Homeಮುಖಪುಟಭಾವುಕ ಅನುಭವ ನೀಡುವ 'ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ' ಸಿನಿಮಾ: ಪ್ರೀತಿ ನಾಗರಾಜ್

ಭಾವುಕ ಅನುಭವ ನೀಡುವ ‘ಪುಕ್ಸಟ್ಟೆ ಲೈಫು, ಪುರ್‌ಸೊತ್ತೇ ಇಲ್ಲ’ ಸಿನಿಮಾ: ಪ್ರೀತಿ ನಾಗರಾಜ್

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ.

- Advertisement -
- Advertisement -

ಇದು ಸಿನಿಮಾವೋ ಅಥವಾ ಹೀಗೇ ಕಣ್ಣ ಮುಂದೆ ದೃಶ್ಯವಾದ ಸ್ನೇಹಿತನೇ ಕೂತು ಹೇಳುತ್ತಿರುವ ತಮಾಷೆಯ ಕಥೆಯೋ ಎಂದು ಗೊತ್ತಾಗುವ ಹೊತ್ತಿಗೆ ನೀವು ಸಿನಿಮಾದಲ್ಲಿ ಪೂರ್ತಿ ಇಳಿದುಹೋಗಿ ಇಂಟರ್ ವೆಲ್ ಬಂದಿರುತ್ತದೆ. ಆಗ ಸಿನಿಮಾ ಹಾಲ್ ನಲ್ಲಿ ಬರುವ ಮಂದ ಬೆಳಕೂ ಕಣ್ಣಿಗೆ ಕೋರೈಸಿದಂತೆ ಅನ್ನಿಸಿ ಸುತ್ತ ಮುತ್ತ ಇರುವ ಪರಿಚಿತರ ಮುಖ ನೋಡಲು ಪ್ರಯತ್ನ ಮಾಡಿದರೆ ಕೆಲವರ ಕಣ್ಣಿನಲ್ಲಾದರೂ ನೀರು ಕಂಡು ನಿಮ್ಮ ಕಣ್ಣಲ್ಲೂ ನೀರು ಉಕ್ಕುವ ಸಾಧ್ಯತೆ ಬಹಳಷ್ಟಿದೆ. ನೋಡಲು ಸುಲಲಿತವೆನ್ನಿಸಿದರೂ ಆಳವಾದ, ಸಂಕೀರ್ಣ ಅಭಿನಯ ಸಂಚಾರಿ ವಿಜಯ್ ಅವರದ್ದು.

ಡೂಪ್ಲಿಕೇಟ್ ಬೀಗ ಮಾಡುವ ಹುಡುಗನೊಬ್ಬನಿಗೆ ಪೋಲಿಸರ ಸಹವಾಸವಾಗಿ ಅವರ ಮೆಗಾ ಪ್ಲಾನಿನ ಭಾಗವಾಗಿ ಕಳ್ಳತನಕ್ಕೆ ಇಳಿದು ನಂತರ ತನ್ನದೇ ಬದುಕಿನ ಅನಿವಾರ್ಯತೆಗಳಿಗೆ ತೆರೆದುಕೊಂಡು ಕೆಲವು ತಪ್ಪು ಅನ್ನಿಸುವಂಥ ನಿರ್ಧಾರವನ್ನು ತೆಗೆದುಕೊಳ್ಳುವ ಕಥೆ ಇದು. ಎಲ್ಲೂ ನೈತಿಕತೆಯ ಅನವಶ್ಯಕ ಪಾಠವಿಲ್ಲ. ಎಲ್ಲರೂ ಮನುಷ್ಯರೇ, ತಪ್ಪು-ಒಪ್ಪುಗಳನ್ನು ಒಳಗೊಂಡವರೇ ಎನ್ನುವುದು ಧ್ಯೇಯ ವಾಕ್ಯ ಅಂತ ನನಗೆ ಅನ್ನಿಸಿತು.

