Homeಮುಖಪುಟ'ಪುದುಚೇರಿಯನ್ನು ಕೇಂದ್ರ 'ಟ್ರಾನ್ಸ್ ಜೆಂಡರ್'ನಂತೆ ಪರಿಗಣಿಸುತ್ತಿದೆ': ಸಿಎಂ ನಾರಾಯಣಸ್ವಾಮಿ ಅಸಮಾಧಾನ

‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ತಾರತಮ್ಯ ತೋರುತ್ತಿರುವ ಮೋದಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಫೆಡರಲಿಸಂಗೆ ಹಣಕಾಸಿನ ವಿಷಯದಲ್ಲಿ ಉದಯೋನ್ಮುಖ ಸವಾಲುಗಳು’ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೆಮಿನಾರ್ ನ್ನು ಉದ್ಘಾಟಿಸಿ,  ಸಿಎಂ ನಾರಾಯಣಸ್ವಾಮಿ ಮಾತನಾಡಿದರು. ಜಿಎಸ್ ಟಿ ಹಾಗೂ ಇತರೆ ಯೋಜನೆಗಳ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪುದುಚೇರಿಯನ್ನು ರಾಜ್ಯವಾಗಿ ಪರಿಗಣಿಸುತ್ತಿದೆ. ಆದರೆ ಇತರೆ ರಾಜ್ಯಗಳಿಗೆ ಮಾತ್ರ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದೆ. ಕೇಂದ್ರಾಡಳಿತ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರ, ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ ಎಂದು ಕಿಡಿಕಾರಿದರು.

ಪುದುಚೇರಿಗೆ ಅನುದಾನ ಮಂಜೂರು ಮಾಡುವಾಗ ಕೇಂದ್ರವು ವಿಭಿನ್ನ ನಿಲುವು ತಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ. ಪುದುಚೇರಿಯನ್ನು ಕೆಲ ಯೋಜನೆಗಳಿಗೆ ಕೇಂದ್ರ ಸರ್ಕಾರ ರಾಜ್ಯದಂತೆ ಪರಿಗಣಿಸುತ್ತಿದ್ದು, ಇತರರಿಗೆ ಕೇಂದ್ರಾಡಳಿತ ಪ್ರದೇಶವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಇದೊಂದು ವಿಚಿತ್ರ ವಿಧಾನ ಮತ್ತು ಅಸಹಾಯಕತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಪ್ರಾದೇಶಿಕ ಬಜೆಟ್ ಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪುದುಚೇರಿಯನ್ನು ನಿರ್ಲಕ್ಷಿಸುತ್ತಿದೆ. ಪುದುಚೇರಿಗೆ ಬರಬೇಕಿದ್ದ ಶೇ. 30ರಷ್ಟು ಅನುದಾನದಲ್ಲಿ ಶೇ. 26ಕ್ಕೆ ಅನುದಾನವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಸಮರ್ಪಕ ಬೆಂಬಲದ ಕೊರತೆಯಿಂದ ಉಚಿತ ಅಕ್ಕಿ ವಿತರಣೆ ಯೋಜನೆಯಲ್ಲಿ ಸಾಕಷ್ಟು ಅಡೆತಡೆ, ತೊಂದರೆಗಳನ್ನು ಪುದುಚೇರಿ ಅನುಭವಿಸುತ್ತಿದೆ. ಇನ್ನು ಲೆಫ್ಟಿನೆಂಟ್ ಗವರ್ನರ್ ಅವರ ಆಡಳಿತಾತ್ಮಕ ಅಡಚಣೆಗಳು ನಮಗೆ ಮುಜುಗರವನ್ನುಂಟು ಮಾಡಿವೆ ಎಂದು ಕೇಂದ್ರದ ಧೋರಣೆಯ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ಅಲ್ಲದೇ ಜಮ್ಮುಕಾಶ್ಮೀರ ಹಾಗೂ ಲಡಾಖ್ ನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಹಳೆಯ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯನ್ನು 15 ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರನ್ನಾಗಿ ಸೇರಿಸಿಕೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಮಾತನಾಡಿ, ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಸ್ತಕ್ಷೇಪ ಪುದುಚೇರಿಯಲ್ಲಿ ಪ್ರಜಾಪ್ರಭುತ್ವದ ಅಪಹಾಸ್ಯವಾಗುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದರು.

ಡಿಎಂಕೆ ಪಕ್ಷದ ಎಂ.ಕೆ.ಕನಿಮೋಳಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುತ್ತಿರುವ ಮತ್ತು ಪ್ರಗತಿಪರ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಧಾರಗಳು, ವರ್ತನೆ ಪ್ರಗತಿಪರ ರಾಜ್ಯಗಳಿಗೆ ಮಾರಕವಾಗಿವೆ. ಜಿಎಸ್ ಟಿ ಹೇರಿಕೆ ಮತ್ತು ಆರ್ಥಿಕ ನಷ್ಟದಿಂದ ಮತ್ತಷ್ಟು ಹಾನಿಯುಂಟಾಗಿದೆ. ತಿರುಪುರದಂತಹ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ತೆರಿಗೆ ವಿಧಿಸಿದ್ದರಿಂದ ಕೆಲ ಕೈಗಾರಿಕೆಗಳು ಬಾಗಿಲು ಹಾಕಿವೆ. ಉದ್ಯೋಗ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಿಳುನಾಡು ಸಿಪಿಐ (ಎಂ) ಕಾರ್ಯದರ್ಶಿ ಬಾಲಕೃಷ್ಣನ್ ಮಾತನಾಡಿ, ಕ್ಯಾಬಿನೆಟ್ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರಂತರ ಹಸ್ತಕ್ಷೇಪವಿದೆ. ಹೀಗಿದ್ದರೆ ಹುದ್ದೆಯ ಅಗತ್ಯವಿಲ್ಲ. ಎಲ್ಲವೂ ಸ್ವಯಂಚಾಲಿತವಾಗಿದೆ. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಬಹುಸಾಂಸ್ಕೃತಿಕ ಮತ್ತು ಬಹುಭಾಷೆ ಹಾಗೂ ವೈವಿಧ್ಯತೆಯನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...