Homeಮುಖಪುಟಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು 'ಲೈಕ್' ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು ‘ಲೈಕ್’ ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

- Advertisement -
- Advertisement -

ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಟ್ವೀಟ್ ಅನ್ನು ‘ಲೈಕ್’ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಆರಂಭವಾಗಿದೆ. ಇದು ಮುಂದಿನ ತಿಂಗಳು ಅಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗದ ನಿಷ್ಪಕ್ಷಪಾತ ನಡವಳಿಕೆ ಕುರಿತು ಪ್ರಶ್ನೆಗಳನ್ನು ಎತ್ತಿದೆ.

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಬಂಗಾಳ ಭಾಷೆಯಲ್ಲಿ ಹೊಸ ಚಾನೆಲ್ ಆರಂಭಿಸುತ್ತಿರುವುದಾಗಿ ಟ್ವೀಟ್ ಮಾಡಿದೆ. ಅದನ್ನು ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ‘ಲೈಕ್’ ಮಾಡಿರುವ ಸ್ಕ್ರೀನ್‌ ಶಾಟ್‌ ಅನ್ನು ಹಂಚಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ, “ಇದು ನ್ಯಾಯಸಮ್ಮತ, ಪಾರದರ್ಶಕ, ವಸ್ತುನಿಷ್ಟ ಚುನಾವಣಾ ಯಂತ್ರಾಂಗವೇ” ಎಂದು ಪ್ರಶ್ನಿಸಿದ್ದಾರೆ.

ಪುದುಚೇರಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಸಾಕೇತ್ ಗೋಖಲೆ ದೂರು ಸಲ್ಲಿಸಿದ್ದರು. ಆದರೆ ಅದನ್ನು ದಾಖಲಿಸಿಲು ಪುದುಚೇರಿ ಚುನಾವಣಾ ಆಯೋಗ ನಿರಾಕರಿಸಿತ್ತು. ಈ ಕುರಿತು ಆಕ್ರೋಶಿತಗೊಂಡಿದ್ದ ಗೋಖಲೆ ಇಲ್ಲಿನ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ನನ್ನ ದೂರು ದಾಖಲಿಸಿಲ್ಲ ಮತ್ತು ಅರ್ನಾಬ್ ಗೋಸ್ವಾಮಿ ಟ್ವೀಟ್‌ ಅನ್ನು ಸಮರ್ಥಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ಅದು ಅವರ ವಯಕ್ತಿಕ ಖಾತೆಯಲ್ಲ. ಬದಲಿಗೆ ಚುನಾವಣಾ ಆಯೋಗದ ಅಧಿಕೃತ ಅಕೌಂಟ್‌ನಲ್ಲಿ ಬಿಜೆಪಿ ಪರವಿರುವ ಖಾಸಗಿ ಚಾನೆಲ್‌ ಒಂದನ್ನು ಉತ್ತೇಜಿಸಲಾಗುತ್ತಿದೆ. ಕೆಲವೇ ತಿಂಗಳಲ್ಲಿ ಅಲ್ಲಿ ಚುನಾವಣೆ ನಡೆಯುತ್ತಿದೆ. ಇದು ಹಲವು ಪ್ರಶ್ನೆಗಳನ್ನು ಎತ್ತಲಿದ್ದು ಇದರ ಕುರಿತು ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕೆಂದು ಗೋಖಲೆ ಒತ್ತಾಯಿಸಿದ್ದಾರೆ.

ಅಲ್ಲದೆ ಜನವರಿ 26ರಂದು ರೈತರು ಭಾರತೀಯ ಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಮಾಡಿದ್ದ ಟ್ವೀಟ್ ಅನ್ನು ಸಹ ಪುದುಚೇರಿ ಚುನಾವಣಾ ಆಯೋಗ ಲೈಕ್ ಮಾಡಿದೆ. “ಇದು ಅತ್ಯಂತ ಕೊಳಕುತನ. ಈಗ ಸಂಘಪರಿವಾರದ ಮನಸ್ಥಿತಿಯಲ್ಲಿದೆ. ಇಂತಹ ಆಯೋಗದಿಂದ ಪಾರದರ್ಶನ, ನ್ಯಾಯಸಮ್ಮತ, ನಿಷ್ಪಷಪಾತ ಚುನಾವಣೆಯನ್ನು ಬಯಸುವುದು ಹೇಗೆ? ಇದರ ಬಗ್ಗೆ ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಲೂ ಪಾಂಡಿಸಿಚೇರಿಯ ಮುಖ್ಯ ಚುನಾವಣಾ ಅದಿಕಾರಿಗ ಟ್ವಿಟರ್ ಟೈಮ್‌ಲೈನ್‌ನಲ್ಲಿ ಮೊದಲ ಟ್ವೀಟ್‌ಗೆ ಲೈಕ್ ಒತ್ತಿರುವುದು ಹಾಗೇ ಇದೆ. ಆದರೆ ಎರಡನೇ ಟ್ವೀಟ್‌ಗೆ ಮಾಡಿದ್ದ ಲೈಕ್ ಅನ್ನು ಅನ್‌ಲೈಕ್ ಮಾಡಲಾಗಿದೆ ಎಂದು ಜನತಾಕರಿಪೋರ್ಟರ್ ವರದಿ ಮಾಡಿದೆ. ಗೋಖಲೆಯವರ ಪ್ರಶ್ನೆಗಳಗೆ ಭಾರತೀಯ ಚುನಾವಣಾ ಆಯೋಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಅಧಿಕಾರ ಹಿಡಿಯಲು ಸ್ವಾಯುತ್ತ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ ಬದಲಿಸಲು ಹೊರಟ ಕೇಂದ್ರ

ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....