೆ ತಿದ್ದುಪಡಿ ತಂದು ತಕ್ಷಣ ಸ್ಪಷ್ಟೀಕರಣ ನೀಡಿದರೆ ನ್ಯಾಯಾಲಯಗಳು, ಪೋಲೀಸ್ ಮತ್ತು ಸಾರ್ವಜನಿಕ ಅಭಿಯೋಜಕರಲ್ಲಿ ಆಗುವ ಗೊಂದಲಗಳು ತಪ್ಪಲಿದೆ ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರಿಗೆ ಬರೆದ ಪತ್ರದಲ್ಲಿ ಪಿಯುಸಿಎಲ್‌ ಆಗ್ರಹಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 ರ ಪೊಲೀಸ್ ಕಸ್ಟಡಿಯ ವ್ಯಾಖ್ಯಾನವು ಸಿಆರ್‌ಪಿಸಿಯ ಸೆಕ್ಷನ್ 167ರ ಮೌಖಿಕ ಪ್ರತಿಯಾಗಿದೆ. ಆದರೆ, ಹೊಸ ಸೆಕ್ಷನ್‌ನಲ್ಲಿ ಎಂಟು ಪದಗಳನ್ನು ಬಿಟ್ಟು ಬಿಡಲಾಗಿದೆ. ಅವು ಪೊಲೀಸ್ ರಿಮಾಂಡ್‌ಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿಭಿನ್ನವಾದ ವ್ಯಾಖ್ಯಾನ ನೀಡುತ್ತದೆ ಎಂದು ಪಿಯುಸಿಎಲ್‌ ತಿಳಿಸಿದೆ.

ಹಳೆಯ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನಲ್ಲಿ ಆರೋಪಿಯನ್ನು 15 ದಿನಗಳ ಬಳಿಕ ಪೊಲೀಸ್ ಕಸ್ಟಡಿಯಲ್ಲಿ ಅಥವಾ ಇತರ ರೀತಿಯಲ್ಲಿ ಬಂಧಿಸಲು ಮ್ಯಾಜಿಸ್ಟ್ರೇಟ್‌ಗೆ ಅವಕಾಶ ಇದೆ ಎನ್ನಲಾಗಿತ್ತು. ಹೊಸ ಕಾನೂನಿನಲ್ಲಿ ‘ಇತರ ರೀತಿಯಲ್ಲಿ’ ಎಂಬ ಪದವಿಲ್ಲ. ಇದು ಪೊಲೀಸರು ಆರೋಪಿಯನ್ನು 60-90 ದಿನಗಳವರೆಗೆ ಕಸ್ಟಡಿಗೆ ಪಡೆಯಲು ಅವಕಾಶ ನೀಡುತ್ತದೆ ಎಂದು ಪಿಯುಸಿಎಲ್ ಹೇಳಿದೆ.

ಪೊಲೀಸ್ ಕಸ್ಟಡಿ ಅವಧಿಯನ್ನು 15 ದಿನಗಳಿಗಿಂತ ಹೆಚ್ಚು ವಿಸ್ತರಿಸುವುದು ಕಾನೂನಿನ ನಿಯಮ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಗಂಭೀರ ಆಕ್ರಮಣವಾಗಿದೆ. ಆರೋಪಿಯನ್ನು ನೇರವಾಗಿ ಪೋಲೀಸರ ವಶದಲ್ಲಿ ಇಡುವ ಈ ಅವಧಿಯು ಪೊಲೀಸರಿಂದ ಗರಿಷ್ಠ ಒತ್ತಡವನ್ನು ಉಂಟು ಮಾಡುವ ಸಮಯವಾಗಿದೆ. ಇದು ಪೊಲೀಸರು ಆರೋಪಿಗೆ ದೈಹಿಕ ಚಿತ್ರಹಿಂಸೆ, ಭಾವನಾತ್ಮಕ ಒತ್ತಡಗಳು ಮತ್ತು ಇತರ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಬಳಸಲು ಅವಕಾಶ ನೀಡುತ್ತದೆ ಎಂದಿದೆ.

ಗೃಹ ಸಚಿವರು ಪೊಲೀಸ್ ಕಸ್ಟಡಿ ಅವದಿ 15 ದಿನಗಳು ಮಾತ್ರ ಎಂದಿದ್ದಾರೆ. ಆದರೆ, ಹೊಸ ಕಾನೂನಿನಲ್ಲಿ 15 ದಿನಗಳ ಕಸ್ಟಡಿ ಅವಧಿಯ ಬಳಿಕ ಮ್ಯಾಜಿಸ್ಟ್ರೇಟ್ ಪೊಲೀಸ್ ಕಸ್ಟಡಿ ಅಲ್ಲದೆ ಇತರ ರೀತಿಯಲ್ಲಿ ಬಂಧಿಸಲು ಅನುಮತಿ ನೀಡುವ ಅವಕಾಶವಿಲ್ಲ. ನ್ಯಾಯಾಲದಲ್ಲಿ ಕಾನೂನಿನಲ್ಲಿ ಹೇಳಿರುವುದು ಮಾತ್ರ ಪರಿಗಣನೆಗೆ ಬರುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಹೊಸ ಕಾನೂನಿಗೆ ತಿದ್ದುಪಡಿ ತಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ 15 ದಿನಗಳು ಮಾತ್ರ ಎಂದು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಪಿಯುಸಿಎಲ್ ಆಗ್ರಹಿಸಿದೆ.

ಇದನ್ನೂ ಓದಿ : ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...