Homeಮುಖಪುಟ'ಪುದುಚೇರಿಯನ್ನು ಕೇಂದ್ರ 'ಟ್ರಾನ್ಸ್ ಜೆಂಡರ್'ನಂತೆ ಪರಿಗಣಿಸುತ್ತಿದೆ': ಸಿಎಂ ನಾರಾಯಣಸ್ವಾಮಿ ಅಸಮಾಧಾನ

‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ತಾರತಮ್ಯ ತೋರುತ್ತಿರುವ ಮೋದಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಫೆಡರಲಿಸಂಗೆ ಹಣಕಾಸಿನ ವಿಷಯದಲ್ಲಿ ಉದಯೋನ್ಮುಖ ಸವಾಲುಗಳು’ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೆಮಿನಾರ್ ನ್ನು ಉದ್ಘಾಟಿಸಿ,  ಸಿಎಂ ನಾರಾಯಣಸ್ವಾಮಿ ಮಾತನಾಡಿದರು. ಜಿಎಸ್ ಟಿ ಹಾಗೂ ಇತರೆ ಯೋಜನೆಗಳ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪುದುಚೇರಿಯನ್ನು ರಾಜ್ಯವಾಗಿ ಪರಿಗಣಿಸುತ್ತಿದೆ. ಆದರೆ ಇತರೆ ರಾಜ್ಯಗಳಿಗೆ ಮಾತ್ರ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದೆ. ಕೇಂದ್ರಾಡಳಿತ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರ, ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ ಎಂದು ಕಿಡಿಕಾರಿದರು.

ಪುದುಚೇರಿಗೆ ಅನುದಾನ ಮಂಜೂರು ಮಾಡುವಾಗ ಕೇಂದ್ರವು ವಿಭಿನ್ನ ನಿಲುವು ತಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ. ಪುದುಚೇರಿಯನ್ನು ಕೆಲ ಯೋಜನೆಗಳಿಗೆ ಕೇಂದ್ರ ಸರ್ಕಾರ ರಾಜ್ಯದಂತೆ ಪರಿಗಣಿಸುತ್ತಿದ್ದು, ಇತರರಿಗೆ ಕೇಂದ್ರಾಡಳಿತ ಪ್ರದೇಶವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಇದೊಂದು ವಿಚಿತ್ರ ವಿಧಾನ ಮತ್ತು ಅಸಹಾಯಕತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಪ್ರಾದೇಶಿಕ ಬಜೆಟ್ ಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪುದುಚೇರಿಯನ್ನು ನಿರ್ಲಕ್ಷಿಸುತ್ತಿದೆ. ಪುದುಚೇರಿಗೆ ಬರಬೇಕಿದ್ದ ಶೇ. 30ರಷ್ಟು ಅನುದಾನದಲ್ಲಿ ಶೇ. 26ಕ್ಕೆ ಅನುದಾನವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಸಮರ್ಪಕ ಬೆಂಬಲದ ಕೊರತೆಯಿಂದ ಉಚಿತ ಅಕ್ಕಿ ವಿತರಣೆ ಯೋಜನೆಯಲ್ಲಿ ಸಾಕಷ್ಟು ಅಡೆತಡೆ, ತೊಂದರೆಗಳನ್ನು ಪುದುಚೇರಿ ಅನುಭವಿಸುತ್ತಿದೆ. ಇನ್ನು ಲೆಫ್ಟಿನೆಂಟ್ ಗವರ್ನರ್ ಅವರ ಆಡಳಿತಾತ್ಮಕ ಅಡಚಣೆಗಳು ನಮಗೆ ಮುಜುಗರವನ್ನುಂಟು ಮಾಡಿವೆ ಎಂದು ಕೇಂದ್ರದ ಧೋರಣೆಯ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ಅಲ್ಲದೇ ಜಮ್ಮುಕಾಶ್ಮೀರ ಹಾಗೂ ಲಡಾಖ್ ನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಹಳೆಯ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯನ್ನು 15 ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರನ್ನಾಗಿ ಸೇರಿಸಿಕೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಮಾತನಾಡಿ, ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಸ್ತಕ್ಷೇಪ ಪುದುಚೇರಿಯಲ್ಲಿ ಪ್ರಜಾಪ್ರಭುತ್ವದ ಅಪಹಾಸ್ಯವಾಗುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದರು.

ಡಿಎಂಕೆ ಪಕ್ಷದ ಎಂ.ಕೆ.ಕನಿಮೋಳಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುತ್ತಿರುವ ಮತ್ತು ಪ್ರಗತಿಪರ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಧಾರಗಳು, ವರ್ತನೆ ಪ್ರಗತಿಪರ ರಾಜ್ಯಗಳಿಗೆ ಮಾರಕವಾಗಿವೆ. ಜಿಎಸ್ ಟಿ ಹೇರಿಕೆ ಮತ್ತು ಆರ್ಥಿಕ ನಷ್ಟದಿಂದ ಮತ್ತಷ್ಟು ಹಾನಿಯುಂಟಾಗಿದೆ. ತಿರುಪುರದಂತಹ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ತೆರಿಗೆ ವಿಧಿಸಿದ್ದರಿಂದ ಕೆಲ ಕೈಗಾರಿಕೆಗಳು ಬಾಗಿಲು ಹಾಕಿವೆ. ಉದ್ಯೋಗ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಿಳುನಾಡು ಸಿಪಿಐ (ಎಂ) ಕಾರ್ಯದರ್ಶಿ ಬಾಲಕೃಷ್ಣನ್ ಮಾತನಾಡಿ, ಕ್ಯಾಬಿನೆಟ್ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರಂತರ ಹಸ್ತಕ್ಷೇಪವಿದೆ. ಹೀಗಿದ್ದರೆ ಹುದ್ದೆಯ ಅಗತ್ಯವಿಲ್ಲ. ಎಲ್ಲವೂ ಸ್ವಯಂಚಾಲಿತವಾಗಿದೆ. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಬಹುಸಾಂಸ್ಕೃತಿಕ ಮತ್ತು ಬಹುಭಾಷೆ ಹಾಗೂ ವೈವಿಧ್ಯತೆಯನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...