Homeಮುಖಪುಟ'ಪುದುಚೇರಿಯನ್ನು ಕೇಂದ್ರ 'ಟ್ರಾನ್ಸ್ ಜೆಂಡರ್'ನಂತೆ ಪರಿಗಣಿಸುತ್ತಿದೆ': ಸಿಎಂ ನಾರಾಯಣಸ್ವಾಮಿ ಅಸಮಾಧಾನ

‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ತಾರತಮ್ಯ ತೋರುತ್ತಿರುವ ಮೋದಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಫೆಡರಲಿಸಂಗೆ ಹಣಕಾಸಿನ ವಿಷಯದಲ್ಲಿ ಉದಯೋನ್ಮುಖ ಸವಾಲುಗಳು’ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೆಮಿನಾರ್ ನ್ನು ಉದ್ಘಾಟಿಸಿ,  ಸಿಎಂ ನಾರಾಯಣಸ್ವಾಮಿ ಮಾತನಾಡಿದರು. ಜಿಎಸ್ ಟಿ ಹಾಗೂ ಇತರೆ ಯೋಜನೆಗಳ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪುದುಚೇರಿಯನ್ನು ರಾಜ್ಯವಾಗಿ ಪರಿಗಣಿಸುತ್ತಿದೆ. ಆದರೆ ಇತರೆ ರಾಜ್ಯಗಳಿಗೆ ಮಾತ್ರ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದೆ. ಕೇಂದ್ರಾಡಳಿತ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರ, ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ ಎಂದು ಕಿಡಿಕಾರಿದರು.

ಪುದುಚೇರಿಗೆ ಅನುದಾನ ಮಂಜೂರು ಮಾಡುವಾಗ ಕೇಂದ್ರವು ವಿಭಿನ್ನ ನಿಲುವು ತಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ. ಪುದುಚೇರಿಯನ್ನು ಕೆಲ ಯೋಜನೆಗಳಿಗೆ ಕೇಂದ್ರ ಸರ್ಕಾರ ರಾಜ್ಯದಂತೆ ಪರಿಗಣಿಸುತ್ತಿದ್ದು, ಇತರರಿಗೆ ಕೇಂದ್ರಾಡಳಿತ ಪ್ರದೇಶವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಇದೊಂದು ವಿಚಿತ್ರ ವಿಧಾನ ಮತ್ತು ಅಸಹಾಯಕತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಪ್ರಾದೇಶಿಕ ಬಜೆಟ್ ಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪುದುಚೇರಿಯನ್ನು ನಿರ್ಲಕ್ಷಿಸುತ್ತಿದೆ. ಪುದುಚೇರಿಗೆ ಬರಬೇಕಿದ್ದ ಶೇ. 30ರಷ್ಟು ಅನುದಾನದಲ್ಲಿ ಶೇ. 26ಕ್ಕೆ ಅನುದಾನವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಸಮರ್ಪಕ ಬೆಂಬಲದ ಕೊರತೆಯಿಂದ ಉಚಿತ ಅಕ್ಕಿ ವಿತರಣೆ ಯೋಜನೆಯಲ್ಲಿ ಸಾಕಷ್ಟು ಅಡೆತಡೆ, ತೊಂದರೆಗಳನ್ನು ಪುದುಚೇರಿ ಅನುಭವಿಸುತ್ತಿದೆ. ಇನ್ನು ಲೆಫ್ಟಿನೆಂಟ್ ಗವರ್ನರ್ ಅವರ ಆಡಳಿತಾತ್ಮಕ ಅಡಚಣೆಗಳು ನಮಗೆ ಮುಜುಗರವನ್ನುಂಟು ಮಾಡಿವೆ ಎಂದು ಕೇಂದ್ರದ ಧೋರಣೆಯ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ಅಲ್ಲದೇ ಜಮ್ಮುಕಾಶ್ಮೀರ ಹಾಗೂ ಲಡಾಖ್ ನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಹಳೆಯ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯನ್ನು 15 ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರನ್ನಾಗಿ ಸೇರಿಸಿಕೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಮಾತನಾಡಿ, ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಸ್ತಕ್ಷೇಪ ಪುದುಚೇರಿಯಲ್ಲಿ ಪ್ರಜಾಪ್ರಭುತ್ವದ ಅಪಹಾಸ್ಯವಾಗುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದರು.

ಡಿಎಂಕೆ ಪಕ್ಷದ ಎಂ.ಕೆ.ಕನಿಮೋಳಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುತ್ತಿರುವ ಮತ್ತು ಪ್ರಗತಿಪರ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಧಾರಗಳು, ವರ್ತನೆ ಪ್ರಗತಿಪರ ರಾಜ್ಯಗಳಿಗೆ ಮಾರಕವಾಗಿವೆ. ಜಿಎಸ್ ಟಿ ಹೇರಿಕೆ ಮತ್ತು ಆರ್ಥಿಕ ನಷ್ಟದಿಂದ ಮತ್ತಷ್ಟು ಹಾನಿಯುಂಟಾಗಿದೆ. ತಿರುಪುರದಂತಹ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ತೆರಿಗೆ ವಿಧಿಸಿದ್ದರಿಂದ ಕೆಲ ಕೈಗಾರಿಕೆಗಳು ಬಾಗಿಲು ಹಾಕಿವೆ. ಉದ್ಯೋಗ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಿಳುನಾಡು ಸಿಪಿಐ (ಎಂ) ಕಾರ್ಯದರ್ಶಿ ಬಾಲಕೃಷ್ಣನ್ ಮಾತನಾಡಿ, ಕ್ಯಾಬಿನೆಟ್ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರಂತರ ಹಸ್ತಕ್ಷೇಪವಿದೆ. ಹೀಗಿದ್ದರೆ ಹುದ್ದೆಯ ಅಗತ್ಯವಿಲ್ಲ. ಎಲ್ಲವೂ ಸ್ವಯಂಚಾಲಿತವಾಗಿದೆ. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಬಹುಸಾಂಸ್ಕೃತಿಕ ಮತ್ತು ಬಹುಭಾಷೆ ಹಾಗೂ ವೈವಿಧ್ಯತೆಯನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...