ಮೊದಮೊದಲಿಗೆ ತುಟಿ ಬಿರಿಸುವಷ್ಟೇ ತಮಾಷೆ ಅನ್ನಿಸಿದರೂ ನಂತರ ಕ್ಯಾರೆಕ್ಟರುಗಳು ಮನಸ್ಸಿನಲ್ಲಿ ಇಳಿದು ನಗುವೇ ಅಭಿವ್ಯಕ್ತಿಯ ಭಾಗವಾಗುತ್ತದೆ. ಕಥೆಯೇ ಸ್ವತಂತ್ರವಾಗಿ ನಿಲ್ಲುವುದು ಪಾತ್ರಗಳ ಮೂಲಕ ಮಾತ್ರ. ಹಾಗಾಗಿ ಸಿನಿಮಾದಲ್ಲಿ ಡ್ರೋನ್ ಶಾಟ್ ಗಳು ಹೆಚ್ಚು ಬಳಕೆಯಾಗಿದ್ದು ಬಿಟ್ಟರೆ ಹೆಚ್ಚು ಟೈಟ್ ಫ್ರೇಮುಗಳ ಬಳಕೆ ಇದೆ. ರಂಗಭೂಮಿಯ ಹಿನ್ನೆಲೆ ಇರುವ ಬಹಳ ಜನ ಇದರಲ್ಲಿ ಪಾತ್ರ ಮಾಡಿರುವುದರಿಂದ ಚಿತ್ರ ಎಲ್ಲೂ ಅರೆಬರೆ ಅನ್ನಿಸುವುದಿಲ್ಲ. ಇದಕ್ಕೆ ಉತ್ತಮ ನಟರ ಅಭಿನಯ ಇರುವುದೂ ಕೂಡ ಒಂದು ಮುಖ್ಯ ಕಾರಣ ಇರಬಹುದು. ಎಲ್ಲಿಯೂ ಸಿನಿಮಾ ಕನಸು ಅನ್ನಿಸದೆ ನಮ್ಮ ಪಕ್ಕವೇ ನಡೆದುಹೋಗುತ್ತದೆ.

