Homeಮುಖಪುಟ'ಪುದುಚೇರಿಯನ್ನು ಕೇಂದ್ರ 'ಟ್ರಾನ್ಸ್ ಜೆಂಡರ್'ನಂತೆ ಪರಿಗಣಿಸುತ್ತಿದೆ': ಸಿಎಂ ನಾರಾಯಣಸ್ವಾಮಿ ಅಸಮಾಧಾನ

‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ತಾರತಮ್ಯ ತೋರುತ್ತಿರುವ ಮೋದಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಫೆಡರಲಿಸಂಗೆ ಹಣಕಾಸಿನ ವಿಷಯದಲ್ಲಿ ಉದಯೋನ್ಮುಖ ಸವಾಲುಗಳು’ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೆಮಿನಾರ್ ನ್ನು ಉದ್ಘಾಟಿಸಿ,  ಸಿಎಂ ನಾರಾಯಣಸ್ವಾಮಿ ಮಾತನಾಡಿದರು. ಜಿಎಸ್ ಟಿ ಹಾಗೂ ಇತರೆ ಯೋಜನೆಗಳ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪುದುಚೇರಿಯನ್ನು ರಾಜ್ಯವಾಗಿ ಪರಿಗಣಿಸುತ್ತಿದೆ. ಆದರೆ ಇತರೆ ರಾಜ್ಯಗಳಿಗೆ ಮಾತ್ರ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದೆ. ಕೇಂದ್ರಾಡಳಿತ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರ, ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ ಎಂದು ಕಿಡಿಕಾರಿದರು.

ಪುದುಚೇರಿಗೆ ಅನುದಾನ ಮಂಜೂರು ಮಾಡುವಾಗ ಕೇಂದ್ರವು ವಿಭಿನ್ನ ನಿಲುವು ತಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ. ಪುದುಚೇರಿಯನ್ನು ಕೆಲ ಯೋಜನೆಗಳಿಗೆ ಕೇಂದ್ರ ಸರ್ಕಾರ ರಾಜ್ಯದಂತೆ ಪರಿಗಣಿಸುತ್ತಿದ್ದು, ಇತರರಿಗೆ ಕೇಂದ್ರಾಡಳಿತ ಪ್ರದೇಶವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಇದೊಂದು ವಿಚಿತ್ರ ವಿಧಾನ ಮತ್ತು ಅಸಹಾಯಕತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಪ್ರಾದೇಶಿಕ ಬಜೆಟ್ ಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪುದುಚೇರಿಯನ್ನು ನಿರ್ಲಕ್ಷಿಸುತ್ತಿದೆ. ಪುದುಚೇರಿಗೆ ಬರಬೇಕಿದ್ದ ಶೇ. 30ರಷ್ಟು ಅನುದಾನದಲ್ಲಿ ಶೇ. 26ಕ್ಕೆ ಅನುದಾನವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಸಮರ್ಪಕ ಬೆಂಬಲದ ಕೊರತೆಯಿಂದ ಉಚಿತ ಅಕ್ಕಿ ವಿತರಣೆ ಯೋಜನೆಯಲ್ಲಿ ಸಾಕಷ್ಟು ಅಡೆತಡೆ, ತೊಂದರೆಗಳನ್ನು ಪುದುಚೇರಿ ಅನುಭವಿಸುತ್ತಿದೆ. ಇನ್ನು ಲೆಫ್ಟಿನೆಂಟ್ ಗವರ್ನರ್ ಅವರ ಆಡಳಿತಾತ್ಮಕ ಅಡಚಣೆಗಳು ನಮಗೆ ಮುಜುಗರವನ್ನುಂಟು ಮಾಡಿವೆ ಎಂದು ಕೇಂದ್ರದ ಧೋರಣೆಯ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ಅಲ್ಲದೇ ಜಮ್ಮುಕಾಶ್ಮೀರ ಹಾಗೂ ಲಡಾಖ್ ನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಹಳೆಯ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯನ್ನು 15 ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರನ್ನಾಗಿ ಸೇರಿಸಿಕೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಮಾತನಾಡಿ, ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಸ್ತಕ್ಷೇಪ ಪುದುಚೇರಿಯಲ್ಲಿ ಪ್ರಜಾಪ್ರಭುತ್ವದ ಅಪಹಾಸ್ಯವಾಗುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದರು.

ಡಿಎಂಕೆ ಪಕ್ಷದ ಎಂ.ಕೆ.ಕನಿಮೋಳಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುತ್ತಿರುವ ಮತ್ತು ಪ್ರಗತಿಪರ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಧಾರಗಳು, ವರ್ತನೆ ಪ್ರಗತಿಪರ ರಾಜ್ಯಗಳಿಗೆ ಮಾರಕವಾಗಿವೆ. ಜಿಎಸ್ ಟಿ ಹೇರಿಕೆ ಮತ್ತು ಆರ್ಥಿಕ ನಷ್ಟದಿಂದ ಮತ್ತಷ್ಟು ಹಾನಿಯುಂಟಾಗಿದೆ. ತಿರುಪುರದಂತಹ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ತೆರಿಗೆ ವಿಧಿಸಿದ್ದರಿಂದ ಕೆಲ ಕೈಗಾರಿಕೆಗಳು ಬಾಗಿಲು ಹಾಕಿವೆ. ಉದ್ಯೋಗ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಿಳುನಾಡು ಸಿಪಿಐ (ಎಂ) ಕಾರ್ಯದರ್ಶಿ ಬಾಲಕೃಷ್ಣನ್ ಮಾತನಾಡಿ, ಕ್ಯಾಬಿನೆಟ್ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರಂತರ ಹಸ್ತಕ್ಷೇಪವಿದೆ. ಹೀಗಿದ್ದರೆ ಹುದ್ದೆಯ ಅಗತ್ಯವಿಲ್ಲ. ಎಲ್ಲವೂ ಸ್ವಯಂಚಾಲಿತವಾಗಿದೆ. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಬಹುಸಾಂಸ್ಕೃತಿಕ ಮತ್ತು ಬಹುಭಾಷೆ ಹಾಗೂ ವೈವಿಧ್ಯತೆಯನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....