Homeಮುಖಪುಟಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

- Advertisement -
- Advertisement -

ಹೊಸದಾಗಿ ಜಾರಿಗೊಳಿಸಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರಲ್ಲಿ ಪೊಲೀಸ್ ಕಸ್ಟಡಿ ಅವಧಿಯನ್ನು ಹೆಚ್ಚಿಸಿರುವ ಸೆಕ್ಷನ್‌ಗೆ ತಿದ್ದುಪಡಿ ತರಬೇಕು ಮತ್ತು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್-1973ರ ಬದಲಿಗೆ ಜಾರಿಗೆ ಬಂದಿರುವ ನಾಗರಿಕ ಸುರಕ್ಷಾ ಸಂಹಿತೆ-2023 ಆರೋಪಿಗಳನ್ನು ಗರಿಷ್ಠ 15 ದಿನಗಳ ಬದಲಾಗಿ 60-90 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲು ಅನುಮತಿಸುತ್ತದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿಯಲ್ಲಿ ಪೊಲೀಸ್ ಕಸ್ಟಡಿಯ ಅವಧಿಯು 15 ದಿನಗಳೇ ಇರಲಿದೆ ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಮಿತ್ ಶಾ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದು, ಗರಿಷ್ಠ ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ, ಒಬ್ಬ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದ ವೇಳೆ ಆತ 15 ದಿನಗಳ ಕಾಲ ಆಸ್ಪತ್ರೆಗೆ ದಾಖಲಾದರೆ, ಆತನ ಕಸ್ಟಡಿ ಅವಧಿಯು ಮುಕ್ತಾಯವಾಗುತ್ತಿದ್ದರಿಂದ ಯಾವುದೇ ವಿಚಾರಣೆಗೆ ಅವಕಾಶ ಇರಲಿಲ್ಲ ಎಂದು ಹೇಳಿದ್ದಾರೆ. ಅಮಿತ್ ಶಾ ಅವರ ಈ ಸ್ಪಷ್ಟೀಕರಣವು ಸ್ವಾಗತಾರ್ಹವಾದರೂ, ಕಾನೂನಿನ ಬಲ ಹೊಂದಿಲ್ಲದ ಕಾರಣ ಇದು ಸಾಕಾಗುವುದಿಲ್ಲ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಹೇಳಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 (3)ಗೆ ತಿದ್ದುಪಡಿ ತಂದು ತಕ್ಷಣ ಸ್ಪಷ್ಟೀಕರಣ ನೀಡಿದರೆ ನ್ಯಾಯಾಲಯಗಳು, ಪೋಲೀಸ್ ಮತ್ತು ಸಾರ್ವಜನಿಕ ಅಭಿಯೋಜಕರಲ್ಲಿ ಆಗುವ ಗೊಂದಲಗಳು ತಪ್ಪಲಿದೆ ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರಿಗೆ ಬರೆದ ಪತ್ರದಲ್ಲಿ ಪಿಯುಸಿಎಲ್‌ ಆಗ್ರಹಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 187 ರ ಪೊಲೀಸ್ ಕಸ್ಟಡಿಯ ವ್ಯಾಖ್ಯಾನವು ಸಿಆರ್‌ಪಿಸಿಯ ಸೆಕ್ಷನ್ 167ರ ಮೌಖಿಕ ಪ್ರತಿಯಾಗಿದೆ. ಆದರೆ, ಹೊಸ ಸೆಕ್ಷನ್‌ನಲ್ಲಿ ಎಂಟು ಪದಗಳನ್ನು ಬಿಟ್ಟು ಬಿಡಲಾಗಿದೆ. ಅವು ಪೊಲೀಸ್ ರಿಮಾಂಡ್‌ಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿಭಿನ್ನವಾದ ವ್ಯಾಖ್ಯಾನ ನೀಡುತ್ತದೆ ಎಂದು ಪಿಯುಸಿಎಲ್‌ ತಿಳಿಸಿದೆ.