ರಂಗಾಯಣ ರಘು ಅವರ ಪಾತ್ರ ಒಂದು ಸರ್ಪ್ರೈಸ್ ಅಂಶ. ಅವರು ತೆರೆಯ ಮೇಲೆ ಕಂಡಾಗಿನಿಂದ ಇನ್ನೇನು ನಗಿಸುತ್ತಾರೆ ಈಗಲೇ ಒಂದು ಜೋಕು ಬೀಳಬಹುದು ಅಂತ ನಿರೀಕ್ಷೆ ಇಟ್ಟುಕೊಂಡರೆ ಅಚ್ಚರಿ ಆಗೋದು ಖಂಡಿತ. ಇನ್ಸ್ಪೆಕ್ಟರ್ ಪಾತ್ರ ಮಾಡಿರುವ ಅಚ್ಯುತ್ ಕುಮಾರ್ ಅವರಿಂದ ಹಿಡಿದು ದೊಡ್ಡಪ್ಪ, ಪೀಸಿ ಮೋಹನ, ವಿನಯ್ ಮಲ್ಯ (ಸ್ವತಃ ನಿರ್ದೇಶಕರೇ ಈ ರೋಲ್ ಮಾಡಿದ್ದಾರೆ) ಮಹಿಳಾ ಇನ್ಸ್ಪೆಕ್ಟರು, ಕಾನ್ಸ್ಟೇಬಲ್ಲು, ಸಣ್ಣ ಪಾತ್ರಗಳಾದ ರೈಟರು, ಅರ್ಚಕರು, ಅವರ ಮಗ, ಶಹಜಹಾನನ (ಸಂಚಾರಿ ವಿಜಯ್) ತಮ್ಮ, ಜಡ್ಜ್, ಹೀಗೆ ಹತ್ತು ಹಲವಾರು ಜನ ಹೀಗೆ ಬಂದು ಹಾಗೆ ಹೋದರೂ ಮನಸ್ಸಿನಲ್ಲಿ ನಿಲ್ಲುತ್ತಾರೆ. ಹಾಡುಗಳು ಯಾವುದೇ ಸ್ವತಂತ್ರ ನೆಲೆಯ ಮೇಲೆ ನಿಲ್ಲದೆ ಒಂದು ತೆಳುಭಾವವೊಂದಿಗೆ ಕಥೆಯೊಂದಿಗೆ ಬೆರೆತು ಹೋಗುತ್ತವೆ. ಶಹಜಹಾನ್ ಮತ್ತು ಲಾಯರ್ ನಾಯಕಿಯ ಪ್ರೇಮ ಅವಸರದಲ್ಲಿ ಕೊನೆಗಾಣುತ್ತದೆ ಎನ್ನಿಸಿದರೂ ಆ ಕಥೆ ಈ ಕಥೆಯ ಒಳಗೆ ಹೊಂದದೆ ಸಿನಿಮಾ ದಿಕ್ಕಾಪಾಲಾಗಿ ಹೋಗಬಹುದು ಎನ್ನುವ ಕಾರಣಕ್ಕೆ ಅಂತ್ಯ ’ಓಪನ್’ ಉಳಿದಿದೆ ಎನ್ನಿಸುತ್ತದೆ. ಎಲ್ಲಿಯೂ ಐಟಂ ಸಾಂಗುಗಳು, ದೇಹ ಪ್ರದರ್ಶನ ಅಥವಾ ’ಆಡಿಯೆನ್ಸ್ ಕೇಳ್ತರೆ’ ಎಂದು ಸಮರ್ಥಿಸಿಕೊಳ್ಳಬೇಕಾದ ಕೊಳಕು ಮಾರುಕಟ್ಟೆ ಸರಕುಗಳಿಲ್ಲದಿದ್ದಾಗಲೂ (ಅಥವಾ ಇಲ್ಲ ಅಂತಲೇ) ಸಿನಿಮಾ ಬೆಳಗುತ್ತದೆ.

ನಾಯಕತ್ವದ ಭರಾಟೆಯಲ್ಲಿ ಏಕಮುಖವಾಗಿ ಕಳೆದುಹೋಗಿರುವ ಕನ್ನಡ ಚಿತ್ರರಂಗಕ್ಕೆ ಪುಕ್ಸಟ್ಟೆ ಲೈಫು ಹೊಸ ಬಗೆಯ ವ್ಯಾಖ್ಯಾನ ತರುವ ಸಿನಿಮಾ. ನಿರ್ದೇಶಕ ಅರವಿಂದ ಕುಪ್ಲೀಕರ್, ಸಿನಿಮಾ ಛಾಯಾಗ್ರಾಹಕ ಅದ್ವೈತ ಗುರುಮೂರ್ತಿ, ಚಟುವಟಿಕೆಯ ಸಂಕಲನ ಮಾಡಿರುವ ಸುರೇಶ್ ಆರ್ಮುಗಂ, ವಾಸು ದೀಕ್ಷಿತ್ ಅವರ ಸಂಗೀತ ಇವೆಲ್ಲವೂ ಸಿನಿಮಾವನ್ನು ಒಂದು ಚಂದದ ಅನುಭವವನ್ನಾಗಿಸಿವೆ.

