Homeಮುಖಪುಟಪುದುಚೇರಿ: ಬಿಜೆಪಿಯಿಂದ ಆಧಾರ್‌ ಮಾಹಿತಿ ಸೋರಿಕೆ-ಗಂಭೀರ ಪ್ರಕರಣ ಎಂದ ಹೈಕೋರ್ಟ್

ಪುದುಚೇರಿ: ಬಿಜೆಪಿಯಿಂದ ಆಧಾರ್‌ ಮಾಹಿತಿ ಸೋರಿಕೆ-ಗಂಭೀರ ಪ್ರಕರಣ ಎಂದ ಹೈಕೋರ್ಟ್

- Advertisement -
- Advertisement -

ಪುದುಚೇರಿ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಆಧಾರ್‌‌ ಮಾಹಿತಿಯನ್ನು ಸೋರಿಕೆ ಮಾಡುವ ಮೂಲಕ ವೈಯಕ್ತಿಕ ಮಾಹಿತಿ ಹಾಗೂ ವಾಟ್ಸಾಪ್‌‌ ಸಂಖ್ಯೆಗಳನ್ನು ಸಂಗ್ರಹಿಸಿ ಪ್ರಚಾರ ಸಂದೇಶಗಳನ್ನು ಕಳುಹಿಸುತ್ತಿದೆ ಎಂದು ಮದ್ರಾಸ್ ಹೈಕೋರ್ಟ್‌ನಲ್ಲಿ ಪುದುಚೇರಿ ಡಿವೈಎಫ್‌ಐ ಘಟಕದ ಅಧ್ಯಕ್ಷ ಆನಂದ್‌‌ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯನ್ನು ಕೈಗೆತ್ತಿಕೊಂಡಿರುವ ಮದ್ರಾಸ್ ಹೈಕೋರ್ಟ್, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಇದು ಗಂಭೀರ ಅಪರಾಧವಾಗಿದ್ದು, ಚುನಾವಣಾ ಆಯೋಗದ ತನಿಖೆಯನ್ನು ಸೈಬರ್ ಸೆಲ್‌ಗೆ ಹಸ್ತಾಂತರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಡಿವೈಎಫ್‌ಐ ಸಲ್ಲಿಸಿದ ಅರ್ಜಿಯಲ್ಲಿ, “ಸ್ಥಳೀಯ ಬಿಜೆಪಿ ಮುಖಂಡರು ಆಧಾರ್‌ನಿಂದ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ನಂತರ ಪ್ರತಿ ಕ್ಷೇತ್ರದಲ್ಲಿ ಬೂತ್ ಮಟ್ಟದ ವಾಟ್ಸಾಪ್ ಗುಂಪುಗಳನ್ನು ಸ್ಥಾಪಿಸಲಾಗಿದೆ. ಅನೇಕ ವಾಟ್ಸಾಪ್ ಗುಂಪುಗಳನ್ನು ಈ ರೀತಿ ನಿರ್ಮಿಸಲಾಗಿದ್ದು, ಈ ಕಾರ್ಯವು ಬೂತ್ ಆಧಾರಿತ ಮತದಾರರನ್ನು ಕೇಂದ್ರೀಕರಿಸಿದೆ. ವಿಧಾನಸಭಾ ಕ್ಷೇತ್ರಗಳ ಸಂದೇಶಗಳು ಮತ್ತು ಪ್ರಚಾರಗಳನ್ನು ಈ ಮೂಲಕ ಹಂಚಿಕೊಳ್ಳಲಾಗುಗುತ್ತಿದೆ” ಎಂದು ಹೇಳಲಾಗಿದೆ.

ಬಿಜೆಪಿ ವಾಟ್ಸಾಪ್ ಗುಂಪುಗಳ ನಿರ್ವಾಹಕರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ನಂತರ ಪುದುಚೇರಿ ಘಟಕ ಒಂದರ ಅಡಿಯಲ್ಲೇ ಮತದಾರರ 953 ವಾಟ್ಸಾಪ್ ಗುಂಪುಗಳಿವೆ ಎಂಬ ಆಘಾತಕಾರಿ ಮಾಹಿತಿ ಸಿಕ್ಕಿದೆ ಎಂದು ಡಿವೈಎಫ್‌ಐ ದೂರಿನಲ್ಲಿ ತಿಳಿಸಿದೆ.

ವಾಟ್ಸಾಪ್ ಮಾತ್ರವಲ್ಲದೆ ಬಿಜೆಪಿ ನಾಯಕರು ಕೂಡ ಮತದಾರರಿಗೆ ಫೋನ್ ಮಾಡಿದ್ದಾರೆ. ಫೋನ್, ಹೆಸರು, ಮತದಾನ ಕೇಂದ್ರ ಮತ್ತು ವಿಧಾನಸಭಾ ಕ್ಷೇತ್ರದಂತಹ ಮಾಹಿತಿಯನ್ನು ಫೋನ್ ಮೂಲಕ ಕೋರಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ವಿಚಾರಣಾ ತಂಡವನ್ನು ನೇಮಿಸಬೇಕು ಮತ್ತು ಬಿಜೆಪಿ ಅಭ್ಯರ್ಥಿಗಳು ಈ ರೀತಿ ಮತಗಳನ್ನು ಕೇಳದಂತೆ ತಡೆಯಬೇಕು ಎಂದು ಡಿವೈಎಫ್‌ಐ ದೂರಿನಲ್ಲಿ ಕೋರಿದೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...