ಹಳೆಯ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನಲ್ಲಿ ಆರೋಪಿಯನ್ನು 15 ದಿನಗಳ ಬಳಿಕ ಪೊಲೀಸ್ ಕಸ್ಟಡಿಯಲ್ಲಿ ಅಥವಾ ಇತರ ರೀತಿಯಲ್ಲಿ ಬಂಧಿಸಲು ಮ್ಯಾಜಿಸ್ಟ್ರೇಟ್‌ಗೆ ಅವಕಾಶ ಇದೆ ಎನ್ನಲಾಗಿತ್ತು. ಹೊಸ ಕಾನೂನಿನಲ್ಲಿ ‘ಇತರ ರೀತಿಯಲ್ಲಿ’ ಎಂಬ ಪದವಿಲ್ಲ. ಇದು ಪೊಲೀಸರು ಆರೋಪಿಯನ್ನು 60-90 ದಿನಗಳವರೆಗೆ ಕಸ್ಟಡಿಗೆ ಪಡೆಯಲು ಅವಕಾಶ ನೀಡುತ್ತದೆ ಎಂದು ಪಿಯುಸಿಎಲ್ ಹೇಳಿದೆ.

ಪೊಲೀಸ್ ಕಸ್ಟಡಿ ಅವಧಿಯನ್ನು 15 ದಿನಗಳಿಗಿಂತ ಹೆಚ್ಚು ವಿಸ್ತರಿಸುವುದು ಕಾನೂನಿನ ನಿಯಮ ಮತ್ತು ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಗಂಭೀರ ಆಕ್ರಮಣವಾಗಿದೆ. ಆರೋಪಿಯನ್ನು ನೇರವಾಗಿ ಪೋಲೀಸರ ವಶದಲ್ಲಿ ಇಡುವ ಈ ಅವಧಿಯು ಪೊಲೀಸರಿಂದ ಗರಿಷ್ಠ ಒತ್ತಡವನ್ನು ಉಂಟು ಮಾಡುವ ಸಮಯವಾಗಿದೆ. ಇದು ಪೊಲೀಸರು ಆರೋಪಿಗೆ ದೈಹಿಕ ಚಿತ್ರಹಿಂಸೆ, ಭಾವನಾತ್ಮಕ ಒತ್ತಡಗಳು ಮತ್ತು ಇತರ ರೀತಿಯ ಕಾನೂನುಬಾಹಿರ ಕ್ರಮಗಳನ್ನು ಬಳಸಲು ಅವಕಾಶ ನೀಡುತ್ತದೆ ಎಂದಿದೆ.

ಗೃಹ ಸಚಿವರು ಪೊಲೀಸ್ ಕಸ್ಟಡಿ ಅವದಿ 15 ದಿನಗಳು ಮಾತ್ರ ಎಂದಿದ್ದಾರೆ. ಆದರೆ, ಹೊಸ ಕಾನೂನಿನಲ್ಲಿ 15 ದಿನಗಳ ಕಸ್ಟಡಿ ಅವಧಿಯ ಬಳಿಕ ಮ್ಯಾಜಿಸ್ಟ್ರೇಟ್ ಪೊಲೀಸ್ ಕಸ್ಟಡಿ ಅಲ್ಲದೆ ಇತರ ರೀತಿಯಲ್ಲಿ ಬಂಧಿಸಲು ಅನುಮತಿ ನೀಡುವ ಅವಕಾಶವಿಲ್ಲ. ನ್ಯಾಯಾಲದಲ್ಲಿ ಕಾನೂನಿನಲ್ಲಿ ಹೇಳಿರುವುದು ಮಾತ್ರ ಪರಿಗಣನೆಗೆ ಬರುತ್ತದೆ. ಹಾಗಾಗಿ, ಕೇಂದ್ರ ಸರ್ಕಾರ ಹೊಸ ಕಾನೂನಿಗೆ ತಿದ್ದುಪಡಿ ತಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ 15 ದಿನಗಳು ಮಾತ್ರ ಎಂದು ಸ್ಪಷ್ಟವಾಗಿ ಉಲ್ಲೇಖಿಸಬೇಕು ಎಂದು ಪಿಯುಸಿಎಲ್ ಆಗ್ರಹಿಸಿದೆ.

ಇದನ್ನೂ ಓದಿ : ಕೇಜ್ರಿವಾಲ್ ಜಾಮೀನಿಗೆ ತಡೆ ನೀಡಿದ್ದ ನ್ಯಾಯಾಧೀಶರು ಇಡಿ ವಕೀಲರ ಸಹೋದರ: 150 ವಕೀಲರಿಂದ ಸಿಜೆಐಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...