ಇದರಲ್ಲಿ ಹೀಗೆ ಬೇಸಗೆಯ ದಿನದಲ್ಲಿ ಸಿಗುವ ಹದ ಸಿಹಿ ಹದ ತಂಪು ಎಳನೀರಿನ ಹಾಗೆ ಸೊಗಡಿನಿಂದ ನಟಿಸಿರುವ ಸಂಚಾರಿ ವಿಜಯ್ ನಮ್ಮ ನಡುವೆ ಇಲ್ಲ ಅನ್ನುವುದು ಸಿನಿಮಾದ ಉದ್ದಕ್ಕೂ ಒಂದು ಬಗೆಯಲ್ಲಿ ಅಂಗಾಲಿಗೆ ಒತ್ತಿದ ಮುಳ್ಳಿನ ಹಾಗೆ ಹೆಜ್ಜೆ ಇಟ್ಟಾಗಲೆಲ್ಲಾ ನೆನಪಾಗುವ ಒಂದು ತೀವ್ರ ನೋವು. ಎಂಥಾ ನಟ, ಎಂಥಾ ಭವಿಷ್ಯದ ಕನಸು ಕಾಣುತ್ತಿದ್ದ ಪ್ರತಿಭಾವಂತ… ಹೀಗೆ ಹೋಗಿಬಿಟ್ಟರಲ್ಲಾ ಎನ್ನುವುದು ಚಿತ್ರರಂಗಕ್ಕೆ ನಿಜಕ್ಕೂ ತುಂಬಲಾಗದ ನಷ್ಟವೇ.

ನನ್ನ ಮಟ್ಟಿಗೆ ಈ ಸಿನಿಮಾ ಒಂದು ಭಾವುಕ ಅನುಭವ. ಈ ಸಿನಿಮಾದ ನಿರ್ದೇಶಕ ಅರವಿಂದ ನನ್ನ ಎಳೆಯ ಸ್ನೇಹಿತ. ಬೆಂಗಳೂರಿನ ರಂಗಭೂಮಿಯ ದಿನಗಳಲ್ಲಿ ಬಿ ಜಯಶ್ರೀ ಅವರ ಸ್ಪಂದನ ತಂಡಕ್ಕೆ ನಾನು ಸೇರಲು ಹೋದಾಗ ಅರವಿಂದ ಚಿಕ್ಕವನಾದರೂ ಅತ್ಯಂತ ಜವಾಬ್ದಾರಿ ಹೊಂದಿದವನೂ, ಜೊತೆಗೆ ಮಹಾ ಕೀಟಲೆ ಸ್ವಭಾವದ ಹುಡುಗನಾಗಿದ್ದ. ರಂಗಭೂಮಿಯಲ್ಲಿ ತೀವ್ರ ತೊಡಗುವಿಕೆ, ಅಂದಿನ ಎಳೆಯರಲ್ಲಿ ಆಗಲೇ ಮರೆಯಾಗುತ್ತಿದ್ದ ರಂಗಭೂಮಿಯ ಆಕರ್ಷಣೆ ಟೀವಿ ಸಿನಿಮಾದ ಕಡೆ ಸೆಳೆಯುತ್ತಿದ್ದಾಗಲೂ ರಂಗವನ್ನು ಬಿಟ್ಟು ಕದಲದೆ ಧ್ಯಾನಸ್ಥ ರೀತಿಯಲ್ಲಿ ತೊಡಗಿಕೊಂಡು ನಂತರ ತನ್ನ ದಾರಿಯನ್ನು ಟೀವಿಯಲ್ಲಿ, ನಂತರ ಸಿನಿಮಾ ಅಭ್ಯಾಸದಲ್ಲಿ ನಂತರ ಸಿನಿಮಾದಲ್ಲಿ ಶೋಧಿಸಿದವ. ಇಂಥಾ ಅರವಿಂದ ಎಲ್ಲಿ ಹೆಜ್ಜೆ ಇಟ್ಟರೂ ನನ್ನಂಥ ಹಲವರಿಗೆ ಅದು ಸಂಭ್ರಮ. ಈ ವಿಷಯದಲ್ಲಿ ನಾನು ಪಕ್ಷಪಾತಿ.

