Homeಮುಖಪುಟಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

- Advertisement -
- Advertisement -

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಿರಣ್ ಬೇಡಿಯವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ತೆಗೆದು ಹಾಕಿದ್ದಾರೆ. ಈ ಕುರಿತು ಎಎನ್‌ಐ ವರದಿ ಮಾಡಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದಾರೆ. ಹಾಗಾಗಿ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ.

ತಮಿಳಿಸೈ ಸೌಂದರರಾಜನ್ ಅವರು ತಮ್ಮ ಕೆಲಸಗಳೊಂದಿಗೆ ಈ ಹುದ್ದೆಯನ್ನೂ ನಿಭಾಯಿಸಬೇಕು ಎಂದು ರಾಷ್ಟ್ರಪತಿಗಳಿಂದ ಆದೇಶ ಬಂದಿದೆ. ಅವರು ಉಸ್ತುವಾರಿ ವಹಿಸಿಕೊಂಡ ದಿನದಿಂದ ಇದು ಜಾರಿಗೆ ಬರುತ್ತದೆ ಎಂದು ರಾಷ್ಟ್ರಪತಿ ಕ‍ಛೇರಿಯ ವಕ್ತಾರ ಅಜಯ್ ಕುಮಾರ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿಯಾಗಿರುವ ಕಿರಣ್ ಬೇಡಿ ಅವರು 2015ರ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದರು. 2016ರ ಮೇ 28ರಂದು ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿತ್ತು.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಜನವರಿಯಲ್ಲಿ ಆರೋಪಿಸಿದ್ದರು. ಬೇಡಿ ವಿರುದ್ಧ ಅಹೋರಾತ್ರಿ ಪ್ರತಿಭಟನೆಯನ್ನೂ ನಡೆಸಿದ್ದರು. ಪುದುಚೇರಿ ಕಲ್ಯಾಣ ಸಚಿವ ಎಂ.ಕಂದಸಾಮಿ ಕೂಡ ಬೇಡಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ನಾರಾಯಣಸ್ವಾಮಿ ಅವರು ಜನವರಿಯಲ್ಲಿ ಸಹಿ ಅಭಿಯಾನವನ್ನೂ ನಡೆಸಿದ್ದರು.

ಶಾಸಕ ಎ. ಜಾನ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ಸ್ಪೀಕರ್ ವಿ.ಪಿ. ಶಿವಕೋಲುಂಟು ಅವರಿಗೆ ಸಲ್ಲಿಸುವುದರೊಂದಿಗೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡಿದೆ. ಈ ಹಿಂದೆಯೆ ಆಡಳಿತ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದರು. ಅಲ್ಲಿ ಚುನಾವಣೆಗೆ ಇನ್ನೇನು ಕೆಲವೆ ತಿಂಗಳುಗಳು ಉಳಿದಿರುವಾಗ ಈ ರಾಜಕೀಯ ಬೆಳವಣಿಗೆ ಭಾರಿ ಅಚ್ಚರಿ ಮೂಡಿಸಿದೆ.

ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.

ಈ ಹಿನ್ನೆಲೆಯಲ್ಲಿ ಕಿರಣ್ ಬೇಡಿಯವರನ್ನು ಹುದ್ದೆಯಿಂದ ತೆಗೆದುಹಾಕಿರುವುದು ರಾಜಕೀಯ ಮಹತ್ವದ ಪ್ರಕ್ರಿಯೆಯಾಗಿದೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...