ಈ ಚಿತ್ರ ನನಗಂತೂ ಹೊಸ ಭರವಸೆಯ ನಿರ್ದೇಶಕರನ್ನು, ತಂಡವನ್ನು ಕೊಟ್ಟಿದೆ ಎನ್ನಿಸುತ್ತದೆ. ಎಲ್ಲರಿಗೂ ಶುಭವಾಗಲಿ. ನಿಮ್ಮ ನೋವಿನ ನಡುವೆಯೂ ನಮ್ಮನ್ನು ನಗಿಸಿದ್ದೀರಿ. ನಿಮ್ಮ ಮುಂದಿನ ಹೆಜ್ಜೆ ಸುಗಮವಾಗಿ ಸಾಗಲಿ. ಕನ್ನಡ ಪ್ರೇಕ್ಷಕರಿಗೆ ಉತ್ತಮ ಚಿತ್ರಗಳನ್ನು ನೀವು ಕೊಡುವಂತಾಗಲಿ. ಜನ ಮತ್ತೆ ಬೆಳ್ಳಿ ತೆರೆಯತ್ತ ಬರುವಂತಾಗಲಿ.

***

PS: ಮನಸ್ಸಿಗೆ ಕಚುಗುಳಿ ಕೊಟ್ಟ ಇನ್ನೊಂದು ಅಂಶ. ಶಹಜಹಾನನ ಲೂನಾ. ಬೆನ್ನು ಬಗ್ಗಿಸಿ ಭರ್ರ್ರ್ರ್ರ್ ಎಂದು ಲಾರಿ ಹೋದ ಹಾಗೆ ಹೋಗುವ ಇಂದಿನ ಬೈಕುಗಳಿಗೂ ಇರದ ಚಾರ್ಮ್ ಅಂದಿನ ದಿನದ ಲೂನಾಕ್ಕೆ ಇತ್ತು. ಓದುವ ಹುಡುಗರಿಗೆ ಲೂನಾ ಸಿಕ್ಕರೆ ಟ್ಯೂಷನ್‌ಗೆ ಹೋಗುತ್ತಾರೆಂತಲೂ, ಓದದ ಹುಡುಗರಿಗೆ ಈ ಗಾಡಿ ಸಿಕ್ಕರೆ ಹುಡುಗಿಯರ ಹಿಂದೆ ತಿರುಗುತ್ತಾರೆಂತಲೂ ಅರ್ಥ ಆಗುತ್ತಿತ್ತು. ಇನ್ನು ಹುಡುಗಿಯರು ಲೂನಾ ಹಿಡಿದರೆ ಏನೆಂದು ಅರ್ಥ ಎನ್ನುವುದನ್ನ ಅಂದಿನ ಹುಡುಗರು ಹೇಳ್ಬೇಕು.

ಸಿನಿಮಾಕ್ಕೆ ಬಹಳ ಉತ್ತಮ ಸಬ್ ಟೈಟಲಿಂಗ್ ಆಗಿದೆ. ಇದು ಒಂದು ಸಿನಿಮಾ ಕರ್ನಾಟಕದ ಗಡಿ ದಾಟಿ ಹೋಗಲು ಎಷ್ಟು ಮುಖ್ಯ ಎನ್ನುವುದನ್ನು ನಿರ್ದೇಶಕರು ನಿರ್ಮಾಪಕರು ಅರಿತುಕೊಂಡರೆ ಉತ್ತಮ ಕನ್ನಡ ಸಿನಿಮಾಗಳು ರಾಜ್ಯದಿಂದ ಹೊರಗೆ ಹೋಗಿ ವಿಜೃಂಭಿಸಬಲ್ಲವು.

  • ಪ್ರೀತಿ ನಾಗರಾಜ್

(ಬರಹಗಾರರಾದ ಪ್ರೀತಿ ನಾಗರಾಜ್‌ರವರು ಇಂಡಿಯನ್‌ ಎಕ್ಸ್‌ಪ್ರೆಸ್‌, ಡೆಕ್ಕನ್‌ ಹೆರಾಲ್ಡ್‌ ಹಾಗೂ ಸಿಎನ್‌ಬಿಸಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ಹಲವು ಪತ್ರಿಕೆಗಳಿಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿರುವ ಇವರಿಗೆ ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ.)


ಇದನ್ನೂ ಓದಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...